AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿದವನ ಜೊತೆ ಮದುವೆಯಾಗಲು ಬಿಡದ ತಂದೆಯಿಂದ ಆತ್ಮಹತ್ಯೆಗೆ ಪ್ರಚೋದನೆ; ಮಗಳು ಸಾವನ್ನಪ್ಪಿದ 7 ದಿನದ ಬಳಿಕ ಸತ್ಯಾಂಶ ಬೆಳಕಿಗೆ

ಪ್ರೀತಿಸಿ ಮದುವೆಯಾಗುವುದಕ್ಕೆ ಮುಂದಾಗಿದ್ದ ಮಗಳನ್ನು ತಂದೆ, ಸಹೋದರ, ಚಿಕ್ಕಪ್ಪ ಸೇರಿ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪ ಜಿಲ್ಲೆಯ ಗುಬ್ಬಿ ತಾಲೂಕಿನ ಚಿಕ್ಕಹೆಡಿಗೇಹಳ್ಳಿಯಲ್ಲಿ ಕೇಳಿಬಂದಿದ್ದು, ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಪ್ರೀತಿಸಿದವನ ಜೊತೆ ಮದುವೆಯಾಗಲು ಬಿಡದ ತಂದೆಯಿಂದ ಆತ್ಮಹತ್ಯೆಗೆ ಪ್ರಚೋದನೆ; ಮಗಳು ಸಾವನ್ನಪ್ಪಿದ 7 ದಿನದ ಬಳಿಕ ಸತ್ಯಾಂಶ ಬೆಳಕಿಗೆ
ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Jun 16, 2023 | 3:07 PM

Share

ತುಮಕೂರು: ಪ್ರೀತಿಸಿ ಮದುವೆಯಾಗುವುದಕ್ಕೆ ಮುಂದಾಗಿದ್ದ ಮಗಳನ್ನು ತಂದೆ, ಸಹೋದರ, ಚಿಕ್ಕಪ್ಪ ಸೇರಿ ಆತ್ಮಹತ್ಯೆ (Suicide)ಗೆ ಪ್ರಚೋದಿಸಿದ ಆರೋಪ ಜಿಲ್ಲೆಯ ಗುಬ್ಬಿ(Gubbi) ತಾಲೂಕಿನ ಚಿಕ್ಕಹೆಡಿಗೇಹಳ್ಳಿಯಲ್ಲಿ ಕೇಳಿಬಂದಿದೆ. ಇದೇ ಜೂನ್​.9 ರಂದು ಮನೆಯಲ್ಲಿಯೇ ವಿಷ ಸೇವಿಸಿ ನೇತ್ರಾವತಿ (17) ಆತ್ಮಹತ್ಯೆ ಮಾಡಿಕೊಂಡಿದ್ದಳು. ಇನ್ನು ಈ ಕುರಿತು ತನಿಖೆ ಆರಂಭಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಪರಿಶಿಷ್ಟ ಜನಾಂಗದ ನೇತ್ರಾವತಿ, ಲಮಾಣಿ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಲು ಮುಂದಾಗಿದ್ದಳು. ಇದಕ್ಕೆ ವಿರೋಧಿಸಿದ ತಂದೆ ಪರಶುರಾಮ, ಸಹೋದರ ಶಿವರಾಜು, ಚಿಕ್ಕಪ್ಪ ತುಕಾರಾಂ ಅವರು ಮದುವೆಯಾಗುತ್ತಿಯ ಎಂದು ಆಕೆಯನ್ನ ನಿಂದಿಸಿ ವಿಷ ಕುಡಿ, ನೇಣು ಹಾಕಿಕೊ ಎಂದು ಪ್ರಚೋದಿಸುತ್ತಿದ್ದರಂತೆ. ಈ ಕುರಿತು ತನಿಖೆ ಆರಂಭಿಸಿದ ಪೊಲೀಸರಿಗೆ ಸತ್ಯಾಸತ್ಯತೆ ಬಹಿರಂಗವಾಗಿದ್ದು, ಮೂವರು ಆರೋಪಿಗಳನ್ನು ಇದೀಗ ಬಂಧಿಸಿದ್ದಾರೆ.

ಬೈಕ್ ಬೊಲೆರೋ ಪಿಕಪ್ ವಾಹನದ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಕಿತ್ತೂರು ಮುಖ್ಯರಸ್ತೆಯಲ್ಲಿ ಬೈಕ್ ಬೊಲೆರೋ ಪಿಕಪ್ ವಾಹನದ ನಡುವೆ ಅಪಘಾತವಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕುಶಾಲನಗರ ಮಂಜುನಾಥ್ (50) ಮೃತ ವ್ಯಕ್ತಿ. ಬೈಕ್‌ನಲ್ಲಿದ್ದ ಮಂಜುನಾಥ್ ಪತ್ನಿಗೆ ಗಾಯಗಳಾಗಿದ್ದು, ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Kodagu News: ಬೈಕ್​ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ದುರ್ಮರಣ

ಆ್ಯಕ್ವಿವ್ ಹೊಂಡಾಗೆ ಲಾರಿ ಡಿಕ್ಕಿ; ಓರ್ವ ವಿದ್ಯಾರ್ಥಿ ಸಾವು, ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಹಾಸನ: ನಗರದ ಸಂತೇಪೇಟೆ ಸರ್ಕಲ್‌ನಲ್ಲಿ ಆ್ಯಕ್ವಿವ್ ಹೊಂಡಾಗೆ ಲಾರಿ ಡಿಕ್ಕಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಚಿಕ್ಕಡಲೂರು ಗ್ರಾಮದ ಅಭಿಲಾಷ್ (22) ಮೃತ ಯುವಕ. ಇನ್ನು ಬದುಕುಳಿದ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಿತಿ ಗಂಭೀರವಾಗಿದೆ. ಹಾಸನದ ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದ ಇವರು, ಸ್ನೇಹಿತರೆಲ್ಲ ಬೈಕ್‌ನಲ್ಲಿ ಸಕಲೇಶಪುರಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತವಾಗಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Fri, 16 June 23

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್