AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಾಲದಮರ ಬಸ್ ಸ್ಟ್ಯಾಂಡ್‌ ಬಳಿ ಪತ್ನಿ ಮೇಲೆ ಮನಸೋಇಚ್ಛೆ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ, ಪತ್ನಿ ಗಂಭೀರ

ಗಂಡ-ಹೆಂಡತಿ ನಡುವೆ ಜಗಳ ಆಗುವುದು ಸಾಮಾನ್ಯ. ಆದ್ರೆ ಅದು ಸಾಯಿಸುವ ಹಂತಕ್ಕೆ ಹೋಗ ಬಾರದು. ನಡುರಸ್ತೆಯಲ್ಲಿ ಬಾಲು ಜ್ಯೋತಿ ನಡುವೆ ಮಚ್ಚಿನಿಂದ ನಡೆಯುತ್ತಿದ್ದ ಜಗಳ ನೋಡಿದ ಪೊಲೀಸರು ಜೀವ ಪಣಕ್ಕಿಟ್ಟು ಮಹಿಳೆಯನ್ನು ರಕ್ಷಿಸಿದ್ದಾರೆ.

ದೊಡ್ಡಾಲದಮರ ಬಸ್ ಸ್ಟ್ಯಾಂಡ್‌ ಬಳಿ ಪತ್ನಿ ಮೇಲೆ ಮನಸೋಇಚ್ಛೆ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ, ಪತ್ನಿ ಗಂಭೀರ
ದೊಡ್ಡಾಲದಮರ ಬಸ್ ಸ್ಟ್ಯಾಂಡ್‌ ಬಳಿ ಪತ್ನಿ ಮೇಲೆ ಮನಸೋಇಚ್ಛೆ ಮಚ್ಚಿನಿಂದ ಹಲ್ಲೆ ನಡೆಸಿದ ಪತಿ, ಪತ್ನಿ ಗಂಭೀರ
TV9 Web
| Edited By: |

Updated on: Feb 08, 2022 | 12:24 PM

Share

ತುಮಕೂರು: ನಡುರಸ್ತೆಯಲ್ಲಿ ಪತ್ನಿ ಮೇಲೆ ಮನಬಂದಂತೆ ಪತಿ ಹಲ್ಲೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಾಲದಮರ ಗೇಟ್‌ನ ಬಸ್ ಸ್ಟ್ಯಾಂಡ್‌ ಬಳಿ ನಡೆದಿದೆ. ಬಾಲು ಎಂಬ ಬ್ಯಕ್ತಿ ತನ್ನ ಪತ್ನಿ ಜ್ಯೋತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಪತಿ ಜೊತೆ ಜಗಳ ನಡೆದ ಹಿನ್ನೆಲೆ ಜ್ಯೋತಿ(25) ತವರಿಗೆ ಹೊರಟಿದ್ದರು. ಇದರಿಂದ ಸಿಟ್ಟಿಗೆದ್ದು ಮಚ್ಚಿನ ಸಮೇತ ಬಂದಿದ್ದ ಪತಿ ಬಾಲು ನಡುರಸ್ತೆಯಲ್ಲೇ ಜಗಳವಾಗಿ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.

ಗಂಡ-ಹೆಂಡತಿ ನಡುವೆ ಜಗಳ ಆಗುವುದು ಸಾಮಾನ್ಯ. ಆದ್ರೆ ಅದು ಸಾಯಿಸುವ ಹಂತಕ್ಕೆ ಹೋಗ ಬಾರದು. ನಡುರಸ್ತೆಯಲ್ಲಿ ಬಾಲು ಜ್ಯೋತಿ ನಡುವೆ ಮಚ್ಚಿನಿಂದ ನಡೆಯುತ್ತಿದ್ದ ಜಗಳ ನೋಡಿದ ಪೊಲೀಸರು ಜೀವ ಪಣಕ್ಕಿಟ್ಟು ಮಹಿಳೆಯನ್ನು ರಕ್ಷಿಸಿದ್ದಾರೆ. ಸದ್ಯ ಗಾಯಾಳು ಜ್ಯೋತಿ ಸ್ಥಿತಿ ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲು ಮತ್ತು ಜ್ಯೋತಿ ಇಬ್ಬರದ್ದು ಅಂತರಜಾತಿ ವಿವಾಹ. ಇವರು ಶಿರಾ ತಾಲೂಕಿನ ಹನುಮಂತನಗರದ ನಿವಾಸಿಗಳು. ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಲೇ ಇರುತ್ತಿದ್ದು. ಇದರಿಂದ ಬೇಸತ್ತು ತವರು ಮನೆಗೆ ಹೊರಟು ದೊಡ್ಡಾಲದಮರ ಬಸ್ ನಿಲ್ದಾಣಕ್ಕೆ ಜ್ಯೋತಿ ಬಂದಿದ್ದರು. ಇದರಿಂದ ಸಿಟ್ಟಿಗೆದ್ದ ಪತಿ ಬಾಲು ಮಚ್ಚಿನ ಸಮೇತವಾಗಿ ಬಸ್ ನಿಲ್ದಾಣಕ್ಕೆ ಬಂದಿದ್ದ. ಈ ವೇಳೆ ಅಲ್ಲೂ ಇಬ್ಬರ ನಡುವೆ ಜಗಳ ಶುರುವಾಗಿ ಬಾಲು ನಡು ರಸ್ತೆಯಲ್ಲೇ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಹೈವೆ ರೌಂಡ್ಸ್ ನಲ್ಲಿದ್ದ ಕಳ್ಳಂಬೆಳ್ಳ ಠಾಣೆಯ ಎಎಸ್ಐ ಗೋವಿಂದರಾಜು, ಡ್ರೈವರ್ ಮಹೇಶ್ ಸ್ಥಳಕ್ಕೆ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: ಮದುವೆಯ ನಂತರ ಮೊದಲ ಬಾರಿಗೆ ವ್ಯಾಲೆಂಟೈನ್ಸ್ ಡೇ ಆಚರಿಸಿಕೊಳ್ಳುತ್ತಿರುವ ಬಿ-ಟೌನ್​ನ ಐದು ಜೋಡಿಗಳು; ಇಲ್ಲಿವೆ ಫೋಟೋಗಳು

ಲೇಸ್​ ಪ್ಯಾಕ್​ ಕವರ್​ನ್ನು ಸೀರೆಯಂತೆ ಹೊಲಿದು ಧರಿಸಿದ ಯುವತಿ; ವಿಡಿಯೋ ವೈರಲ್​

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು