AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಜೆಸಿ ಮಾಧುಸ್ವಾಮಿಗೆ ಜಿಲ್ಲಾ ಉಸ್ತುವಾರಿ ನೀಡಿ; ಕರ್ನಾಟಕ ಸರ್ಕಾರಕ್ಕೆ ಬೆಂಬಲಿಗರಿಂದ ಒತ್ತಾಯ

ಚಿಕ್ಕನಾಯಕನಹಳ್ಳಿಯಲ್ಲಿ ಧ್ವಜಾರೋಹಣ ಮಾಡದ ವಿಚಾರಕ್ಕೆ ಸಂಬಂಧಿಸಿ ಟಿವಿ9 ಜೊತೆ ಮಾತನಾಡಿದ ಅವರು, ಧ್ವಜಾರೋಹಣ ಕುರಿತು ಡಿಸಿ ಮೂಲಕ ಸ್ಪಷ್ಟನೆ ಕೇಳಲಾಗಿತ್ತು. ಚಿಕ್ಕನಾಯಕನಹಳ್ಳಿಯಲ್ಲಿ ಧ್ವಜಾರೋಹಣ ಮಾಡುವ ಕುರಿತು ಮೌಖಿಕವಾಗಿ ಕೇಳಲಾಗಿತ್ತು.

ಸಚಿವ ಜೆಸಿ ಮಾಧುಸ್ವಾಮಿಗೆ ಜಿಲ್ಲಾ ಉಸ್ತುವಾರಿ ನೀಡಿ; ಕರ್ನಾಟಕ ಸರ್ಕಾರಕ್ಕೆ ಬೆಂಬಲಿಗರಿಂದ ಒತ್ತಾಯ
ಕಾನೂನು ಸಚಿವ ಜೆಸಿ ಮಾಧುಸ್ವಾಮಿ
TV9 Web
| Edited By: |

Updated on: Jan 27, 2022 | 10:29 AM

Share

ತುಮಕೂರು: ಸಚಿವ ಜೆಸಿ ಮಾಧುಸ್ವಾಮಿಗೆ (JC Madhuswamy) ಜಿಲ್ಲಾ ಉಸ್ತುವಾರಿ ನೀಡಿ ಅಂತ ರಾಜ್ಯ ಸರ್ಕಾರಕ್ಕೆ ಮಾಧುಸ್ವಾಮಿ ಬೆಂಬಲಿಗರು ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಜಾತ್ಯತೀತವಾಗಿ ಕೆಲಸ ಮಾಡುತ್ತಿದ್ದಾರೆ. ನಿಷ್ಠಾವಂತ, ಸಮರ್ಥ ನಾಯಕ ಸಚಿವ ಮಾಧುಸ್ವಾಮಿ. ಅಂತಹವರಿಗೆ ಉಸ್ತುವಾರಿ ನೀಡದಿರುವುದು ನೋವಾಗಿದೆ. ತುಮಕೂರು (Tumkur) ಜಿಲ್ಲೆ ಬಗ್ಗೆ ಸಮಗ್ರ ಮಾಹಿತಿ ಗೊತ್ತಿದೆ. ಮಾಹಿತಿ ತಿಳಿದ ಮಾಧುಸ್ವಾಮಿಗೆ ಉಸ್ತುವಾರಿ ನೀಡಬೇಕಿತ್ತು. ಅದು ಬಿಟ್ಟು ಹೊರ ಜಿಲ್ಲೆಯವರಿಗೆ ನೀಡಿದ್ದು ಸರಿಯಲ್ಲ. ಕೂಡಲೇ ಮಾಧುಸ್ವಾಮಿಗೆ ಜಿಲ್ಲಾ ಉಸ್ತುವಾರಿ ನೀಡಿ. ಉಸ್ತುವಾರಿ ನೀಡದಿದ್ದರೆ ಹೋರಾಟ ಮಾಡುತ್ತೇವೆ ಅಂತ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಮಾಧುಸ್ವಾಮಿ, ತುಮಕೂರು ಜಿಲ್ಲೆ ಉಸ್ತುವಾರಿ ನೀಡದ್ದಕ್ಕೆ ನೋವು ಸಹಜ. ಬೇರೆ ಜಿಲ್ಲೆ ಮಾಹಿತಿ ಇರಲ್ಲ, ಹೀಗಾಗಿ ಹೋಗಲು ಇಷ್ಟಪಡಲ್ಲ. ಬೇರೆ ಜಿಲ್ಲೆಗೆ ಹೋಗಿ ಅಂದಿದ್ದರು ನಾನೇ ಹೋಗಿಲ್ಲ. ಉಸ್ತುವಾರಿ ನೀಡದೇ ಇದ್ದಿದ್ದಕ್ಕೆ ಯಾವುದೇ ಅಸಮಾಧಾನವಿಲ್ಲ. ಸಂಪುಟ ಸಭೆ ಇರುವ ಹಿನ್ನೆಲೆ ಬೆಂಗಳೂರಿಗೆ ಹೋಗುತ್ತೇನೆ ಅಂತ ತಿಳಿಸಿದರು.

ಧ್ವಜಾರೋಹಣ ಮಾಡದಕ್ಕೆ ಮಾಧುಸ್ವಾಮಿ ಸ್ಪಷ್ಟತೆ: ಚಿಕ್ಕನಾಯಕನಹಳ್ಳಿಯಲ್ಲಿ ಧ್ವಜಾರೋಹಣ ಮಾಡದ ವಿಚಾರಕ್ಕೆ ಸಂಬಂಧಿಸಿ ಟಿವಿ9 ಜೊತೆ ಮಾತನಾಡಿದ ಅವರು, ಧ್ವಜಾರೋಹಣ ಕುರಿತು ಡಿಸಿ ಮೂಲಕ ಸ್ಪಷ್ಟನೆ ಕೇಳಲಾಗಿತ್ತು. ಚಿಕ್ಕನಾಯಕನಹಳ್ಳಿಯಲ್ಲಿ ಧ್ವಜಾರೋಹಣ ಮಾಡುವ ಕುರಿತು ಮೌಖಿಕವಾಗಿ ಕೇಳಲಾಗಿತ್ತು. ಚಿಕ್ಕನಾಯಕನಹಳ್ಳಿ ತಾಲೂಕು ಕೇಂದ್ರದಲ್ಲಿ ಧ್ವಜಾರೋಹಣ ಮಾಡುವ ಬಗ್ಗೆ ನಿರ್ದೇಶನ ನೀಡಲು ಪತ್ರ ಬರೆದಿದ್ದರು. ಆದರೆ ಡಿಸಿ ಬರೆದಿರುವ ಪತ್ರಕ್ಕೆ ಉತ್ತರ ನೀಡಿಲ್ಲ. ಸರ್ಕಾರದಿಂದ ನಿರ್ದೇಶನ ಬಾರದೇ ಹೇಗೆ ಧ್ವಜಾರೋಹಣ ಮಾಡಲಿ. ನಿರ್ದೇಶನ ಬಂದಿಲ್ಲ ಹೀಗಾಗಿ ಚಿಕ್ಕನಾಯಕನಹಳ್ಳಿಗೆ ಹೋಗಿಲ್ಲ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು.

ಬೆಂಗಳೂರಿಗೆ ತೆರಳಲಿರುವ ಮಾಧುಸ್ವಾಮಿ: ಕಾನೂನು ಹಾಗೂ ಸಂಸದೀಯ ಸಚಿವ ಮಾಧುಸ್ವಾಮಿ ಇಂದು ಬೆಂಗಳೂರಿಗೆ ತೆರಳಲಿದ್ದಾರೆ. ಇಂದು ಕ್ಯಾಬಿನೆಟ್ ಸಭೆ ಇರುವ ಹಿನ್ನೆಲೆ ಸಭೆಯಲ್ಲಿ ಭಾಗಿಯಾಗಲು ಬೆಂಗಳೂರಿಗೆ ತೆರಳುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರ ಗ್ರಾಮದ ಮನೆಯಲ್ಲಿದ್ದರು.

ಇದನ್ನೂ ಓದಿ

21ನೇ ವಯಸ್ಸಿನಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ದತ್ತು ಪಡೆದ ರವೀನಾ ಟಂಡನ್​ ಆ ವಿಚಾರ ಮುಚ್ಚಿಟ್ಟಿದ್ದೇಕೆ?

ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿಲ್ಲ; ವಸ್ತ್ರಸಂಹಿತೆ ನಿಗದಿ ಬಗ್ಗೆ ಚಿಂಥನ- ಮಂಥನಕ್ಕೆ ಮುಂದಾದ ಪದವಿ ಪೂರ್ವ ಶಿಕ್ಷಣ ಇಲಾಖೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ