AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಳಿದ 105 ಶಾಸಕರು ಇಲ್ಲದಿದ್ದರೆ ನಾವು ಮಂತ್ರಿಗಳಾಗುತ್ತಿದ್ದೆವಾ? ಮುನಿರತ್ನ ಪ್ರಶ್ನೆ

2 ವರ್ಷ ನಾನು ಯಾವುದೇ ಅಧಿಕಾರ ಇಲ್ಲದೆ ಸುಮ್ಮನಿದ್ದೆ. ಪಕ್ಷದ ಕೆಲಸ ಮಾಡಿಕೊಂಡಿದ್ದೆ, ಇಂದು ಪಕ್ಷ ಗುರುತಿಸಿದೆ. ತಾಳ್ಮೆಯಿಂದ ಇರಬೇಕು, ಎಲ್ಲ ಇವತ್ತೇ ಆಗಬೇಕಂದ್ರೆ ಹೇಗೆ? ನೀವು ಬಂದಿರುವ ಉದ್ದೇಶ ಏನು ಎಂದು ಮುನಿರತ್ನ ಪ್ರಶ್ನಿಸಿದ್ದಾರೆ.

ಉಳಿದ 105 ಶಾಸಕರು ಇಲ್ಲದಿದ್ದರೆ ನಾವು ಮಂತ್ರಿಗಳಾಗುತ್ತಿದ್ದೆವಾ?  ಮುನಿರತ್ನ ಪ್ರಶ್ನೆ
ಮುನಿರತ್ನ
TV9 Web
| Edited By: |

Updated on:Aug 08, 2021 | 9:54 PM

Share

ತುಮಕೂರು: ರಾಜ್ಯ ಸಚಿವ ಸಂಪುಟದಲ್ಲಿ ಕೇಳಿದ್ದ ಖಾತೆ ನೀಡಿಲ್ಲವೆಂದು ಕೆಲ ಸಚಿವರು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ನೂತನ ತೋಟಗಾರಿಕಾ ಸಚಿವ ಮುನಿರತ್ನ ಸಹ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಸಚಿವರು ಯಾಕೆ ದೊಡ್ಡ ದೊಡ್ಡ ಖಾತೆ ಬೇಕು ಎಂದು ಕೇಳೋದು? ನನ್ನ ಪ್ರಕಾರ ಆ ರೀತಿ ಕೇಳುವುದು ತಪ್ಪು. 2 ವರ್ಷ ನಾನು ಯಾವುದೇ ಅಧಿಕಾರ ಇಲ್ಲದೆ ಸುಮ್ಮನಿದ್ದೆ. ಪಕ್ಷದ ಕೆಲಸ ಮಾಡಿಕೊಂಡಿದ್ದೆ, ಇಂದು ಪಕ್ಷ ಗುರುತಿಸಿದೆ. ತಾಳ್ಮೆಯಿಂದ ಇರಬೇಕು, ಎಲ್ಲ ಇವತ್ತೇ ಆಗಬೇಕಂದ್ರೆ ಹೇಗೆ? ನೀವು ಬಂದಿರುವ ಉದ್ದೇಶ ಏನು ಎಂದು ಮುನಿರತ್ನ ಪ್ರಶ್ನಿಸಿದ್ದಾರೆ. ಇವತ್ತು ಏನು ಸಿಗುತ್ತದೆಯೋ ಅದನ್ನು ಅನುಭವಿಸಿ ಮತ್ತೆ ಹೋಗ್ಬೇಕಾ? ಈಗ ಅನುಭವಿಸಿ ಮತ್ತೆ ಹೋಗಬೇಕು ಎಂಬ ಉದ್ದೇಶವೇ? 105 ಶಾಸಕರು ಇಲ್ಲದಿದ್ದರೆ ನಾವು ಮಂತ್ರಿಗಳಾಗುತ್ತಿದ್ವಾ? 105 ಶಾಸಕರು ಇದ್ದಿದ್ದಕ್ಕೆ ಅಲ್ವಾ ನಾವು ಮಂತ್ರಿಗಳಾಗಿದ್ದು? ಎಂದು ಅವರು ಪ್ರಶ್ನಿಸಿದ್ದಾರೆ. 

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನೂತನ ತೋಟಗಾರಿಕಾ ಸಚಿವ ಸಚಿವ ಮುನಿರತ್ನ ತಮ್ಮ ಖಾತೆಯ ಬಗ್ಗೆ ಆಕ್ಷೇಪವೆತ್ತಿರುವ ಕೆಲವು ಸಚಿವರಿಗೆ ಈ ಪ್ರಶ್ನೆ ಕೇಳಿದ್ದಾರೆ. ಸಿಎಂ ಬದಲಾವಣೆಯಿಂದ ಯಾವ ಅಭದ್ರತೆಯೂ ಇಲ್ಲ. ನಾನು ಬಿಜೆಪಿ ಸದಸ್ಯನಾಗಿ, ಕಾರ್ಯಕರ್ತನಾಗಿ ಇಲ್ಲಿದ್ದೇನೆ. ಖಾತೆ ಕೊಟ್ಟರೂ ಹೀಗೆ, ಕೊಡದಿದ್ದರೂ ಹೀಗೆ ಇರುತ್ತೇನೆ ಎಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಚಿವ ಮುನಿರತ್ನ ಸ್ಪಷ್ಟಪಡಿಸಿದರು.

ಇದನ್ನೂ ಓದಿ:  

ಕೇಳಿದ ಖಾತೆ ನೀಡಿಲ್ಲವೆಂದು ಆನಂದ್ ಸಿಂಗ್ ಅಸಮಾಧಾನ; ಸಿಎಂ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದ ಸಚಿವ

ಖಾತೆ ಬದಲಾವಣೆ ತಕ್ಷಣಕ್ಕೆ ಸಾಧ್ಯವಿಲ್ಲ ಎಂದಿರುವ ಸಿಎಂ ಬೊಮ್ಮಾಯಿ; ಅರೆ ಮನಸ್ಸಿನಿಂದ ಹೊರಟ ಎಂಟಿಬಿ ನಾಗರಾಜ್

(Karnataka horticulture Minister Munirathna says from the help of other 105 BJP MLAs we are became Ministers)

Published On - 8:45 pm, Sun, 8 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?