AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ವಾಯುಪಡೆ ಮುನ್ನಡೆಸಿದ ಜಿಲ್ಲೆಯ ಮೊದಲ ಮಹಿಳೆ ಇಂಪನಾಶ್ರೀ; ಎನ್​ಸಿಸಿಯಿಂದ ಬದಲಾಯಿತು ಬದುಕು

ಎನ್​ಸಿಸಿಯ ಸತತ ಪರಿಶ್ರಮದಿಂದ ಅವಕಾಶಗಳನ್ನು ಪಡೆದ ಇಂಪನಾಶ್ರೀಗೆ ಈ ಬಾರಿಯ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಭಾಗವಹಿಸುವ ಸುವರ್ಣಾವಕಾಶ ತಂದುಕೊಟ್ಟಿದ್ದು, ಇದರಿಂದ ರಾಜ್ಯ ಮತ್ತು ಜಿಲ್ಲೆಯ ಕೀರ್ತಿಗೆ ಭಾಜನರಾಗಿದ್ದಾರೆ.

ತುಮಕೂರು: ವಾಯುಪಡೆ ಮುನ್ನಡೆಸಿದ ಜಿಲ್ಲೆಯ ಮೊದಲ ಮಹಿಳೆ ಇಂಪನಾಶ್ರೀ; ಎನ್​ಸಿಸಿಯಿಂದ ಬದಲಾಯಿತು ಬದುಕು
ಇಂಪನಾಶ್ರೀ
TV9 Web
| Edited By: |

Updated on: Jan 29, 2022 | 10:51 AM

Share

ತುಮಕೂರು: ಗಣರಾಜ್ಯೋತ್ಸವ ದಿನದಂದು(Republic day) ಏರ್ ಪೋರ್ಸ್ ರೆಜಿಮೆಂಟ್ ಮುನ್ನಡೆಸಿದ ಮೊದಲ ಮಹಿಳಾ ವೈದ್ಯೆ ಎಂಬ ಕೀರ್ತಿಗೆ ಕಲ್ಪತರು ನಾಡಿನ ಇಂಪನಾಶ್ರೀ ಪಾತ್ರರಾಗಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದ ಯಲ್ಲರಾಜು ಮತ್ತು ಕೆಎಸ್ ಭಾನುಮತಿ ದಂಪತಿಯ ಪುತ್ರಿ ಇಂಪನಾಶ್ರೀ ಇದೀಗ ಕೀರ್ತಿಗೆ ಪಾತ್ರರಾಗಿದ್ದಾರೆ. ಪ್ರಸ್ತುತ ಬೆಂಗಳೂರಿನ ಏರ್ ಕಮಾಂಡರ್ ಆಸ್ಪತ್ರೆಯಲ್ಲಿ(Hospital) ವೈದ್ಯೆಯಾಗಿರುವ ಇವರು ಮೊನ್ನೆ ನಡೆದ ಜನವರಿ 26 ರಂದು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ರಾಜಪಥದಲ್ಲಿ 3.3 ಕಿಲೋಮೀಟರ್ ಏರ್ ಪೋರ್ಸ್(Air force) ರೆಜಿಮೆಂಟನ್ನು ಪಥಸಂಚಲನದಲ್ಲಿ ನಡೆಸಿ ರಾಜ್ಯದ ಕೀರ್ತಿ ಪತಾಕೆ ಹಾರೀಸಿದ್ದಾರೆ.

ತುಮಕೂರಿನ ಸರ್ವೋದಯ ಪಿಯು ಕಾಲೇಜಿನಲ್ಲಿ ಪಿಯುಸಿ ಮುಗಿಸಿರುವ ಇವರು, ಅಲ್ಲಿದ್ದಾಗಲೇ ಎನ್​ಸಿಸಿಗೆ ಸೇರ್ಪಡೆಯಾಗಿದ್ದರು. ಸತತ ಪರಿಶ್ರಮದಿಂದ 2012 ರ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಭಾಗವಹಿಸುವ ಅವಕಾಶವೂ ಪಡೆದಿದ್ದರು.

ದಿಕ್ಕು ಬದಲಿಸಿದ ಎನ್​ಸಿಸಿ

ಪಿಯುಸಿ ನಂತರ ಯುವ ವಿನಿಮಯ ಕಾರ್ಯಕ್ರಮದಡಿ ಒಂದು ವರ್ಷ ಚೀನಾ ತರಬೇತಿಗೂ ಆಯ್ಕೆಯಾಗಿದ್ದ ಇಂಪನಾಶ್ರೀಗೆ ಎನ್​ಸಿಸಿ ಕೋಟಾದಡಿ ಹಾಸನ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸೀಟ್ ಸಿಕ್ಕಿತ್ತು. ಇದರಿಂದ ಕಷ್ಟದಲ್ಲಿದ್ದ ಆಕೆಯ ಜೀವನದ ದಿಕ್ಕೆ ಬದಲಾಯಿತು. ಅವರು ತಮ್ಮ ವಿದ್ಯಾಭ್ಯಾಸಕ್ಕಾಗಿ ಶಿಕ್ಷಣ ಸಾಲ ಪಡೆದಿದ್ದರು. ನಂತರ 2021 ಮೇನಲ್ಲಿ ಬೆಂಗಳೂರಿನ ಏರ್ ಕಮಾಂಡರ್ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಆಯ್ಕೆಯಾದರು. 2012ರ ಪರೇಡ್​ನಲ್ಲಿ 4 ನೇ ಬೆಟಾಲಿಯನ್ ಎನ್​ಸಿಸಿ ಕೆಡೆಟ್ ಆಗಿ ಭಾಗವಹಿಸಿದ್ದ ಇಂಪನಾಶ್ರೀಗೆ ಪ್ರಸ್ತುತ ಗಣರಾಜ್ಯೋತ್ಸವದಂದು ವಾಯುಪಡೆ ರೆಜಿಮೆಂಟ್ ಮುನ್ನಡೆಸುವ ಇನ್ನೊಂದು ಅವಕಾಶ ಒದಗಿ ಬಂದಿದೆ.

ಸದ್ಯ ಎನ್​ಸಿಸಿಯ ಸತತ ಪರಿಶ್ರಮದಿಂದ ಅವಕಾಶಗಳನ್ನು ಪಡೆದ ಇಂಪನಾಶ್ರೀಗೆ ಈ ಬಾರಿಯ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಭಾಗವಹಿಸುವ ಸುವರ್ಣಾವಕಾಶ ತಂದುಕೊಟ್ಟಿದ್ದು, ಇದರಿಂದ ರಾಜ್ಯ ಮತ್ತು ಜಿಲ್ಲೆಯ ಕೀರ್ತಿಗೆ ಭಾಜನರಾಗಿದ್ದಾರೆ.

ವರದಿ: ಮಹೇಶ್

ಇದನ್ನೂ ಓದಿ:

Flypast: ಗಣರಾಜ್ಯೋತ್ಸವ ವಿಶೇಷ ವೈಮಾನಿಕ ಪ್ರದರ್ಶನ: ಅಪರೂಪದ ಫ್ಲೈಪಾಸ್ಟ್​ ಸಾಹಸದಲ್ಲಿ ಬೆಂಗಳೂರು ನಂಟಿನ ವಾಯುಪಡೆ ಅಧಿಕಾರಿ

ವಾಯುಪಡೆ ಟ್ಯಾಬ್ಲೋದಲ್ಲಿ ರಫೇಲ್ ಜೆಟ್ ಚಲಾಯಿಸಿದ ಭಾರತದ ಮೊದಲ ಮಹಿಳಾ ಪೈಲಟ್ ಶಿವಾಂಗಿ ಸಿಂಗ್

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ