AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ತುಮಕೂರು ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಗೊರವನಹಳ್ಳಿ ಬಳಿ ಇರುವ ತೀತಾ ಸೇತುವೆ ಸಂಪೂರ್ಣ ಕುಸಿತ

ಕೊರಟಗೆರೆ ತಾಲೂಕಿನಲ್ಲಿ ಭಾರೀ ಮಳೆಯಿಂದ ಗೊರವನಹಳ್ಳಿ ಬಳಿ ಇರುವ ತೀತಾ ಸೇತುವೆ ಕುಸಿತಗೊಂಡಿದೆ.

Karnataka Rain: ತುಮಕೂರು ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಗೊರವನಹಳ್ಳಿ ಬಳಿ ಇರುವ ತೀತಾ ಸೇತುವೆ ಸಂಪೂರ್ಣ ಕುಸಿತ
ಸೇತುವೆ ಕುಸಿತ
TV9 Web
| Edited By: ವಿವೇಕ ಬಿರಾದಾರ|

Updated on:Aug 27, 2022 | 2:33 PM

Share

ತುಮಕೂರು: ಕೊರಟಗೆರೆ ತಾಲೂಕಿನಲ್ಲಿ ಭಾರೀ ಮಳೆಯಿಂದ (Rain) ಗೊರವನಹಳ್ಳಿ ಬಳಿ ಇರುವ ತೀತಾ ಸೇತುವೆ (Bridge) ಕುಸಿತಗೊಂಡಿದೆ. ಇದರಿಂದ ಕೊರಟಗೆರೆ, ಗೊರವನಹಳ್ಳಿ, ತೀತಾ, ತೊಂಡೆಬಾವಿ ರಸ್ತೆ ಬಂದಾಗಿದೆ. ನಿನ್ನೆ ಬೆಳಿಗ್ಗೆ ಅರ್ಧ ಭಾಗ ಕುಸಿದಿತ್ತು ಹೀಗಾಗಿ ಕೊರಟಗೆರೆ ಶಾಸಕ ಮಾಜಿ ಡಿಸಿಎಂ ಜಿ. ಪರಮೇಶ್ವರ್ (G Parmeshwara) ಭೇಟಿ ನೀಡಿ ವೀಕ್ಷಿಸಿದ್ದರು.

ಜಿ. ಪರಮೇಶ್ವರ್ ವೀಕ್ಷಿಸಿ ತರೆಳಿದ ಐದೇ ನಿಮಿಷದಕ್ಕೆ ಸಂಜೆ ವೇಳೆಗೆ ಸಂಪೂರ್ಣ ಕುಸಿತವಾಗಿದೆ. ಈ ಸಂಬಂಧ ಪಿಡಬ್ಲುಡಿ ಇಲಾಖೆ ಸದ್ಯ ಎರಡು ಕಡೆ ಓಡಾಟಕ್ಕೆ ಮಣ್ಣಿನ ದಿಬ್ಬ ಹೇರಿ ನಿರ್ಬಂಧ ಹೇರಿದೆ. ಇದರಿಂದ ಜನರು ಮತ್ತು ವಿದ್ಯಾರ್ಥಿಗಳು ಕೊರಟಗೆರೆ, ತುಮಕೂಗೆ 15 ಕಿಲೋಮೀಟರ್ ಸುತ್ತುವರಿದು ಬರಬೇಕಿದೆ.

ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಮಾಜಿ ಡಿಸಿಎಂ ಪರಮೇಶ್ವರ್

ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಸ್ವಲ್ಪದರಲ್ಲೇ ಭಾರಿ ಅನಾಹುತದಿಂದ ಪಾರಾಗಿದ್ದಾರೆ. ನಿನ್ನೆ (ಆ 26) ಪರಮೇಶ್ವರ್ ಅರ್ಧ ಕುಸಿದಿದ್ದ ತೀತಾ-ಗೊರವನಹಳ್ಳಿ ಸೇತುವೆಗೆ ಭೇಟಿ ನೀಡಿದ್ದರು, ಭೇಟಿ ನೀಡಿ  5 ನಿಮಿಷದ ಬಳಿಕ  ಸೇತುವೆ ಕುಸಿತಗೊಂಡಿದೆ. ತೀತಾ ಸೇತುವೆ (ಆ 25) ರಾತ್ರಿ ಸುರಿದ ಮಳೆಗೆ, ಶುಕ್ರವಾರ ಮುಂಜಾನೆ ಸೇತುವೆ ಅರ್ಧ ಕುಸಿದಿತ್ತು.

ಸೇತುವೆ ಕುಸಿತ ಹಿನ್ನೆಲೆ ಶುಕ್ರವಾರ ಸಂಜೆ ಡಾ.ಜಿ ಪರಮೇಶ್ವರ್ ಭೇಟಿ ನೀಡಿದ್ದರು. ಭೇಟಿ ವೇಳೆ ಸೇತುವೆ ಮೇಲೆ ನಿಂತು ಸೇತುವೆ ಕುಸಿತವನ್ನು ವೀಕ್ಷಿಸಿದ್ದರು. ಸೇತುವೆ ವೀಕ್ಷಿಸಿ ಮುಂದೆ ಹೋದ 5 ನಿಮಿಷಕ್ಕೆ ಸೇತುವೆಯ ಇನ್ನೊಂದು ಭಾಗ ಕುಸಿತಗೊಂಡಿದ್ದು, ಪರಮೇಶ್ವರ್ ನಿಂತು ವೀಕ್ಷಿಸಿದ್ದ ಸ್ಥಳವೂ ಕುಸಿತಗೊಂಡಿತ್ತು. ಡಾ.ಜಿ.ಪರಮೇಶ್ವರ್ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದರು. ಸದ್ಯ ಸಂಪೂರ್ಣ ಸೇತುವೆ ಕುಸಿತಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Sat, 27 August 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ