AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ರಾಮ ನವಮಿ ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಜನ ಅಸ್ವಸ್ಥ

ನಿನ್ನೆ(ಏ.17) ನಾಡಿನೆಲ್ಲೆಡೆ ರಾಮನವಮಿಯನ್ನ ಅದ್ದೂರಿಯಾಗಿ ಆಚರಿಸಲಾಗಿದೆ. ಅದರಂತೆ ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನರು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್(Kunigal) ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಅಸ್ವಸ್ಥರನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ತುಮಕೂರು: ರಾಮ ನವಮಿ ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಜನ ಅಸ್ವಸ್ಥ
ರಾಮನವಮಿಯಂದು ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಜನ ಅಸ್ವಸ್ಥ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Apr 18, 2024 | 3:55 PM

Share

ತುಮಕೂರು, ಏ.18: ರಾಮ ನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನರು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ (Kunigal) ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಸುಬ್ರಹ್ಮಣ್ಯ ದೇಗುಲದಲ್ಲಿ ನಿನ್ನೆ(ಏ.17) ಮಜ್ಜಿಗೆ, ಪಾನಕವನ್ನ ಗ್ರಾಮಸ್ಥರು ಸೇವಿಸಿದ್ದರು. ಬಳಿಕ ಮಧ್ಯರಾತ್ರಿಯಿಂದ ವಾಂತಿ-ಭೇದಿ ಶುರುವಾಗಿದೆ. ಬೆಳಗ್ಗೆ ಎಡೆಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು. ಆದರೆ, ಆರೋಗ್ಯ ಸುಧಾರಿಸದ ಹಿನ್ನೆಲೆ ಕುಣಿಗಲ್ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಮಸ್ಕಿಯ ಅಶೋಕ‌ ಶಿಲಾಶಾಸನ ರಸ್ತೆ ಬಳಿ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಂಧನೂರು ಮೂಲದ ಶಾಮೀದ್ (22) ಹಾಗೂ ಸಲ್ಮಾ(10) ಮೃತರು. ಸಿಂಧನೂರಿನಿಂದ ಮುದಗಲ್‌ಗೆ ಮದುವೆಗೆ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಈ ಘಟನೆ ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ಮಂಗಳೂರು: ಅಡ್ಯಾರ್ ಬಳಿ ಐಸ್‌ಕ್ರೀಂ ಘಟಕದ ಎಳನೀರು ಸೇವಿಸಿದ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹೆಲ್ಮೆಟ್​ ಧರಿಸಿ ಬಂದು ಮೆಡಿಕಲ್​ ಪ್ರಾಡಕ್ಟ್​​, ಹಣ ದೋಚಿ ಕಳ್ಳ ಪರಾರಿ

ಹುಬ್ಬಳ್ಳಿ: ವಿದ್ಯಾನಗರದ ಅಪೋಲೋ ಮೆಡಿಕಲ್​ ಸ್ಟೋರ್​ಗೆ ಹೆಲ್ಮೆಟ್​ ಧರಿಸಿಬಂದು ಔಷಧ​​, ಹಣ ದೋಚಿ ಖದೀಮನೊಬ್ಬ ಪರಾರಿಯಾಗಿದ್ದಾನೆ. ಮೆಡಿಕಲ್​ ಸ್ಟೋರ್​ ಸಿಬ್ಬಂದಿ ಗಮನ ಬೇರೆಡೆ ಸೆಳೆದು ಕಳ್ಳ ಕೈಚಳಕ ತೋರಿಸಿದ್ದಾನೆ. ಇನ್ನು ಮೆಡಿಕಲ್​ ಸ್ಟೋರ್​ನಲ್ಲಿ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇತ ಮೆಡಿಕಲ್ ಶಾಫ್​ಗಳನ್ನೇ ಟಾರ್ಗೆಟ್ ಮಾಡಿದ್ದಾನೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:45 pm, Thu, 18 April 24

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ