AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಳಿದ 105 ಶಾಸಕರು ಇಲ್ಲದಿದ್ದರೆ ನಾವು ಮಂತ್ರಿಗಳಾಗುತ್ತಿದ್ದೆವಾ? ಮುನಿರತ್ನ ಪ್ರಶ್ನೆ

2 ವರ್ಷ ನಾನು ಯಾವುದೇ ಅಧಿಕಾರ ಇಲ್ಲದೆ ಸುಮ್ಮನಿದ್ದೆ. ಪಕ್ಷದ ಕೆಲಸ ಮಾಡಿಕೊಂಡಿದ್ದೆ, ಇಂದು ಪಕ್ಷ ಗುರುತಿಸಿದೆ. ತಾಳ್ಮೆಯಿಂದ ಇರಬೇಕು, ಎಲ್ಲ ಇವತ್ತೇ ಆಗಬೇಕಂದ್ರೆ ಹೇಗೆ? ನೀವು ಬಂದಿರುವ ಉದ್ದೇಶ ಏನು ಎಂದು ಮುನಿರತ್ನ ಪ್ರಶ್ನಿಸಿದ್ದಾರೆ.

ಉಳಿದ 105 ಶಾಸಕರು ಇಲ್ಲದಿದ್ದರೆ ನಾವು ಮಂತ್ರಿಗಳಾಗುತ್ತಿದ್ದೆವಾ?  ಮುನಿರತ್ನ ಪ್ರಶ್ನೆ
ಮುನಿರತ್ನ
TV9 Web
| Edited By: |

Updated on:Aug 08, 2021 | 9:54 PM

Share

ತುಮಕೂರು: ರಾಜ್ಯ ಸಚಿವ ಸಂಪುಟದಲ್ಲಿ ಕೇಳಿದ್ದ ಖಾತೆ ನೀಡಿಲ್ಲವೆಂದು ಕೆಲ ಸಚಿವರು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ನೂತನ ತೋಟಗಾರಿಕಾ ಸಚಿವ ಮುನಿರತ್ನ ಸಹ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಸಚಿವರು ಯಾಕೆ ದೊಡ್ಡ ದೊಡ್ಡ ಖಾತೆ ಬೇಕು ಎಂದು ಕೇಳೋದು? ನನ್ನ ಪ್ರಕಾರ ಆ ರೀತಿ ಕೇಳುವುದು ತಪ್ಪು. 2 ವರ್ಷ ನಾನು ಯಾವುದೇ ಅಧಿಕಾರ ಇಲ್ಲದೆ ಸುಮ್ಮನಿದ್ದೆ. ಪಕ್ಷದ ಕೆಲಸ ಮಾಡಿಕೊಂಡಿದ್ದೆ, ಇಂದು ಪಕ್ಷ ಗುರುತಿಸಿದೆ. ತಾಳ್ಮೆಯಿಂದ ಇರಬೇಕು, ಎಲ್ಲ ಇವತ್ತೇ ಆಗಬೇಕಂದ್ರೆ ಹೇಗೆ? ನೀವು ಬಂದಿರುವ ಉದ್ದೇಶ ಏನು ಎಂದು ಮುನಿರತ್ನ ಪ್ರಶ್ನಿಸಿದ್ದಾರೆ. ಇವತ್ತು ಏನು ಸಿಗುತ್ತದೆಯೋ ಅದನ್ನು ಅನುಭವಿಸಿ ಮತ್ತೆ ಹೋಗ್ಬೇಕಾ? ಈಗ ಅನುಭವಿಸಿ ಮತ್ತೆ ಹೋಗಬೇಕು ಎಂಬ ಉದ್ದೇಶವೇ? 105 ಶಾಸಕರು ಇಲ್ಲದಿದ್ದರೆ ನಾವು ಮಂತ್ರಿಗಳಾಗುತ್ತಿದ್ವಾ? 105 ಶಾಸಕರು ಇದ್ದಿದ್ದಕ್ಕೆ ಅಲ್ವಾ ನಾವು ಮಂತ್ರಿಗಳಾಗಿದ್ದು? ಎಂದು ಅವರು ಪ್ರಶ್ನಿಸಿದ್ದಾರೆ. 

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನೂತನ ತೋಟಗಾರಿಕಾ ಸಚಿವ ಸಚಿವ ಮುನಿರತ್ನ ತಮ್ಮ ಖಾತೆಯ ಬಗ್ಗೆ ಆಕ್ಷೇಪವೆತ್ತಿರುವ ಕೆಲವು ಸಚಿವರಿಗೆ ಈ ಪ್ರಶ್ನೆ ಕೇಳಿದ್ದಾರೆ. ಸಿಎಂ ಬದಲಾವಣೆಯಿಂದ ಯಾವ ಅಭದ್ರತೆಯೂ ಇಲ್ಲ. ನಾನು ಬಿಜೆಪಿ ಸದಸ್ಯನಾಗಿ, ಕಾರ್ಯಕರ್ತನಾಗಿ ಇಲ್ಲಿದ್ದೇನೆ. ಖಾತೆ ಕೊಟ್ಟರೂ ಹೀಗೆ, ಕೊಡದಿದ್ದರೂ ಹೀಗೆ ಇರುತ್ತೇನೆ ಎಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಚಿವ ಮುನಿರತ್ನ ಸ್ಪಷ್ಟಪಡಿಸಿದರು.

ಇದನ್ನೂ ಓದಿ:  

ಕೇಳಿದ ಖಾತೆ ನೀಡಿಲ್ಲವೆಂದು ಆನಂದ್ ಸಿಂಗ್ ಅಸಮಾಧಾನ; ಸಿಎಂ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದ ಸಚಿವ

ಖಾತೆ ಬದಲಾವಣೆ ತಕ್ಷಣಕ್ಕೆ ಸಾಧ್ಯವಿಲ್ಲ ಎಂದಿರುವ ಸಿಎಂ ಬೊಮ್ಮಾಯಿ; ಅರೆ ಮನಸ್ಸಿನಿಂದ ಹೊರಟ ಎಂಟಿಬಿ ನಾಗರಾಜ್

(Karnataka horticulture Minister Munirathna says from the help of other 105 BJP MLAs we are became Ministers)

Published On - 8:45 pm, Sun, 8 August 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ