AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕಿರುವವನ ತಿಥಿ ಕಾರ್ಡ್ ಹೊಡೆಸಿ ಜಮೀನಿನ ಹಣ ಲಪಟಾಯಿಸಲು ಸಂಬಂಧಿಕರ ಪ್ಲ್ಯಾನ್‌

ಹಣಕ್ಕಾಗಿ ಸಂಬಂಧಿಕರು ಎಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂಬುದಕ್ಕೆ ಈ ಸ್ಟೋರಿಯೇ ಉದಾಹರಣೆ, ಕೈಗಾರಿಕಾ ಪ್ರದೇಶಕ್ಕೆ ಸೇರ್ಪಡೆಗೊಂಡ ಜಮೀನಿನ ಹಣ ಲಪಟಾಯಿಸಲು ಪ್ಲ್ಯಾನ್‌ ಮಾಡಿದ ಸಂಬಂಧಿಕರು, ಬದುಕಿರುವವನ್ನನ್ನೇ ಸತ್ತಿದ್ದಾನೆಂದು ತಿಥಿ ಕಾರ್ಡ್ ಹೊಡೆಸಿ ಗೋಲ್‌ಮಾಲ್ ಮಾಡಿದ ಘಟನೆ ತುಮಕೂರು ತಾಲೂಕಿನ ಸೊರೆಕುಂಟೆ ಗ್ರಾಮದಲ್ಲಿ ನಡೆದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬದುಕಿರುವವನ ತಿಥಿ ಕಾರ್ಡ್ ಹೊಡೆಸಿ ಜಮೀನಿನ ಹಣ ಲಪಟಾಯಿಸಲು ಸಂಬಂಧಿಕರ ಪ್ಲ್ಯಾನ್‌
ಜಮೀನಿನ ಮೂಲ‌ ವಾರಸುದಾರ ಬಸವರಾಜು
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Oct 02, 2024 | 3:42 PM

Share

ತುಮಕೂರು, ಅ.02: ಕೈಗಾರಿಕಾ ಪ್ರದೇಶಕ್ಕೆ ಸೇರ್ಪಡೆಗೊಂಡ ಜಮೀನಿನ ಹಣ ಲಪಟಾಯಿಸಲು ಪ್ಲ್ಯಾನ್‌ ಮಾಡಿದ ಸಂಬಂಧಿಕರು, ಬದುಕಿರುವವನನ್ನ ಸತ್ತಿದ್ದಾನೆಂದು ತಿಥಿ ಕಾರ್ಡ್ ಹೊಡೆಸಿ ಗೋಲ್‌ಮಾಲ್ ಮಾಡಿದ ಘಟನೆ ತುಮಕೂರು ತಾಲೂಕಿನ ಸೊರೆಕುಂಟೆ ಗ್ರಾಮದಲ್ಲಿ ನಡೆದಿದೆ. ಇದಕ್ಕೆ ತುಮಕೂರಿನ ಹಿಂದಿನ ತಹಶೀಲ್ದಾರ್‌ ಸಿದ್ದೇಶ್‌ ಹಾಗೂ ಸಿಬ್ಬಂದಿ ಶಾಮೀಲಾಗಿರುವ ಆರೋಪ ಕೂಡ ಕೇಳಿಬಂದಿದೆ.

ಘಟನೆ ವಿವರ

ಜಿಲ್ಲೆಯ ಶಿರಾ ತಾಲೂಕಿನ ಬಸರಿಹಳ್ಳಿಯ ನಿವಾಸಿ ಬಸವರಾಜು ಅವರ ನಾಲ್ಕು ಎಕರೆ ಜಮೀನು, ಸೊರೆಕುಂಟೆ ಗ್ರಾಮದ ಸರ್ವೆ ನಂಬರ್‌ 41/44ರಲ್ಲಿ ಇದೆ. 1977 ರಿಂದ 1978ರಲ್ಲಿ ಬಸವರಾಜು ಎಂಬುವವರಿಗೆ ಇದನ್ನು ಮಂಜೂರು ಮಾಡಲಾಗಿದೆ. ಈ ಜಮೀನಿನ ಪಕ್ಕದಲ್ಲಿ ತುಮಕೂರು ತಾಲೂಕಿನ ಬೊಮ್ಮೇಗೌಡನಪಾಳ್ಯದ ನಿವಾಸಿ ಹಾಗೂ ಬಸವರಾಜು ಸಂಬಂಧಿಯಾದ ಆರೋಪಿ ನಂಜಯ್ಯ ಅವರ ಜಮೀನಿದೆ. ಈ ಮಧ್ಯೆ ಜಮೀನು ಕೈಗಾರಿಕಾ ಪ್ರದೇಶಕ್ಕೆ ಸೇರ್ಪಡೆ ಹಿನ್ನೆಲೆ ಪರಿಹಾರ ಪಡೆಯಲು  1997ರಲ್ಲಿ ನಕಲಿ ದಾಖಲೆ ಸೃಷ್ಟಿಸಿರುವ ನಂಜಯ್ಯ, ನಮ್ಮ ಮನೆತನದಲ್ಲಿ ಬಸವರಾಜು ಇದ್ದ ಎಂದು ಜಮೀನಿನ ಪರಿಹಾರದ ಹಣ ಲಪಾಟಿಯಿಸಲು ನಕಲಿ ಬಸವರಾಜಯ್ಯನ ಸೃಷ್ಟಿ ಮಾಡಿದ್ದಾರೆ.

ಇದನ್ನೂ ಓದಿ:ದಾಯಾದಿಗಳ ನಡುವೆ ಜಮೀನು ಕಲಹ; 20 ವರ್ಷ ಹಳೆಯ ಸಪೋಟ ಮರಗಳ ನಾಶ

ಜಮೀನಿನ ಮೂಲ‌ ವಾರಸುದಾರನಿಂದ ಗಂಭೀರ ಆರೋಪ

ಮೂಲ ಜಮೀನು ಮಾಲೀಕ ಬಸವರಾಜು ಬದುಕಿದ್ದರೂ ತಿಥಿ ಕಾರ್ಡ್ ಸೃಷ್ಟಿ ಮಾಡಿದ್ದು, ನಾನು ಬದುಕಿದ್ದರೂ ಸಾಯಿಸಿ ಹಣಕ್ಕಾಗಿ ಕೃತ್ಯವೆಂದು ರೈತ ಬಸವರಾಜು ಅಳಲು ತೋಡಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ, ನಂಜಯ್ಯ ಮಕ್ಕಳಾದ ಈಶ್ವರಯ್ಯ, ರುದ್ರಯ್ಯ ಅವರು ಅಧಿಕಾರಿಗಳ ಕುಮ್ಮಕ್ಕಿನಿಂದ ನಕಲಿ ದಾಖಲಿ ಸೃಷ್ಟಿಸಿ ಗೋಲ್‌ಮಾಲ್ ಮಾಡಿದ್ದಾರೆ ಎಂದು ಜಮೀನಿನ ಮೂಲ‌ ವಾರಸುದಾರ ಬಸವರಾಜು ಗಂಭೀರ ಆರೋಪ ಮಾಡಿದ್ದಾರೆ.

ಅಧಿಕಾರಿಗಳು ಶಾಮೀಲು ಆಗಿರುವ ಆರೋಪ

ರಾಷ್ಟ್ರೀಯ ಹೆದ್ದಾರಿ 48ಕ್ಕೆ ಹೊಂದಿಕೊಂಡಿರುವ ನಾಲ್ಕು ಎಕರೆ ಜಮೀನು ಇದಾಗಿದ್ದು, ಎಕರೆಗೆ 30 ಲಕ್ಷದಂತೆ ಒಟ್ಟು 1 ಕೋಟಿ 20 ಲಕ್ಷ ಹಣ ಹೊಡೆಯಲು ಪ್ಲ್ಯಾನ್‌ ಮಾಡಿ, ತುಮಕೂರಿನಲ್ಲಿ ಈ ಹಿಂದೆ ತಹಶೀಲ್ದಾರ್‌ ಆಗಿದ್ದ ಸಿದ್ದೇಶ್‌ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಸೇರಿಕೊಂಡು ಶಾಲಾ ದಾಖಲಾತಿ ಸೇರಿ ಹಲವು ನಕಲಿ ದಾಖಲೆ ಸೃಷ್ಟಿಸಿ ವಂಚಿಸಲು ಪ್ಲ್ಯಾನ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದೀಗ ನ್ಯಾಯಕ್ಕಾಗಿ ಮೂಲ ಜಮೀನುದಾರರ ಕುಟುಂಬ ಪರದಾಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ