AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ತುಮಕೂರು ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಗೊರವನಹಳ್ಳಿ ಬಳಿ ಇರುವ ತೀತಾ ಸೇತುವೆ ಸಂಪೂರ್ಣ ಕುಸಿತ

ಕೊರಟಗೆರೆ ತಾಲೂಕಿನಲ್ಲಿ ಭಾರೀ ಮಳೆಯಿಂದ ಗೊರವನಹಳ್ಳಿ ಬಳಿ ಇರುವ ತೀತಾ ಸೇತುವೆ ಕುಸಿತಗೊಂಡಿದೆ.

Karnataka Rain: ತುಮಕೂರು ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಗೊರವನಹಳ್ಳಿ ಬಳಿ ಇರುವ ತೀತಾ ಸೇತುವೆ ಸಂಪೂರ್ಣ ಕುಸಿತ
ಸೇತುವೆ ಕುಸಿತ
TV9 Web
| Edited By: |

Updated on:Aug 27, 2022 | 2:33 PM

Share

ತುಮಕೂರು: ಕೊರಟಗೆರೆ ತಾಲೂಕಿನಲ್ಲಿ ಭಾರೀ ಮಳೆಯಿಂದ (Rain) ಗೊರವನಹಳ್ಳಿ ಬಳಿ ಇರುವ ತೀತಾ ಸೇತುವೆ (Bridge) ಕುಸಿತಗೊಂಡಿದೆ. ಇದರಿಂದ ಕೊರಟಗೆರೆ, ಗೊರವನಹಳ್ಳಿ, ತೀತಾ, ತೊಂಡೆಬಾವಿ ರಸ್ತೆ ಬಂದಾಗಿದೆ. ನಿನ್ನೆ ಬೆಳಿಗ್ಗೆ ಅರ್ಧ ಭಾಗ ಕುಸಿದಿತ್ತು ಹೀಗಾಗಿ ಕೊರಟಗೆರೆ ಶಾಸಕ ಮಾಜಿ ಡಿಸಿಎಂ ಜಿ. ಪರಮೇಶ್ವರ್ (G Parmeshwara) ಭೇಟಿ ನೀಡಿ ವೀಕ್ಷಿಸಿದ್ದರು.

ಜಿ. ಪರಮೇಶ್ವರ್ ವೀಕ್ಷಿಸಿ ತರೆಳಿದ ಐದೇ ನಿಮಿಷದಕ್ಕೆ ಸಂಜೆ ವೇಳೆಗೆ ಸಂಪೂರ್ಣ ಕುಸಿತವಾಗಿದೆ. ಈ ಸಂಬಂಧ ಪಿಡಬ್ಲುಡಿ ಇಲಾಖೆ ಸದ್ಯ ಎರಡು ಕಡೆ ಓಡಾಟಕ್ಕೆ ಮಣ್ಣಿನ ದಿಬ್ಬ ಹೇರಿ ನಿರ್ಬಂಧ ಹೇರಿದೆ. ಇದರಿಂದ ಜನರು ಮತ್ತು ವಿದ್ಯಾರ್ಥಿಗಳು ಕೊರಟಗೆರೆ, ತುಮಕೂಗೆ 15 ಕಿಲೋಮೀಟರ್ ಸುತ್ತುವರಿದು ಬರಬೇಕಿದೆ.

ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಮಾಜಿ ಡಿಸಿಎಂ ಪರಮೇಶ್ವರ್

ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಸ್ವಲ್ಪದರಲ್ಲೇ ಭಾರಿ ಅನಾಹುತದಿಂದ ಪಾರಾಗಿದ್ದಾರೆ. ನಿನ್ನೆ (ಆ 26) ಪರಮೇಶ್ವರ್ ಅರ್ಧ ಕುಸಿದಿದ್ದ ತೀತಾ-ಗೊರವನಹಳ್ಳಿ ಸೇತುವೆಗೆ ಭೇಟಿ ನೀಡಿದ್ದರು, ಭೇಟಿ ನೀಡಿ  5 ನಿಮಿಷದ ಬಳಿಕ  ಸೇತುವೆ ಕುಸಿತಗೊಂಡಿದೆ. ತೀತಾ ಸೇತುವೆ (ಆ 25) ರಾತ್ರಿ ಸುರಿದ ಮಳೆಗೆ, ಶುಕ್ರವಾರ ಮುಂಜಾನೆ ಸೇತುವೆ ಅರ್ಧ ಕುಸಿದಿತ್ತು.

ಸೇತುವೆ ಕುಸಿತ ಹಿನ್ನೆಲೆ ಶುಕ್ರವಾರ ಸಂಜೆ ಡಾ.ಜಿ ಪರಮೇಶ್ವರ್ ಭೇಟಿ ನೀಡಿದ್ದರು. ಭೇಟಿ ವೇಳೆ ಸೇತುವೆ ಮೇಲೆ ನಿಂತು ಸೇತುವೆ ಕುಸಿತವನ್ನು ವೀಕ್ಷಿಸಿದ್ದರು. ಸೇತುವೆ ವೀಕ್ಷಿಸಿ ಮುಂದೆ ಹೋದ 5 ನಿಮಿಷಕ್ಕೆ ಸೇತುವೆಯ ಇನ್ನೊಂದು ಭಾಗ ಕುಸಿತಗೊಂಡಿದ್ದು, ಪರಮೇಶ್ವರ್ ನಿಂತು ವೀಕ್ಷಿಸಿದ್ದ ಸ್ಥಳವೂ ಕುಸಿತಗೊಂಡಿತ್ತು. ಡಾ.ಜಿ.ಪರಮೇಶ್ವರ್ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದರು. ಸದ್ಯ ಸಂಪೂರ್ಣ ಸೇತುವೆ ಕುಸಿತಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Sat, 27 August 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ