AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿಗೆ ನೂತನ ಜಿಲ್ಲಾಡಳಿತ ಭವನ ಸೇರಿದಂತೆ ವಿವಿಧ ಯೋಜನೆಗಳಿಗೆ ಭರಪೂರ ಅನುದಾನ ಕೇಳಿದ ಪರಮೇಶ್ವರ್

ತುಮಕೂರು ಜಿಲ್ಲೆಯಲ್ಲಿ ಸುಮಾರು 657 ಕೋಟಿ ವೆಚ್ಚದ ಕಾಮಗಾರಿಗಳ ಉದ್ವಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಜಿಲ್ಲೆಗೆ ನೂತನ ಜಿಲ್ಲಾಡಳಿತ ಭವನ, ಬೆಂಗಳೂರು ಮೆಟ್ರೋ ಸಂಪರ್ಕ ಸೇರಿದಂತೆ ಅನೇಕ ಯೋಜನೆಗಳಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ತುಮಕೂರಿಗೆ ನೂತನ ಜಿಲ್ಲಾಡಳಿತ ಭವನ ಸೇರಿದಂತೆ ವಿವಿಧ ಯೋಜನೆಗಳಿಗೆ ಭರಪೂರ ಅನುದಾನ ಕೇಳಿದ ಪರಮೇಶ್ವರ್
ಡಾ.ಜಿ.ಪರಮೇಶ್ವರ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: Rakesh Nayak Manchi|

Updated on: Jan 29, 2024 | 2:30 PM

Share

ತುಮಕೂರು, ಜ.29: ನೂತನ ಜಿಲ್ಲಾಡಳಿತ ಭವನ ನಿರ್ಮಾಣ, ಬೆಂಗಳೂರು ಮೆಟ್ರೋ ಸಂಪರ್ಕ ವಿಸ್ತರಣೆ ಸೇರಿದಂತೆ ಅನೇಕ ಯೋಜನೆಗಳಿಗೆ ತುಮಕೂರು (Tumkur) ಜಿಲ್ಲೆಗೆ ಗೃಹಸಚಿವ ಡಾ.ಜಿ. ಪರಮೇಶ್ವರ (Dr.G.Parmeshwara) ಅವರು ಭರಪೂರ ಅನುದಾನವನ್ನು ಕೇಳಿದ್ದಾರೆ. ಸುಮಾರು 657 ಕೋಟಿ ವೆಚ್ಚದ ಕಾಮಗಾರಿಗಳ ಉದ್ವಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅನುದಾನಕ್ಕೆ ಬೇಡಿಕೆ ಇಟ್ಟರು.

ಜಿಲ್ಲೆಗೆ ನೂತನ ಜಿಲ್ಲಾಡಳಿತ ಭವನಕ್ಕೆ ಅನುದಾನ ಕೇಳಿದ ಪರಮೇಶ್ವರ್, 100 ಕೋಟಿ ವೆಚ್ಚದಲ್ಲಿ ಮಂಜೂರು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ‌ ಮಾಡಿದ್ದಾರೆ. ತುಮಕೂರು ವೇಗವಾಗಿ ಬೆಳೆಯುತ್ತಿದೆ. ಬೆಂಗಳೂರು ಸಂಪರ್ಕ ಮಾಡಲು ಮೆಟ್ರೋ ಯೋಜನೆ ‌ಮಂಜೂರು ಮಾಡಬೇಕು. ಈ ಬಗ್ಗೆ ನಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ ಎಂದರು.

2013 ರಿಂದ 2018 ವರೆಗೂ ಆಡಳಿತ ‌ಇದ್ದಾಗ ಸಿದ್ದರಾಮಯ್ಯ ಅವರು ಪಾವಗಡ ಭಾಗಕ್ಕೆ 2300 ಕೋಟಿ ನೀಡಿದ್ದರು. ಎತ್ತಿನಹೊಳೆ ಯೋಜನಗೆ 13 ಸಾವಿರ ಕೋಟಿ ನೀಡಿದ್ದಾರೆ. ನಾವು ಇದನ್ನು ಸ್ಮರಿಸುತ್ತೇವೆ ಎಂದರು.

ತುಮಕೂರು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 35 ವಾರ್ಡ್​ಗಳಲ್ಲಿ ಕೇವಲ 6 ವರ್ಡ್​ಗಳಿಗೆ ಮಾತ್ರ ಹಣ ಬಂದಿದೆ. ಇನ್ನುಳಿದ 29 ವಾರ್ಡ್​ಗಳಿಗೆ ಹಣ ಬಂದಿಲ್ಲ. ಹೀಗಾಗಿ ಈ‌ಬಾರಿ‌ ಬಜೆಟ್​ನಲ್ಲಿ 500 ಕೋಟಿ ರೂಪಾಯಿ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಬಿವೈ ರಾಘವೇಂದ್ರ ಬಗ್ಗೆ ಶಾಮನೂರು ಶಿವಶಂಕರಪ್ಪ ಹೇಳಿದ ಮಾತು ವೈಯಕ್ತಿಕವಾದದ್ದು: ಜಿ ಪರಮೇಶ್ವರ್, ಗೃಹ ಸಚಿವ

ಇಂದು ತುಮಕೂರಿಗೆ ಐತಿಹಾಸಿಕ ದಿನ. ಸುಮಾರು 657 ಕೋಟಿ ವೆಚ್ಚಕ್ಕೆ ಉದ್ವಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸುಮಾರು 120 ಅಡಿಗಲ್ಲು ಹಾಕಿದ್ದೇವೆ‌. ಇಷ್ಟೊಂದು ಪ್ರಮಾಣದಲ್ಲಿ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆ ನೆರವೇರುತ್ತಿರುವುದು ತುಮಕೂರು ಇತಿಹಾಸದಲ್ಲಿ ಮೊದಲು ಎಂದರು.

ಈ ಬಾರಿ ಕರ್ನಾಟಕದಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ಕೊಟ್ಟಿದ್ದಾರೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇದ್ದಾರೆ. ರಾಜ್ಯದಲ್ಲಿ ಪ್ರವಾಸ ಮಾಡಿದಾಗ ಜನರ ಕಲ್ಯಾಣಕ್ಕಾಗಿ ನಾವು ಇರುತ್ತಿವೆ ಅಂತಾ ಭರವಸೆ ಕೊಟ್ಟಿದ್ದರು. ಅದರಂತೆ ಸರ್ಕಾರ ರಚನೆಯಾದ ನಂತರ ನಡೆದ ಮೊದಲ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳ ಜಾರಿಗೆ ಆದೇಶ ಹೊರಡಿಸುವ ಕೆಲಸ ಮಾಡಲಾಗಿತ್ತು. ಅದರಂತೆ 38 ಸಾವಿರ ಕೋಟಿ ಖರ್ಚು ಮಾಡಿ ಐದು ಗ್ಯಾರಂಟಿ ಅನುಷ್ಠಾನ ಮಾಡಿದ್ದೇವೆ ಎಂದರು.

ಎತ್ತಿ‌ನಹೊಳೆ ಯೋಜನೆಗೆ ಈ ಬಾರಿ ಹಣ ಬೇಕು. ಮಧುಗಿರಿಯಲ್ಲಿ ಏಕಶಿಲಾ ಬೆಟ್ಟ ಇದೆ. ರೂಪ್ ವೇಗೆ ಅನುದಾನ ನೀಡಬೇಕು. ಭದ್ರಾ ಮೇಲ್ದಂಡೆ ಯೋಜನೆ ನೆನಗುದಿಗೆ ಬಿದ್ದಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆ ಮಾಡುತ್ತೇವೆ ಅಂತಾ ಹೇಳಿತ್ತು. ಬಳಿಕ ಸಮ್ಮನಾಗಿದೆ. ಆದರೆ ರಾಜ್ಯ ಸರ್ಕಾರ ಇದಕ್ಕೆ ಹಣ ಒದಗಿಸಬೇಕಿದೆ ಎಂದು ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ