AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಬೆದರಿಕೆ ಬಂದಿರೋದು ನೂರಕ್ಕೆ ನೂರು ಸತ್ಯ, ಸಿಎಂಗೂ ಮಾಹಿತಿ ನೀಡಿದ್ದೇನೆ: ಮಾಜಿ ಶಾಸಕ ಸುರೇಶ್ ಗೌಡ

ನನಗೆ ಕೊಲೆ ಬೆದರಿಕೆ ಬಂದಿರುವುದು ನೂರಕ್ಕೆ ನೂರು ಸತ್ಯ. ಈ ಕುರಿತಾಗಿ ನಾನು ಸಿಎಂ ಬೊಮ್ಮಾಯಿ ಅವರಿಗೂ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.

ಕೊಲೆ ಬೆದರಿಕೆ ಬಂದಿರೋದು ನೂರಕ್ಕೆ ನೂರು ಸತ್ಯ, ಸಿಎಂಗೂ ಮಾಹಿತಿ ನೀಡಿದ್ದೇನೆ: ಮಾಜಿ ಶಾಸಕ ಸುರೇಶ್ ಗೌಡ
ಮಾಜಿ ಶಾಸಕ ಸುರೇಶ್ ಗೌಡ
TV9 Web
| Edited By: |

Updated on:Nov 23, 2022 | 3:38 PM

Share

ತುಮಕೂರು: ನನಗೆ ಕೊಲೆ ಬೆದರಿಕೆ (threats) ಬಂದಿರುವುದು ನೂರಕ್ಕೆ ನೂರು ಸತ್ಯ. ಆಯುಧ ಪೂಜೆ ದಿನ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವರನ್ನ ಭೇಟಿಯಾಗಿ ಕೊಲೆ ಬೆದರಿಕೆ ಬಗ್ಗೆ ವಿವರಣೆ ಕೊಟ್ಟಿದ್ದೇನೆ. ಒಂದು ತಿಂಗಳ ಹಿಂದೆ ಕಮಿಷನರ್​ಗೆ ದೂರು ಕೂಡ ಕೊಟ್ಟಿದ್ದೇನೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಹೇಳಿದರು. ನಗರದಲ್ಲಿ ಮಾತನಾಡಿದ ಅವರು,  ಸರ್ಕಾರ ಶಕ್ತಿಶಾಲಿಯಾಗಿದೆ. ಗುಪ್ತಚರ ಇಲಾಖೆಯಿಂದ ವರದಿ ಬಂದಿದೆ. ತನಿಖೆ ನಡೆಯುತ್ತಿದೆ. ಹಾಗಾಗಿ ಮೀಡಿಯಾ ಮುಂದೆ ಬಂದಿರಲಿಲ್ಲ. ಇನ್ನು ಕರ್ನಾಟಕ ರಾಜ್ಯದಲ್ಲಿ ಶಾಂತಿಯುತ ರಾಜಕಾರಣ ನಡೆಯುತ್ತೆ. ವ್ಯಕ್ತಿಗತ ಆರೋಪ ಯಾರು ಮಾಡೋದಿಲ್ಲಾ. ರಾಜಕೀಯವಾಗಿ ವಿರೋಧ ಮಾಡುತ್ತಾರೆ, ಹೊರೆತು ಕೊಲೆ ಮಾಡುವಷ್ಟು ನೀಚ ರಾಜಕಾರಣಕ್ಕೆ ಯಾರು ಇಳಿದಿಲ್ಲ ಎಂದು ಹೇಳಿದರು.

ಸುರೇಶ್ ಗೌಡರನ್ನ ಕೊಲೆ ಮಾಡಬೇಕು ಎಂದು ಶಾಸಕ ಗೌರಿಶಂಕರ್, ಅಟಿಕಾ ಬಾಬು ಸೇರಿ 5 ಕೋಟಿ ಹಣ ನೀಡಿರುತ್ತಾರೆ. ಹಿರೇಹಳ್ಳಿ ಮಹೇಶ್, ಜೈಲಿನಲ್ಲಿರೋ ಒಬ್ಬ ಖೈದಿಗೆ ಸುಮಾರು ಭಾರಿ ಪೋನ್ ಮಾಡಿದ್ದಾರೆ. ಕಳೆದ ಹದಿನೈದು ದಿನದ ಹಿಂದೆ ಎಲ್.ಹೆಚ್​ನಲ್ಲಿ ಶಾಸಕ ಗೌರಿಶಂಕರ್​ರನ್ನ ಅಟಿಕಾ ಬಾಬು ಭೇಟಿಯಾಗಿರೋ ಬಗ್ಗೆ ಮಾಹಿತಿ ಇದೆ. ಸರ್ಕಾರದಲ್ಲಿರೋ ಇಂಟೆಲಿಜೆನ್ಸ್ ತುಂಬಾ ಪ್ರಬಲವಾಗಿರುವುದರಿಂದ ಎಲ್ಲಾ ಮಾಹಿತಿ ಲಭ್ಯವಾಗಿದೆ. ಗೌರಿಶಂಕರ್ ಭಾಗಿಯಾಗಿದ್ದಾರೋ ಇಲ್ವೋ ಗೊತಿಲ್ಲಾ. ಆದರೆ ತನಿಖೆ ಆಗಬೇಕು. ಇದರ ಹಿಂದೆ ಎಷ್ಟೇ ದೊಡ್ಡ ವ್ಯಕ್ತಿ ಇದ್ದರೂ ತನಿಖೆ ಆಗಬೇಕು. ಗೌರಿಶಂಕರ್ ಹಿಂಬಾಲಕ ಹಿರೇಹಳ್ಳಿ ಮಹೇಶ್ ಜೈಲಿನಲ್ಲಿರೋ ಖೈದಿಗೆ ಕರೆ ಮಾಡಿ ಮಾತನಾಡಿರೋ ಪೋನ್ ನಂಬರ್ ಕೂಡ ಕೊಟ್ಟಿದ್ದೇನೆ ಎಂದು ತಿಳಿಸಿದರು.

ನಾನು ಗೌರಿಶಂಕರ್ ವಿರುದ್ದ ತರಕಾರು ಅರ್ಜಿಯನ್ನ ಕೊಟ್ಟಿದ್ದೆ. ಅದು ಜಡ್ಜ್‌ಮೆಂಟ್ ಹಂತದಲ್ಲಿದೆ. ಆ ಹತಾಶೆ ಭಾವದಿಂದ ಹಿರೇಹಳ್ಳಿ ಮಹೇಶ್, ಗೌರಿಶಂಕರ್ ಇಬ್ಬರು ಸೇರಿ ಹಣ ಒದಗಿಸಲು ಅಟಿಕಾ ಬಾಬು ಹೆಸರನ್ನ ಕೂಡ ತಂದಿದ್ದಾರೆ. ಖೈದಿಗೆ ಹಣ ಯಾರು ಕೂಡುತ್ತಾರೆ ಅಂದ್ರೆ ಅಟಿಕಾ ಬಾಬು ಕೊಡುತ್ತಾರೆ ಅಂತಾ ಹಿರೇಹಳ್ಳಿ ಮಹೇಶ್ ಹೇಳಿದ್ದಾರೆ. ಅಟಿಕಾ ಬಾಬು, ಗೌರಿಶಂಕರ್ ಭಾಗಿಯಾಗಿದ್ದಾರೋ ಗೊತ್ತಿಲ್ಲಾ. ಹಿರೇಹಳ್ಳಿ ಮಹೇಶ್ ಭಾಗಿಯಾಗಿರೋದು ಸತ್ಯ. ನನಗೆ ಗೌರಿಶಂಕರ್ ಮೇಲೆ ವೈಯಕ್ತಿಕವಾಗಿ ಆರೋಪ ಮಾಡೋಕೆ ಇಷ್ಟ ಇಲ್ಲ ಎಂದರು.

ಸತ್ಯ ಇಲ್ಲದೇ ನಾನು ಯಾರ ಮೇಲೂ ಆರೋಪ ಮಾಡೋದಿಲ್ಲಾ. ನಕಲಿ ವ್ಯಾಕ್ಸಿನ್, ನಕಲಿ ಬಾಂಡ್ ಬಗ್ಗೆ ತಕರಾರು ಅರ್ಜಿಯ ತನಿಖೆ ನಡೆಯುತ್ತಿದೆ. ಅವರ ಬ್ಯಾಗ್ರೌಂಡ್ ಕೊರಟಗೆರೆಯಲ್ಲಿಅವರ ತಂದೆ ಯಾರು ಯಾರಿಗೆ ಏನೇನ್ ಮಾಡಿದ್ದಾರೆ ಗೊತ್ತಿದೆ. ಗ್ರಾಮಾಂತರ ಜನರು ಮುಗ್ಧರಿದ್ದಾರೆ. ಇಲ್ಲಿ ಕೂಡ ಏನೋ ಮಾಡೋಕೆ ಹೋದರು, ಆದರೆ ನಾವು ಬಿಟ್ಟಿಲ್ಲ ಎಂದು ಮಾಜಿ ಶಾಸಕ ಸುರೇಶ್ ಗೌಡ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:28 pm, Wed, 23 November 22

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್