AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hijab Row: ಹಿಜಾಬ್ ಧರಿಸಿ ಕಾಲೇಜಿಗೆ ಹೋಗುತ್ತಿದ್ದ ಉಪನ್ಯಾಸಕಿ ರಾಜೀನಾಮೆ

ಪ್ರತಿನಿತ್ಯ ಹಿಜಾಬ್ ಧರಿಸಿ ಕಾಲೇಜಿಗೆ ಹೋಗುತ್ತಿದ್ದರು. ಆದರೆ, ಇದೀಗ ಹಿಜಾಬ್ ವಿವಾದ ತಾರಕಕ್ಕೇರಿದ ಪರಿಣಾಮ ರಾಜೀನಾಮೆ ನೀಡಿದ್ದಾರೆ. ಜೈನ್ ಕಾಲೇಜಿನ ಅತಿಥಿ ಉಪನ್ಯಾಸಕ ಹುದ್ದೆಗೆ ರಾಜೀನಾಮೆ ನೀಡಲಾಗಿದೆ ಎಂದು ತಿಳಿದುಬಂದಿದೆ.

Hijab Row: ಹಿಜಾಬ್ ಧರಿಸಿ ಕಾಲೇಜಿಗೆ ಹೋಗುತ್ತಿದ್ದ ಉಪನ್ಯಾಸಕಿ ರಾಜೀನಾಮೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Feb 17, 2022 | 9:25 PM

Share

ತುಮಕೂರು: ಹಿಜಾಬ್ ವಿವಾದ ತಾರಕಕ್ಕೇರಿದ್ದಕ್ಕೆ ಉಪನ್ಯಾಸಕಿ ರಾಜೀನಾಮೆ ನೀಡಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತಿಪಟೂರು ಮೂಲದ ಅತಿಥಿ ಉಪನ್ಯಾಸಕಿ ಚಾಂದಿನಿ ರಿಸೈನ್​ ಹಿಜಾಬ್ ವಿವಾದ (Hijab Row) ಕಾರಣದಿಂದ ರಾಜೀನಾಮೆ ನೀಡಿದ್ದಾರೆ. ಚಾಂದಿನಿ ತುಮಕೂರಿನ ಕೆಲ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದರು. ಪ್ರತಿನಿತ್ಯ ಹಿಜಾಬ್ ಧರಿಸಿ ಕಾಲೇಜಿಗೆ ಹೋಗುತ್ತಿದ್ದರು. ಆದರೆ, ಇದೀಗ ಹಿಜಾಬ್ ವಿವಾದ ತಾರಕಕ್ಕೇರಿದ ಪರಿಣಾಮ ರಾಜೀನಾಮೆ ನೀಡಿದ್ದಾರೆ. ಜೈನ್ ಕಾಲೇಜಿನ ಅತಿಥಿ ಉಪನ್ಯಾಸಕ ಹುದ್ದೆಗೆ ರಾಜೀನಾಮೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಹಲವೆಡೆ ಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ: SDPI ರಾಜ್ಯಾಧ್ಯಕ್ಷ ಹೇಳಿಕೆ

ಕಾಲೇಜುಗಳಲ್ಲಿ ಹಿಜಾಬ್​, ಕೇಸರಿ ಶಾಲು (Hijab Kesari Row) ಸಂಘರ್ಷ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರತಿಕ್ರಿಯೆ ನೀಡಿದ್ದಾರೆ. ಹೈಕೋರ್ಟ್​​ನ ಮಧ್ಯಂತರ ಆದೇಶದಲ್ಲಿ ಬಹಳ ಸ್ಪಷ್ಟವಾಗಿದೆ. ಆಡಳಿತ ಮಂಡಳಿ ಸಮವಸ್ತ್ರ ಕಡ್ಡಾಯಗೊಳಿಸಿದ್ರೆ ಪಾಲಿಸಬೇಕು. ಆದೇಶದಲ್ಲಿ ಈ ಕುರಿತು ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದಾರೆ. ಹಲವೆಡೆ ಈ ಆದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ. ರಾಜ್ಯ ಬಿಜೆಪಿ ಸರ್ಕಾರ ಕೋರ್ಟ್ ಆದೇಶವನ್ನು ತಿರುಚುತ್ತಿದೆ ಎಂದು ಹೇಳಿದ್ದಾರೆ.

ಈ ವಿಚಾರದಲ್ಲಿ ಹೈಕೋರ್ಟ್​ ಸಿಜೆ ಮಧ್ಯಪ್ರವೇಶ ಮಾಡಬೇಕು. ಸರ್ಕಾರಕ್ಕೆ ಸಮವಸ್ತ್ರದ ಬಗ್ಗೆ ಸ್ಪಷ್ಟ ತಿಳಿವಳಿಕೆ ಕೊಡಬೇಕು. ಗೇಟ್​​ನಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ಬೆದರಿಸುತ್ತಿದ್ದಾರೆ. ಡಿಜಿ & ಐಜಿಪಿ ಮಧ್ಯಪ್ರವೇಶ ಮಾಡಿ ಸೂಚನೆ ನೀಡಬೇಕು. ಸಂವಿಧಾನ ವಿರೋಧಿಯಾಗಿ ವಿದ್ಯಾರ್ಥಿಗಳನ್ನ ನಡೆಸಿಕೊಳ್ತಿದೆ. ಸಮಸ್ಯೆಯನ್ನು ಬಗೆಹರಿಸಿ ರಾಜ್ಯದ ಮಾನವನ್ನು ಕಾಪಾಡಿ ಎಂದು ಹೈಕೋರ್ಟ್​ ಸಿಜೆ ಹಾಗೂ ಡಿಜಿ & ಐಜಿಪಿಗೆ ಅಬ್ದುಲ್ ಮಜೀದ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Karnataka Hijab Row: ಹಿಜಾಬ್ ಪ್ರಕರಣ ವಿಚಾರಣೆ ಮುಂದೂಡಿಕೆ; ನಾಳೆ ರಾಜ್ಯ ಸರ್ಕಾರದ ಪರ ವಾದಮಂಡನೆ

ಇದನ್ನೂ ಓದಿ: ಹಿಜಾಬ್ ವಿವಾದ: ಅತ್ತ ದರಿ, ಇತ್ತ ಪುಲಿ ಎಂಬಂತಾಗಿದೆ ಕರ್ನಾಟಕ ಕಾಂಗ್ರೆಸ್​ ಪರಿಸ್ಥಿತಿ! ಮುಂದೆ ಯಾವುದಯ್ಯಾ ದಾರಿ?

Published On - 9:05 pm, Thu, 17 February 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!