AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ವ್ಯಕ್ತಿಯ ಹೆಸರಿನಲ್ಲಿ ಮತದಾನ, ನಕಲಿ ಮತದಾನ; ನಗರಸಭೆ, ಪುರಸಭೆ ಚುನಾವಣೆ ನಡುವೆ ಗಲಾಟೆ

ನಕಲಿ ಮತದಾನ ಮಾಡಲು ಬಂದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೇರೆಯವರ ಹೆಸರಿನಲ್ಲಿ ಮತದಾನ ಮಾಡಲು ಬಂದ ಮಹಿಳೆ ಮತ್ತು ಇಬ್ಬರು ಪುರುಷರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೃತ ವ್ಯಕ್ತಿಯ ಹೆಸರಿನಲ್ಲಿ ಮತದಾನ, ನಕಲಿ ಮತದಾನ; ನಗರಸಭೆ, ಪುರಸಭೆ ಚುನಾವಣೆ ನಡುವೆ ಗಲಾಟೆ
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on:Dec 27, 2021 | 4:00 PM

ತುಮಕೂರು: ತುಮಕೂರು ಜಿಲ್ಲೆಯ ಶಿರಾ ನಗರಸಭೆ ಚುನಾವಣೆ ವೇಳೆ ವ್ಯಕ್ತಿ ಒಬ್ಬರು ಮೃತ ವ್ಯಕ್ತಿಯ ಹೆಸರಿನಲ್ಲಿ ವೋಟ್ ಮಾಡಿದ ಘಟನೆ ನಡೆದಿದೆ. ಶಿರಾದ 23ನೇ ವಾರ್ಡ್ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ಮೃತ ಅಯೂಬ್ ಖಾನ್ ಹೆಸರಿನಲ್ಲಿ ಮತ ಚಲಾವಣೆ ಮಾಡಿದ್ದಾರೆ. ಇದೀಗ ಮತ ಚಲಾಯಿಸಿರುವ ವ್ಯಕ್ತಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿರಾ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಕಲಿ ಮತದಾನ ಮಾಡಲು ಬಂದವರಿಗೆ ಬಿಜೆಪಿ ಕಾರ್ಯಕರ್ತರಿಂದ ಗೂಸಾ ಸಿಕ್ಕಿದೆ. ಆನೇಕಲ್ ತಾಲೂಕಿನ ಚಂದಾಪುರ ಪುರಸಭೆ ವಾರ್ಡ್ 20ರಲ್ಲಿ ಗಲಾಟೆ ನಡೆದಿದೆ. ನಕಲಿ ಮತದಾನ ಮಾಡಲು ಬಂದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೇರೆಯವರ ಹೆಸರಿನಲ್ಲಿ ಮತದಾನ ಮಾಡಲು ಬಂದ ಮಹಿಳೆ ಮತ್ತು ಇಬ್ಬರು ಪುರುಷರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮತದಾನಕ್ಕೆ ಬಂದಿದ್ದ ಕಾಂಗ್ರೆಸ್ ಅಭ್ಯರ್ಥಿ ತಾಯಿ ಸಾಮವ್ವ ಹೆಸರಿನಲ್ಲಿ ಅದಾಗಲೇ ಮತ್ತೊಬ್ಬ ಮಹಿಳೆ ಮತ ಹಾಕಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಪರಶುರಾಮ ತಾಯಿ ಸಾಮವ್ವ ಬರುವ ವೇಳೆ ಮತ್ತೊಬ್ಬ ಮಹಿಳೆ ಆಕೆಯ ಹೆಸರಿನಲ್ಲಿ ಮತ ಚಲಾಯಿಸಿದ್ದರು. ಯಾದಗಿರಿ ಜಿಲ್ಲೆಯ ಪುರಸಭೆಗೆ ನಡೆಯುತ್ತಿರುವ ಮತದಾನ ವೇಳೆ ಘಟನೆ ನಡೆದಿದೆ. ಇದನ್ನು ವಿರೋಧಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮತದಾನ ಮಾಡಲು ಅವಕಾಶ ನೀಡುವಂತೆ ಒತ್ತಾಯ ಕೇಳಿಬಂದಿದೆ. ಆದರೆ, ಮತದಾನಕ್ಕೆ ಸಾಮವ್ವಗೆ ಅಧಿಕಾರಿಗಳು ಅವಕಾಶ ನೀಡಿಲ್ಲ.

ಮತಗಟ್ಟೆ ಒಳಗೆ ಹೋಗಲು ಅನುಮತಿ ನಿರಾಕರಣೆ ಹಿನ್ನೆಲೆ ಮತಗಟ್ಟೆಯ ಬಳಿ ಕಾಂಗ್ರೆಸ್ ಮುಖಂಡರಿಂದ ಗದ್ದಲ ಉಂಟಾಗಿದೆ. ಬೇಕಾಬಿಟ್ಟಿ ಹೋಗುತ್ತಿದ್ದವರನ್ನು ಪೊಲೀಸರು ತಡೆದಿದ್ದರು. ಪೊಲೀಸರು ತಡೆದಿದ್ದಕ್ಕೆ ‘ಕೈ’ ಮುಖಂಡರಿಂದ ಗಲಾಟೆ ನಡೆದಿದೆ. ಯಾದಗಿರಿ ಜಿಲ್ಲೆಯ ಕಕ್ಕೇರಾ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಘಟನೆ ನಡೆದಿದೆ.

ಚುನಾವಣಾ ಅಧಿಕಾರಿಗಳ ನಿರ್ಲಕ್ಷ್ಯ: ತಾಯಿಯನ್ನು ಎತ್ತಿಕೊಂಡು ಬಂದು ಮತದಾನ ಮಾಡಿದ ಮಗ ಯಾದಗಿರಿ ಕೆಂಭಾವಿ ಪುರಸಭೆ ವಾರ್ಡ್ ನಂ.1 ರಲ್ಲಿ‌ ಮತದಾನ ವೇಳೆ ಚುನಾವಣಾ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದಿದೆ. ಮಗ ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತದಾನ ಮಾಡಿದ ಘಟನೆ ನಡೆದಿದೆ. ವ್ಹೀಲ್ ಚೇರ್ ವ್ಯವಸ್ಥೆ ಇಲ್ಲದಕ್ಕೆ ತಾಯಿಯನ್ನ ಎತ್ತಿಕೊಂಡು ಬಂದ ಮಗ ಮತದಾನ ಮಾಡಿಸಿದ್ದಾರೆ. ಮತಗಟ್ಟೆ ಕೇಂದ್ರದಲ್ಲಿ ತಾಯಿಯನ್ನ ಕೂರಿಸಿ ತಾಯಿಯ ಮತ ಚಲಾಯಿಸಲಾಗಿದೆ.

ಹಸಮಣೆ ಏರಿದ ಬಳಿಕ ಮತದಾನ ಮಾಡಿದ ನವ ವಧುವರರು ಹಸಮಣೆ ಏರಿದ ಬಳಿಕ ನವ ವಧುವರರು ಮತದಾನ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಪುರಸಭೆಯಗೆ ನಡೆದ ಚುನಾವಣೆ ವೇಳೆ ನಡೆದಿದೆ. ಮಸ್ಕಿಯ ಪ್ರಾಥಮಿಕ ಶಾಲೆಯ ವಾರ್ಡ್ ನಂ 5ರ ಮತಗಟ್ಟಿಯಲ್ಲಿ ಮತದಾನ ಮಾಡಲಾಗಿದೆ. ನವ ದಂಪತಿಗಳಾದ ಮಂಜುನಾಥ- ಸವಿತಾ ಹಾಗೂ ಮಹೇಶ್- ಶಾಂತರಿಂದ ಮತ ಚಲಾವಣೆ ಮಾಡಲಾಗಿದೆ. ಮತ ಮಾರಿಕೊಳ್ಳದಂತೆ ಮದುವೆಗೆ ಬಂದವರಿಗೆ ನವ ವಧುವರರು ಶಪಥ ಮಾಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಸಂಬಂಧಿಗೆ ಚಪ್ಪಲಿಯಿಂದ ಹೊಡೆದ ಆರೋಪ ಕೇಳಿಬಂದಿದೆ. ರಾಯಚೂರು ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆಯಿಂದ ಸಿರವಾರ ಪಟ್ಟಣ ಪಂಚಾಯಿತಿ ಮತದಾನ ವೇಳೆ ಹಲ್ಲೆ ಆರೋಪ ಕೇಳಿಬಂದಿದೆ. ನಿರ್ಮಲಾ ಬೆಣ್ಣೆ ವಿರುದ್ಧ ಬಿಜೆಪಿ ಅಭ್ಯರ್ಥಿ ಬೆಂಬಲಿಗರ ಆರೋಪ ವ್ಯಕ್ತವಾಗಿದೆ. ಬಿಜೆಪಿ ಅಭ್ಯರ್ಥಿ ಪರ ಚನ್ನಪ್ಪ ಮತಯಾಚನೆ ಆರೋಪ ಕೇಳಿಬಂದಿತ್ತು. ಇದನ್ನು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಿರ್ಮಲಾ ಬೆಣ್ಣೆ ಪ್ರಶ್ನಿಸಿದ್ದರು. ಈ ವೇಳೆ, ಮಾತಿಗೆಮಾತು ಬೆಳೆದು ಚಪ್ಪಲಿಯಿಂದ ಹೊಡೆದಿರುವ ಆರೋಪ ಕೇಳಿಬಂದಿದೆ.

ರಾಮನಗರ ತಾಲೂಕಿನ ಬಿಡದಿ ಪುರಸಭೆ ಚುನಾವಣೆ, ವಾರ್ಡ್ ನಂ.7ರ ಮತಗಟ್ಟೆಯಲ್ಲಿ ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಮತದಾನ ಮಾಡಿದ್ದಾರೆ. ಕೇತಗಾನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಕ್ಕು ಚಲಾವಣೆ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಉಪಚುನಾವಣೆ ಬಹಿಷ್ಕರಿಸಿದ ಗ್ರಾಮಸ್ಥರು! ಕಾರಣ ಇಲ್ಲಿದೆ

ಇದನ್ನೂ ಓದಿ: ಕೆಲವೇ ತಿಂಗಳಲ್ಲಿ 5ರಾಜ್ಯಗಳ ವಿಧಾನಸಭಾ ಚುನಾವಣೆ; ಇಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿಯೊಂದಿಗೆ ಚುನಾವಣಾ ಆಯೋಗದ ಸಭೆ

Published On - 3:57 pm, Mon, 27 December 21

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ