AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಗೃಹ ಸಚಿವರ ಕ್ಷೇತ್ರದಲ್ಲಿಯೇ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ; ಏಳು ತಿಂಗಳಿನಿಂದ ಸಿಬ್ಬಂದಿಗಳಿಗಿಲ್ಲ ಸಂಬಳ

Tumakur News: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್, ಇದೀಗ ಅವ್ಯವಸ್ಥೆಯ ಆಗರವಾಗಿದೆ. ಹೌದು, ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿನಿಧಿಸುವ ಕೊರಟಗೆರೆ ಕ್ಷೇತ್ರದಲ್ಲಿಯೇ ಕ್ಯಾಂಟೀನ್​ ಸಿಬ್ಬಂದಿಗಳಿಗೆ ಸಂಬಳ ಸಿಗದೆ ಕಂಗಾಲಾಗಿದ್ದಾರೆ.

ತುಮಕೂರು: ಗೃಹ ಸಚಿವರ ಕ್ಷೇತ್ರದಲ್ಲಿಯೇ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ; ಏಳು ತಿಂಗಳಿನಿಂದ ಸಿಬ್ಬಂದಿಗಳಿಗಿಲ್ಲ ಸಂಬಳ
ಕೊರಟಗೆರೆ ಇಂದಿರಾ ಕ್ಯಾಂಟೀನ್​ ಸಿಬ್ಬಂದಿಗಳಿಗೆ ಸಂಬಳ ಇಲ್ಲದೆ ಕಂಗಾಲು
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Aug 11, 2023 | 4:12 PM

Share

ತುಮಕೂರು, ಆ.11: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್(Indira Canteen)​ಗೆ ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತಿದ್ದಂತೆ ಮರುಜೀವ ಬಂದಿತ್ತು. ಅದರಂತೆ ಬೆಂಗಳೂರಿನಲ್ಲಿಯೇ 250 ಇಂದಿರಾ ಕ್ಯಾಂಟೀನ್​ ಆರಂಭಿಸಲು ಸೂಚಿಸಿದ್ದರು. ಜೊತೆಗೆ ಕ್ವಾಲಿಟಿ ಮತ್ತು ಕ್ವಾಂಟಿಟಿಗೂ ಹೆಚ್ಚಿನ ಮಹತ್ವ ಕೊಡಲಾಗುವುದು ಎಂದು ಹೇಳಿದ್ದರು. ಆದರೀಗ ಗೃಹ ಸಚಿವ ಡಾ.ಜಿ ಪರಮೇಶ್ವರ್ ​(G Parameshwara) ಕ್ಷೇತ್ರದಲ್ಲಿಯೇ ಇಂದಿರಾ ಕ್ಯಾಂಟೀನ್ ಮುಚ್ಚುವ ಹಂತಕ್ಕೆ ತಲುಪಿದೆ. ಹೌದು, ಕಳೆದ 7 ತಿಂಗಳಿನಿಂದ ರಿವಾರ್ಡ್ ಏಜೆನ್ಸಿಯವರು ಸಂಬಳ ನೀಡದೇ ಸಿಬ್ಬಂದಿಗಳಿಗೆ ಸತಾಯಿಸುತ್ತಿದ್ದಾರೆ.

ಪ್ರತಿದಿನ ಬರುವ ಹಣದಲ್ಲಿಯೇ ದಿನಸಿ ತಂದು ಅಡುಗೆ ಮಾಡುತ್ತಿರುವ ಸಿಬ್ಬಂದಿ

ಇನ್ನು ಈ ಇಂದಿರಾ ಕ್ಯಾಂಟೀನ್​ನಲ್ಲಿ 8 ಜನ ಸಿಬ್ಬಂದಿ ಕೆಲಸ ಮಾಡಬೇಕಿದೆ. ಆದರೆ, ಈಗ ನಾಲ್ಕು ಜನ ಸಿಬ್ಬಂದಿಯಿಂದಲೇ ಕೆಲಸ ನಡೆಯುತ್ತಿದೆ. ಆದರೆ, ಕಳೆದ ಏಳು ತಿಂಗಳಿನಿಂದ ಸಂಬಳ ಇಲ್ಲದ ಕಾರಣ ಅಡುಗೆ ಹೆಡ್ ಕುಕ್ ಹಾಗೂ ಕ್ಯಾಷಿಯರ್ ಜೊತೆಗೆ ಸಿಬ್ಬಂದಿಗಳು ಕಂಗಾಲಾಗಿದ್ದಾರೆ. ಇನ್ನು ‘ಸಂಬಳ ಇಲ್ಲವಾದರೇ ಏನ್ ಮಾಡುವುದು ಸರ್. ಪ್ರತಿದಿನ ಬರುವ ಹಣದಲ್ಲಿಯೇ ದಿನಸಿ ತಂದು ಅಡುಗೆ ಮಾಡುತ್ತಿದ್ದೇವೆ. ಬೆಳಿಗ್ಗೆಯಿಂದ ರಾತ್ರಿವರೆಗೂ ಕೆಲಸ ಮಾಡಿದ್ರು, ಸಂಬಳ ಇಲ್ಲವೆಂದು ಸಿಬ್ಬಂದಿಗಳು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ:ಪ್ರತಿ ಭಾನುವಾರ ಜಗಳೂರು ಪಟ್ಟಣದಲ್ಲಿ ಕಸಗುಡಿಸುವೆ ಎಂದ ಕಾಂಗ್ರೆಸ್ ಶಾಸಕ ದೇವೇಂದ್ರಪ್ಪ, ಇಂದಿರಾ ಕ್ಯಾಂಟೀನ್​​ನಲ್ಲಿ ಊಟ ಮಾಡಿದರು

ಪ್ರತಿನಿತ್ಯ ಬೆಳಿಗ್ಗೆ ಮಧ್ಯಾಹ್ನ ಸೇರಿ 600 ರಿಂದ700 ಜನರು ಊಟ ಸೇವಿಸುತ್ತಾರೆ

ತಾಲೂಕು ಕಚೇರಿಗೆ ಬರುವವರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿ ಪ್ರತಿನಿತ್ಯ ಬೆಳಿಗ್ಗೆ ಮಧ್ಯಾಹ್ನ ಸೇರಿ 600 ರಿಂದ700 ಜನರು ಊಟ ಸೇವಿಸುತ್ತಾರೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿನಿಧಿಸುವ ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆಯ ಆಗರವಾಗಿದೆ. ರೇಷನ್, ಸಿಬ್ಬಂದಿಗೆ ಸಂಬಳ ಇಲ್ಲದೆ ಕೊರಟಗೆರೆ ಇಂದಿರಾ ಕ್ಯಾಂಟೀನ್ ಮುಚ್ಚುವ ಹಂತ ತಲುಪಿದೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:12 pm, Fri, 11 August 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು