AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಶಂಕರ್ ಕೊಲೆ ಸುಪಾರಿ ಕೊಟ್ಟಿದ್ದರೆಂದು ಪ್ರಪಂಚದ ಯಾವುದೇ ದೇವರ ಮುಂದೆ ಪ್ರಮಾಣ ಮಾಡಿ ಹೇಳಲು ಸಿದ್ಧ: ಬಿಜೆಪಿ ಮಾಜಿ ಶಾಸಕ

ಕೊಲೆ ಸುಪಾರಿ ವಿಚಾರಕ್ಕೆ ಈಗಾಗಲೇ ಎಫ್​​ಐಆರ್​ ದಾಖಲಾಗಿದೆ. ನಾನು ಸ್ಪಷ್ಟವಾಗಿ ಕಂಪ್ಲೇಂಟ್‌ನಲ್ಲಿ ಬರೆದು ಕೊಟ್ಟಿದ್ದೇನೆ ಎಂದು ಬಿಜೆಪಿ ಮಾಜಿ ಶಾಸಕ ಸುರೇಶ್​​ ಗೌಡ ಹೇಳಿದರು.

ಗೌರಿಶಂಕರ್ ಕೊಲೆ ಸುಪಾರಿ ಕೊಟ್ಟಿದ್ದರೆಂದು ಪ್ರಪಂಚದ ಯಾವುದೇ ದೇವರ ಮುಂದೆ ಪ್ರಮಾಣ ಮಾಡಿ ಹೇಳಲು ಸಿದ್ಧ: ಬಿಜೆಪಿ ಮಾಜಿ ಶಾಸಕ
ಮಾಜಿ ಶಾಸಕ ಸುರೇಶ್ ಗೌಡ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 26, 2022 | 4:56 PM

Share

ತುಮಕೂರು: ಕೊಲೆ ಸುಪಾರಿ ವಿಚಾರಕ್ಕೆ ಈಗಾಗಲೇ ಎಫ್​​ಐಆರ್​ ದಾಖಲಾಗಿದೆ. ನಾನು ಸ್ಪಷ್ಟವಾಗಿ ಕಂಪ್ಲೇಂಟ್‌ನಲ್ಲಿ ಬರೆದು ಕೊಟ್ಟಿದ್ದೇನೆ. ನಾನು ಯಾವ ದೇವರ ಮುಂದೆ ಬೇಕದ್ರೂ ಪ್ರಮಾಣ ಮಾಡಿ ಹೇಳಲು ಸಿದ್ದನಿದ್ದೇನೆ. ಗೌರಿ ಶಂಕರ್ ಸುಪಾರಿ ಕೊಟ್ಟಿರುವುದು ನಿಜ ಎಂದು ಬಿಜೆಪಿ ಮಾಜಿ ಶಾಸಕ ಸುರೇಶ್​​ ಗೌಡ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೂ ನಾನು ದೂರಿನ ಪತ್ರ ರವಾನಿಸಿದ್ದೇನೆ. ಗುಪ್ತಚರ ಮಾಹಿತಿ ಆಧಾರದ ಮೇಲೆ ನಾನು ಕಂಪ್ಲೆಂಟ್​​ ಕೊಟ್ಟಿದ್ದೇನೆ. ಶಾಸಕ ಗೌರಿಶಂಕರ್ ನನ್ನ ಮೇಲೆ ಆರೋಪ ಮಾಡಿದ್ದಕ್ಕೆ ಬೇಸರವಿಲ್ಲ. ಅವರು ನನ್ನ ಮೇಲೆ ದೂರು ಕೊಟ್ಟಿದ್ದಕ್ಕೆ ದಾಖಲೆ ಸಿಕ್ಕಿಲ್ಲ. ಗೌರಿಶಂಕರ್​ ಮೇಲೆ ನನಗೆ ಯಾವುದೇ ದ್ವೇಷವಿಲ್ಲ. ಈ ಕ್ಷೇತ್ರದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಯಾವುದೋ ಕಾರಣದಿಂದ ನಾನು ಚುನಾವಣೆಯಲ್ಲಿ ಸೋತಿರಬಹುದು. ಹಳ್ಳಿ ಹಳ್ಳಿಗಳಲ್ಲಿ ಜನರು ಸುರೇಶ್​ಗೌಡ ಹೆಸರು ಹೇಳುತ್ತಿದ್ದಾರೆ. ಹತಾಶರಾಗಿ ಗೌರಿಶಂಕರ್​​ ನನ್ನ ಮೇಲೆ ಸುಪಾರಿ ಕೊಟ್ಟಿದ್ದಾರೆ. ಹಾಗಾಗಿ ಒಂದೂವರೆ ತಿಂಗಳ ಹಿಂದೆಯೇ ದೂರು ದಾಖಲಿಸಿದ್ದೇನೆ ಎಂದು ಮಾಜಿ ಶಾಸಕ ಸುರೇಶ್​​ ಗೌಡ ಹೇಳಿದರು.

ಹೈಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದೇನೆ. ಎರಡನೇಯದಾಗಿ ಅವರ ಮೇಲೆ ಸಿಓಡಿ ರಿಪೋರ್ಟ್ ಮಾಡಿದ್ದು, ಚಾರ್ಜ್ ಶೀಟ್ ಆಗಿದೆ. ಮತ್ತೊಂದು ಕರೋನಾ ವ್ಯಾಕ್ಸಿನೇಷನ್​ನಲ್ಲಿ ನಕಲಿ ವ್ಯಾಕ್ಸಿನ್ ಹಾಕಿರುವ ಆರೋಪಯಿದೆ. ಈಗ ಮೂರನೇಯದು ಕೊಲೆಗೆ ಸುಪಾರಿ ಕೊಟ್ಟಿರುವ ಕೇಸ್ ಇದೆ. ಇವರು ಶಾಸಕರಾಗಿ ಬಂದಾಗಿನಿಂದ ಒಂದಲ್ಲ ಒಂದು ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಈ ಕ್ಷೇತ್ರದಲ್ಲಿ ಜನರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಜನ ಒಂದು ಬಾರಿ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ. ಬೇರೆ ಬೇರೆ ಕಾರಣದಿಂದ ಅವರು ಗೆದ್ದು ಶಾಸಕಾರಾಗಿದ್ದಾರೆ ಎಂದರು.

ಇನ್ನು ಚುನಾವಣೆಯಲ್ಲಿ ಸೋಲು ಗೆಲುವು ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಸಾಕಷ್ಟು ಜನ ಕರ್ನಾಟಕ ರಾಜ್ಯದಲ್ಲಿ ಚುನಾವಣೆಯಲ್ಲಿ ಸೋತಿದ್ದಾರೆ. ಉದಾಹರಣೆಗೆ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಪಿಎಂ ದೇವೆಗೌಡರು ಹಾಗೂ ಮಲ್ಲಿಕಾರ್ಜುನ ಖರ್ಗೆ ಸಹ ಸೋತಿದ್ದಾರೆ. ನಾನು ಒಂದು ಚುನಾವಣೆಯಲ್ಲಿ ಯಾವುದೋ ಒಂದು ಕಾರಣಕ್ಕೆ ಸೋತಿರಬಹುದು. ನಾನು ಯಾವುದೋ ಸಾಮ್ರಾಜ್ಯ ಗೆದ್ದಿದ್ದೇನೆ ಎಂದು ಬಿಗುತ್ತಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ