AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ವಿಧಿಯೇ! ನೀರಿನ ಗುಂಡಿಗೆ ಬಿದ್ದು ಮೂವರು ಸಾವು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ(Muddebihal) ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ಜಮೀನಿನಲ್ಲಿದ್ದ ನೀರು ತುಂಬಿದ್ದ ಆಳವಾದ ಗುಂಡಿಗೆ ಬಿದ್ದು ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಿಸಲಾಗಿದ್ದು, ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ.

ಅಯ್ಯೋ ವಿಧಿಯೇ! ನೀರಿನ ಗುಂಡಿಗೆ ಬಿದ್ದು ಮೂವರು ಸಾವು
ನೀರಿನ ಗುಂಡಿಗೆ ಬಿದ್ದು ಮೂವರು ಸಾವು
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jun 18, 2024 | 8:51 PM

Share

ವಿಜಯಪುರ, ಜೂ.18: ಜಮೀನಿನಲ್ಲಿದ್ದ ನೀರು ತುಂಬಿದ್ದ ಆಳವಾದ ಗುಂಡಿಗೆ ಬಿದ್ದು ಮೂವರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ(Muddebihal) ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ನಡೆದಿದೆ. ನೀಲಮ್ಮ ಖಿಲಾರಹಟ್ಟಿ (16), ಮುತ್ತಪ್ಪ ಖಿಲಾರಹಟ್ಟಿ ( 24 ) ಹಾಗೂ ಶಿವು ಯಾಳವಾರ ( 25 ) ಮೃತರು. ಹಡಲಗೇರಿ ಗ್ರಾಮದ ಚಿನ್ನಪ್ಪ ತಳವಾರ ಎಂಬುವವರಿಗೆ ಸೇರಿದ ಜಮೀನಿಗೆ ಎಮ್ಮೆ ಮೇಯಿಸಲು ನೀಲಮ್ಮ ಹೋಗಿದ್ದರು. ಎಮ್ಮೆಗೆ ನೀರು ಕುಡಿಸಲು ನೀರು ತುಂಬಿದ್ದ ಗುಂಡಿ ಬಳಿ ಬಂದಾಗ ಕಾಲು ಜಾರಿ ಬಿದ್ದಿದ್ದಾರೆ.

ರಕ್ಷಣೆ ಮಾಡಲು ಬಂದ ಸಂಬಂಧಿಕರು ಸಾವು

ಇದನ್ನು ಕಂಡು ಆಕೆಯನ್ನು ರಕ್ಷಣೆ ಮಾಡಲು ಬಂದ ಸಂಬಂಧಿಕ ಮುತ್ತಪ್ಪ ಖಿಲಾರಹಟ್ಟಿ ಹಾಗೂ ಯುವತಿ ನೀರಿನಲ್ಲಿ ಹೊರ ಬರಲಾರದೇ ಪರದಾಟ ನಡೆಸಿದ್ದಾರೆ. ಇದನ್ನು ಕಂಡು ಕಾಪಾಡಲು ಬಂದ ಶಿವು ಯಾಳವಾರ ಸಹ ನೀರು ಪಾಲಾಗಿದ್ದಾನೆ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಆಗಮಿಸಿದ್ದು, ಮೂವರ ಶವಗಳನ್ನು ಹೊರ ತೆಗೆದಿದ್ದಾರೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಿಸಲಾಗಿದೆ. ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ.

ಇದನ್ನೂ ಓದಿ:ಈಜಲು ತೆರಳಿದ್ದ ಯುವಕ ನೀರು ಪಾಲು: ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ತುಮಕೂರು: ತಿಪಟೂರು ನಗರದ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರ್ಷಿಣಿ(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೃತ ವರ್ಷಿಣಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವರ ಪುತ್ರಿಯಾಗಿದ್ದು, ತಿಪಟೂರು ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದರು. ಘಟನಾ ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್