AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakur News: ಏಕಶಿಲಾ ಬೆಟ್ಟದಲ್ಲಿ ಸಿಲುಕಿಕೊಂಡಿದ್ದ ತಂದೆ-ಮಗ ಬದುಕಿ ಬಂದಿದ್ದೇ ಒಂದು ರೋಚಕ

ಏಕಶಿಲಾ ಬೆಟ್ಟ ಹತ್ತಲು ಬೆಂಗಳೂರಿನಿಂದ ಪುತ್ರನ ಸಮೇತ ತಂದೆ ಬಂದಿದ್ದು, ಮಳೆಯಿಂದ ಬೆಟ್ಟದಲ್ಲಿ ಜಾರುವ ಆತಂಕ ಎದುರಾದ ಕಾರಣ ಬೆಟ್ಟದ ಅರ್ಧದಲ್ಲಿ ತಂದೆ ಮಗ ಕುಳಿತಿದ್ದಾರೆ.

Tumakur News: ಏಕಶಿಲಾ ಬೆಟ್ಟದಲ್ಲಿ ಸಿಲುಕಿಕೊಂಡಿದ್ದ ತಂದೆ-ಮಗ ಬದುಕಿ ಬಂದಿದ್ದೇ ಒಂದು ರೋಚಕ
ಮಧುಗಿರಿ ಪೊಲೀಸ್​ ಸಿಬ್ಬಂದಿಯಿಂದ ತಂದೆ ಮಗನ ರಕ್ಷಣೆ ಮಾಡಲಾಯಿತು.
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 18, 2022 | 11:06 AM

Share

ತುಮಕೂರು: ಜಿಲ್ಲೆಯ ಮದುಗಿರಿ ಪಟ್ಟಣದ ಏಕಶಿಲಾ ಬೆಟ್ಟದಲ್ಲಿ (Madhugiri Hills) ಸಿಲುಕಿಕೊಂಡಿದ್ದ ತಂದೆ-ಮಗನನ್ನು ಪೊಲೀಸರು ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಏಕಶಿಲಾ ಬೆಟ್ಟ ಹತ್ತಲು ಬೆಂಗಳೂರಿನಿಂದ ಪುತ್ರನ ಸಮೇತ ತಂದೆ ಬಂದಿದ್ದು, ಮಳೆಯಿಂದ ಬೆಟ್ಟದಲ್ಲಿ ಜಾರುವ ಆತಂಕ ಎದುರಾದ ಕಾರಣ ಬೆಟ್ಟದ ಅರ್ಧದಲ್ಲಿ ತಂದೆ ಮಗ ಕುಳಿತಿದ್ದಾರೆ. ಮಧುಗಿರಿ ಪೊಲೀಸರ ರಕ್ಷಣೆಗೆ ಮೊರೆ ಹೋಗಿದ್ದು, ಕೂಡಲೇ ಮಧುಗಿರಿ ಪಿಎಸ್​ಐ ರಮೇಶ್ ಹಾಗೂ ಸಿಬ್ಬಂದಿಯಿಂದ ಇಬ್ಬರನ್ನ ರಕ್ಷಣೆ ಮಾಡಲಾಗಿದೆ. ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮೈಸೂರು ಹೊರವಲಯದ ಹಳ್ಳಿಗಳ ನಿವಾಸಿಗಳಿಗೆ ಕಂಟಕವಾಗಿದ್ದ ಚಿರತೆ ಸೆರೆ, ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ

ಆಹಾರ ಅರಸುತ್ತ ಬಂದ ಜಿಂಕೆ ಮೇಲೆ ನಾಯಿಗಳು ದಾಳಿ

ಕಾರವಾರ: ಆಹಾರ ಅರಸುತ್ತ ನಾಡಿಗೆ ಬಂದ ಜಿಂಕೆ ಮೇಲೆ ಬೀದಿ ನಾಯಿಗಳು ದಾಳಿ ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಂಜಗಿ ಗ್ರಾಮದಲ್ಲಿ ನಡೆದಿದೆ. 3-4 ವರ್ಷದ ಜಿಂಕೆ ಗ್ರಾಮದ ಹೊರವಲಯದಲ್ಲಿ ಗರಿಕೆ ತಿನ್ನುತ್ತ ನಿಂತಿದ್ದಾಗ ನಾಯಿಗಳು ದಾಳಿದ್ದು, ಗ್ರಾಮಸ್ಥರಿಂದ ಜಿಂಕೆ ರಕ್ಷಣೆ ಮಾಡಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ, ಗಾಯಗೊಂಡ ಜಿಂಕೆಗೆ ಚಿಕಿತ್ಸೆ ನೀಡಿ ರಕ್ಷಣೆ ಮಾಡಿದರು.

ಇದನ್ನೂ ಓದಿ: ರಭಸವಾಗಿ ಹರಿಯುವ ವರದಾ ನದಿ ನೀರಿನಲ್ಲಿ ವೃದ್ಧನ ಹುಚ್ಚಾಟ; ಮೇಲಿಂದ ಜಿಗಿದು ಸ್ವಿಮ್ಮಿಂಗ್

ಬೋನಿಗೆ ಬಿದ್ದ ಚಿರತೆ

ಮೈಸೂರು: ತಾಲ್ಲೂಕು ರಟ್ಟನಹಳ್ಳಿ ಗ್ರಾಮದಲ್ಲಿ ಚಿರತೆ ಬೋನಿಗೆ ಬಿದ್ದಿರುವಂತಹ ಘಟನೆ ನಡೆದಿದೆ. ಹಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಭೀತಿ ಮೂಡಿಸಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಕುಮಾರ್ ಎಂಬುವರ ತೋಟದಲ್ಲಿ ಬೋನು ಇಡಲಾಗಿತ್ತು. ಸುಮಾರು ನಾಲ್ಕು ವರ್ಷದ ಗಂಡು ಚಿರತೆ ಬೋನಿಗೆ ಬಿದಿದ್ದು,  ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ ಮಾಡಲಾಗಿದೆ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ