
ತುಮಕೂರು, ಜೂನ್ 04: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ (Accident) ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎನ್ನಲಾಗುತ್ತಿದೆ. ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯೂರಿನಿಂದ ಹುಳಿಯಾರು ಕಡೆಗೆ ಬರುತ್ತಿದ್ದ ಓಮ್ನಿ ಕಾರುಗೆ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಓಮ್ನಿ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ವೃದ್ಧ ದಂಪತಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸದ್ಯ ಮೃತದೇಹಗಳನ್ನು ಹುಳಿಯಾರು ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚಿನ್ನಿಬಸಪ್ಪ ಕ್ಯಾಂಪ್ ಬಳಿಯ ಕುಮಾರಸ್ವಾಮಿ ದೇವಸ್ಥಾನದ ರಸ್ತೆಯಲ್ಲಿ ಬೈಕ್ ಹಾಗೂ ಮೈನಿಂಗ್ ಲಾರಿ ನಡುವೆ ಡಿಕ್ಕಿಯಾಗಿ ತಂದೆ ಮತ್ತು ಮಗ ಇಬ್ಬರು ಮೃತಪಟ್ಟಿರುವಂತಹ ಘಟನೆ ನಡೆದಿದೆ. ಮೈನಿಂಗ್ ಕಂಪನಿಯಲ್ಲಿ ವಾಚ್ಮೆನ್ ಆಗಿ ಕೆಲಸ ಮಾಡುತ್ತಿದ್ದ ಬೆಳ್ಳಿ ನಾಗರಾಜ (45)ರನ್ನು ಕೆಲಸಕ್ಕೆ ಬಿಡಲು ಪುತ್ರ ದುರಗೇಶ್ (22) ಬೈಕ್ನಲ್ಲಿ ಕರೆದುಕೊಂಡು ಹೋಗುತ್ತಿದ್ದ.
ಇದನ್ನೂ ಓದಿ: ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು
ಈ ವೇಳೆ ವೇಗವಾಗಿ ಬಂದ ಮೈನಿಂಗ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಳ್ಳಿ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ದುರಗೇಶ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ಸಂಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:20 pm, Thu, 4 June 26