AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬದಂದೇ ಹೆಲ್ತ್ ಇನ್ಸ್‌ಪೆಕ್ಟರ್​​ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಲ್ತ್ ಇನ್ಸ್‌ಪೆಕ್ಟರ್​​​​ ಒಬ್ಬರ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಹುಟ್ಟುಹಬ್ಬದ ದಿನದಂದೇ ಆತ್ಮಹತ್ಯೆಗೆ ಶರಣಾದರಾ ಎಂಬ ಅನುಮಾನಗಳು ಹುಟ್ಟುಕೊಂಡಿವೆ. ಮಗಳು ದೂರು ನೀಡಿದ ಬಳಿಕ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಹುಟ್ಟುಹಬ್ಬದಂದೇ ಹೆಲ್ತ್ ಇನ್ಸ್‌ಪೆಕ್ಟರ್​​ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ
ಪ್ರಾತಿನಿಧಿಕ ಚಿತ್ರImage Credit source: ipleaders
ಶಿವಪ್ರಸಾದ್​ ಬಿ.
| Edited By: |

Updated on: Mar 30, 2026 | 10:41 PM

Share

ತುಮಕೂರು, ಮಾರ್ಚ್​ 30: ಖಾಸಗಿ ಜಾಗವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಹೆಲ್ತ್ ಇನ್ಸ್‌ಪೆಕ್ಟರ್ (Food Inspector)​​​ ಶವ ಪತ್ತೆ (Death) ಆಗಿರುವಂತಹ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಾವರೆಕೆರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಮೇಶ್​​ ಮೃತ ಹೆಲ್ತ್ ಇನ್ಸ್‌ಪೆಕ್ಟರ್. ಹುಟ್ಟುಹಬ್ಬದ ದಿನವೇ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದ್ದು, ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಸಾವಿನ ಬಗ್ಗೆ ದೂರು ನೀಡಿದ ಬಳಿಕ ಪೊಲೀಸರು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ.

ನಡೆದಿದ್ದೇನು?

ವರ್ಷದ ಹಿಂದೆ ಸ್ಕ್ಯಾವೆಂಜರ್ ಆಕ್ಟ್ ಅಡಿ ಉಮೇಶ್​ ಅಮಾನತಾಗಿದ್ದರು. ನಾಲ್ಕು ತಿಂಗಳ ಬಳಿಕ ಮತ್ತೆ ಹೆಲ್ತ್ ಆಫೀಸರ್​​ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಪ್ರಸ್ತುತ ಹುಲಿಕುಂಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆ ಆಗಿದೆ. ಅದರಲ್ಲೂ ಹುಟ್ಟುಹಬ್ಬದ ದಿನದಂದೇ ಹೀಗಾಗಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇದನ್ನೂ ಓದಿ: ಹಸುಗೂಸಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ತಾಯಿ ಸಾವು: ಮಹಿಳಾ ಉದ್ಯೋಗಿ ಸಾವಿನ ಸುತ್ತ ಅನುಮಾನದ ಹುತ್ತ

ಸದ್ಯ ಸ್ಥಳಕ್ಕೆ ತಾವರೇಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತರ ಕುಟುಂಬಸ್ಥರ ದೂರಿಗಾಗಿ ಕಾಯುತ್ತಿದ್ದಾರೆ. ಇನ್ನು ತಂದೆಯ ಸಾವಿನ ಸಂಗತಿ ತಿಳಿದು ಉತ್ತರ ಭಾರತದಿಂದ ಉಮೇಶ್ ಅವರ ಮಗಳು ಬರುತ್ತಿದ್ದಾರೆ. ಮಗಳು ಬಂದ ನಂತರ ಸಾವಿನ ಬಗ್ಗೆ ದೂರು ನೀಡಿದ ಬಳಿಕ ಪೊಲೀಸರು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ.

ನಿಯಂತ್ರಣ ತಪ್ಪಿ ಬೈಕ್​ನಿಂದ ಬಿದ್ದು ಇಬ್ಬರು ಸವಾರರ ಸಾವು

ನಿಯಂತ್ರಣ ತಪ್ಪಿ ಬೈಕ್​ನಿಂದ ಬಿದ್ದು ಇಬ್ಬರು ಸವಾರರು ಸಾವನ್ನಪ್ಪಿರುವಂತಹ ಘಟನೆ ತುಮಕೂರು ತಾಲೂಕಿನ ನಾಗವಲ್ಲಿ ಗ್ರಾಮದ ಬಳಿ ನಡೆದಿದೆ. ರಂಗನಾಥಪುರದ ಪ್ರಸಾದ್(20) ಮತ್ತು ವಸಂತ್(22) ಮೃತರು.

ಇದನ್ನೂ ಓದಿ: ಪ್ರತ್ಯೇಕ ಘಟನೆ: ರಜೆ ತಂದ ಆಪತ್ತು; ಈಜಲು ತೆರಳಿದ್ದ ಐವರು ಬಾಲಕರು ನೀರುಪಾಲು

ರಂಗನಾಥಪುರದಿಂದ ತುಮಕೂರು ಕಡೆಗೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ತೀವ್ರ ರಕ್ತಸ್ರಾವವಾಗಿ ಪ್ರಸಾದ್, ವಸಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್