ಅಯ್ಯೋ ವಿಧಿಯೇ! ನೀರಿನ ಗುಂಡಿಗೆ ಬಿದ್ದು ಮೂವರು ಸಾವು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ(Muddebihal) ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ಜಮೀನಿನಲ್ಲಿದ್ದ ನೀರು ತುಂಬಿದ್ದ ಆಳವಾದ ಗುಂಡಿಗೆ ಬಿದ್ದು ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಿಸಲಾಗಿದ್ದು, ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ.

ಅಯ್ಯೋ ವಿಧಿಯೇ! ನೀರಿನ ಗುಂಡಿಗೆ ಬಿದ್ದು ಮೂವರು ಸಾವು
ನೀರಿನ ಗುಂಡಿಗೆ ಬಿದ್ದು ಮೂವರು ಸಾವು
Edited By: ಕಿರಣ್ ಹನುಮಂತ್​ ಮಾದಾರ್

Updated on: Jun 18, 2024 | 8:51 PM

ವಿಜಯಪುರ, ಜೂ.18: ಜಮೀನಿನಲ್ಲಿದ್ದ ನೀರು ತುಂಬಿದ್ದ ಆಳವಾದ ಗುಂಡಿಗೆ ಬಿದ್ದು ಮೂವರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ(Muddebihal) ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ನಡೆದಿದೆ. ನೀಲಮ್ಮ ಖಿಲಾರಹಟ್ಟಿ (16), ಮುತ್ತಪ್ಪ ಖಿಲಾರಹಟ್ಟಿ ( 24 ) ಹಾಗೂ ಶಿವು ಯಾಳವಾರ ( 25 ) ಮೃತರು. ಹಡಲಗೇರಿ ಗ್ರಾಮದ ಚಿನ್ನಪ್ಪ ತಳವಾರ ಎಂಬುವವರಿಗೆ ಸೇರಿದ ಜಮೀನಿಗೆ ಎಮ್ಮೆ ಮೇಯಿಸಲು ನೀಲಮ್ಮ ಹೋಗಿದ್ದರು. ಎಮ್ಮೆಗೆ ನೀರು ಕುಡಿಸಲು ನೀರು ತುಂಬಿದ್ದ ಗುಂಡಿ ಬಳಿ ಬಂದಾಗ ಕಾಲು ಜಾರಿ ಬಿದ್ದಿದ್ದಾರೆ.

ರಕ್ಷಣೆ ಮಾಡಲು ಬಂದ ಸಂಬಂಧಿಕರು ಸಾವು

ಇದನ್ನು ಕಂಡು ಆಕೆಯನ್ನು ರಕ್ಷಣೆ ಮಾಡಲು ಬಂದ ಸಂಬಂಧಿಕ ಮುತ್ತಪ್ಪ ಖಿಲಾರಹಟ್ಟಿ ಹಾಗೂ ಯುವತಿ ನೀರಿನಲ್ಲಿ ಹೊರ ಬರಲಾರದೇ ಪರದಾಟ ನಡೆಸಿದ್ದಾರೆ. ಇದನ್ನು ಕಂಡು ಕಾಪಾಡಲು ಬಂದ ಶಿವು ಯಾಳವಾರ ಸಹ ನೀರು ಪಾಲಾಗಿದ್ದಾನೆ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಆಗಮಿಸಿದ್ದು, ಮೂವರ ಶವಗಳನ್ನು ಹೊರ ತೆಗೆದಿದ್ದಾರೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಿಸಲಾಗಿದೆ. ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ.

ಇದನ್ನೂ ಓದಿ:ಈಜಲು ತೆರಳಿದ್ದ ಯುವಕ ನೀರು ಪಾಲು: ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ತುಮಕೂರು: ತಿಪಟೂರು ನಗರದ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರ್ಷಿಣಿ(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೃತ ವರ್ಷಿಣಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವರ ಪುತ್ರಿಯಾಗಿದ್ದು, ತಿಪಟೂರು ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದರು. ಘಟನಾ ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us