AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakur News: ನಿಧಿಗಾಗಿ ದೇವಸ್ಥಾನದಲ್ಲಿ ಶೋಧ; ಹಾವು ಬಲಿಕೊಟ್ಟು ವಾಮಾಚಾರ

ದೇವಾಸ್ಥಾನದಲ್ಲಿ ವಾಮಾಚಾರ ಮಾಡಿ ನಿಧಿಗಾಗಿ ಶೋಧ ನಡೆಸಿದ ಘಟನೆ ಜಿಲ್ಲೆಯ ಶಿರಾ ತಾಲ್ಲೂಕಿನ‌ ಕಳುವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು ನಿನ್ನೆ(ಜೂ.14) ರಾತ್ರಿ ಗ್ರಾಮದ ಜುಂಜಪ್ಪ ಗುಡಿ ದೇವಸ್ಥಾನದಲ್ಲಿ ನಿಧಿಗಾಗಿ ಶೋಧ ನಡೆಸಿ ಚೋರರು, ದೇವಸ್ಥಾನದಲ್ಲಿ ಹಾವನ್ನು ಬಲಿಕೊಟ್ಟು ವಾಮಾಚಾರ ಮಾಡಿದ್ದಾರೆ.

Tumakur News: ನಿಧಿಗಾಗಿ ದೇವಸ್ಥಾನದಲ್ಲಿ ಶೋಧ; ಹಾವು ಬಲಿಕೊಟ್ಟು ವಾಮಾಚಾರ
ನಿಧಿಗಾಗಿ ಶೋಧ
ಕಿರಣ್ ಹನುಮಂತ್​ ಮಾದಾರ್
|

Updated on:Jun 15, 2023 | 2:09 PM

Share

ತುಮಕೂರು: ದೇವಾಸ್ಥಾನದಲ್ಲಿ ವಾಮಾಚಾರ ಮಾಡಿ ನಿಧಿಗಾಗಿ ಶೋಧ(Treasure Hunt) ನಡೆಸಿದ ಘಟನೆ ಜಿಲ್ಲೆಯ ಶಿರಾ(Sira) ತಾಲ್ಲೂಕಿನ‌ ಕಳುವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು ನಿನ್ನೆ(ಜೂ.14) ರಾತ್ರಿ ಗ್ರಾಮದ ಜುಂಜಪ್ಪ ಗುಡಿ ದೇವಸ್ಥಾನದಲ್ಲಿ ನಿಧಿಗಾಗಿ ಶೋಧ ನಡೆಸಿ ಚೋರರು, ದೇವಸ್ಥಾನದಲ್ಲಿ ಹಾವನ್ನು ಬಲಿಕೊಟ್ಟು ವಾಮಾಚಾರ ಮಾಡಿದ್ದಾರೆ. ಇನ್ನು ಇದೇ ವೇಳೆ ಕಿಡಿಗೇಡಿಗಳು ದೇವಾಸ್ಥಾನದ ಬಸವಣ್ಣ ವಿಗ್ರಹದ ಅಡಿಯಲ್ಲಿ ಗುಂಡಿ ತೋಡಿದ್ದು, ವಿಗ್ರಹವನ್ನು ಖದೀಯಲು ಪ್ರಯತ್ನಪಟ್ಟು ವಿಫಲವಾಗಿದೆ. ಈ ಕುರಿತು ಶಿರಾ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಲಬುರಗಿಯಲ್ಲಿಯೂ ಈ ಹಿಂದೆ ನಿಧಿಗಾಗಿ ಶೋಧ ನಡೆಸಿದ್ದ ದುಷ್ಕರ್ಮಿಗಳು

ಕಲಬುರಗಿ: ಇನ್ನು ರಾಜ್ಯದಲ್ಲಿ ನಿಧಿಗಾಗಿ ಶೋಧ ನಡೆಸುವಂತಹ ಘಟನೆ ನಡೆಯುತ್ತಿರುವುದು ಇದೆ ಮೊದಲಲ್ಲ. ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಅನೇಕ ಜಿಲ್ಲೆಯಲ್ಲಿ ಕೆಲವರು ನಿಧಿ ಹುಡುಕಾಟ ಮಾಡೋದನ್ನೇ ತಮ್ಮ ದೈನಂದಿನ ಕೆಲಸ ಮಾಡಿಕೊಂಡಿದ್ದು, ಅನೇಕ ದೇವಸ್ಥಾನ, ಕೋಟೆಗಳಲ್ಲಿ ನಿಧಿಗಾಗಿ ಭೂಮಿ ಅಗೆಯುತ್ತಲೇ ಇದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ನಿಧಿಯಾಸೆಗಾಗಿ ದುಷ್ಕರ್ಮಿಗಳು ದೇವಸ್ಥಾನದ‌ ಶಿವಲಿಂಗವನ್ನೇ ಕಿತ್ತೆಸೆದಿರುವ ಘಟನೆ ನಡೆದಿತ್ತು.

ಇದನ್ನೂ ಓದಿ:ದೇವಸ್ಥಾನದ ಬಳಿ ನಿಧಿಗೆ ಹುಡುಕಾಟ ನಡೆಸುತ್ತಿದ್ದ ಮೂವರು ಅಂದರ್, ಯಾವೂರಲ್ಲಿ?

ನಿಧಿಗಾಗಿ ಶಿವಲಿಂಗ ಕಿತ್ತೆಸೆದಿದ್ದ ಕಿರಾತಕರು

ಜಿಲ್ಲೆಯ ಚಿತ್ತಾಪುರ ತಾಲೂಕಿನ ಸೂಗೂರು ಎನ್ ಗ್ರಾಮದ ಹೊರವಲಯದಲ್ಲಿರುವ ಮಲ್ಲಿಕಾರ್ಜುನ ದೇವಸ್ಥಾನದ ಶಿವಲಿಂಗವನ್ನು ದುಷ್ಕರ್ಮಿಗಳು ಕಿತ್ತೆಸೆದಿದ್ದರು. ಶಿವಲಿಂಗ ಇದ್ದ ಜಾಗದಲ್ಲಿ ನಿಧಿಗಾಗಿ ಶೋಧ ನಡೆಸಿದ್ದು, ಮಲ್ಲಿಕಾರ್ಜುನ ಅನ್ನೋ ವ್ಯಕ್ತಿಯ ಜಾಗದಲ್ಲಿ ಪುಟ್ಟ ದೇವಸ್ಥಾನವಿತ್ತು. ದುಷ್ಕರ್ಮಿಗಳು ರಾತ್ರಿ ಯಾರು ಇಲ್ಲದ ಸಮಯದಲ್ಲಿ ನುಗ್ಗಿ, ಶಿವಲಿಂಗವನ್ನು ಕಿತ್ತು ಬೇರಡೆ ಇಟ್ಟು ನಿಧಿ ಹುಡುಕಾಟ ನಡೆಸಿದ್ದರು. ಅದೇ ಸ್ಥಳದಲ್ಲಿ ಪೂಜೆ ಕೂಡಾ ಮಾಡಿದ್ದರು. ಇನ್ನು ಅಂದು ಕಾರ್ ಹುಣ್ಣಿಮೆ ಇದ್ದಿದ್ದರಿಂದ, ಹುಣ್ಣಿಮೆ ಮತ್ತು ಅಮವಾಸ್ಯೆ ದಿನ ಪೂಜೆ ಮಾಡಿದ್ರೆ ನಿಧಿ ಸಿಗುತ್ತೆ ಅನ್ನೋ ನಂಬಿಕೆ ಕೆಲವರಲ್ಲಿದೆ. ಹುಣ್ಣಿಮೆ ದಿನವೇ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದುಷ್ಕರ್ಮಿಗಳು ನಿಧಿ ಹುಡುಕಾಟ ನಡೆಸಿದ್ದರು.

ದೇವಸ್ಥಾನದ ಹುಂಡಿ ಹೊತ್ತೊಯ್ದ ಕಳ್ಳರು

ಹಾವೇರಿ: ರಟ್ಟಿಹಳ್ಳಿ ತಾಲೂಕು ಪುರದಕೆರೆ ಗ್ರಾಮದಲ್ಲಿ ಬಸವೇಶ್ವರ ದೇವಸ್ಥಾನದ ಹುಂಡಿ ಕಳ್ಳತನ ಮಾಡಿ, ಓಪನ್ ಆಗದಿದ್ದಕ್ಕೆ ಅಲ್ಲಿಯೇ ಬಿಸಾಡಿ ಹೋದ ಘಟನೆ ನಡೆದಿದೆ. ಇನ್ನು ರಟ್ಟಿಹಳ್ಳಿ ತಾಲೂಕಿನಲ್ಲಿಯೇ ಬೀಡು ಬಿಟ್ಟಿರುವ ಕಳ್ಳರು, ಕಳೆದ 2 ತಿಂಗಳಿನಿಂದ ಹಲವು ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದಾರೆ. ಅದರಂತೆ ನಿನ್ನೆಯೂ ದೇವಸ್ಥಾನದ ಬೃಹತ್ ಗಾತ್ರದ ಹುಂಡಿ ಹೊತ್ತೊಯ್ದು ಒಡೆಯಲು ಯತ್ನಿಸಿದ್ದಾರೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:29 pm, Thu, 15 June 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ