ಕುಖ್ಯಾತ ರೌಡಿ ಶೀಟರ್​ ಕುಣಿಗಲ್‌ ಗಿರಿ ಸೇರಿ 31 ಜನ ಗಡಿಪಾರು

ತುಮಕೂರು (Tumkur) ಜಿಲ್ಲೆಯಿಂದ ಕುಖ್ಯಾತ ರೌಡಿ ಕುಣಿಗಲ್‌ ಗಿರಿ ಸೇರಿದಂತೆ 31 ರೌಡಿಗಳನ್ನ‌ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಸಾರ್ವಜನಿಕರ ವಲಯದಲ್ಲಿ ಅಶಾಂತಿ ಮೂಡಿಸುವ 1200 ಮಂದಿ ರೌಡಿಗಳ ಚಟುವಟಿಕೆ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ. ಒಂದು ವಿಧಾನಸಭಾ ಕ್ಷೇತ್ರಕ್ಕೆ‌ ಒಬ್ಬರು ಪೊಲೀಸ್, ನೋಡೆಲ್ ಆಫೀಸರ್ ಕಾರ್ಯನಿರ್ವಹಿಸುತ್ತಿದ್ದು, ಶಾಂತಿಯುತ ಚುನಾವಣೆ ನಡೆಸಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ತುಮಕೂರು ಎಸ್ಪಿ ಅಶೋಕ್ ಕೆವಿ ಹೇಳಿದ್ದಾರೆ.

ಕುಖ್ಯಾತ ರೌಡಿ ಶೀಟರ್​ ಕುಣಿಗಲ್‌ ಗಿರಿ ಸೇರಿ 31 ಜನ ಗಡಿಪಾರು
ಕುಣಿಗಲ್​ ಗಿರಿ ಗಡಿಪಾರು
ಮಹೇಶ್ ಇ, ಭೂಮನಹಳ್ಳಿ Edited By: ಕಿರಣ್ ಹನುಮಂತ್​ ಮಾದಾರ್

Updated on: Apr 21, 2024 | 3:23 PM

ತುಮಕೂರು, ಏ.21: ಇದೇ ಏಪ್ರಿಲ್​ 26 ರಂದು ಲೋಕಸಭಾ ಚುನಾವಣೆ(Lok sabha election) ಮತದಾನ ಇರುವ ಹಿನ್ನಲೆ ತುಮಕೂರು (Tumkur) ಜಿಲ್ಲೆಯಿಂದ ಕುಖ್ಯಾತ ರೌಡಿ ಕುಣಿಗಲ್‌ ಗಿರಿಯನ್ನು ಗಡಿಪಾರು ಮಾಡಿ ಆದೇಶಿಸಲಾಗಿದೆ. ಕಾನೂನು ಸುವ್ಯವಸ್ಥೆ ಹದಗೆಡದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಜಿಲ್ಲೆಯ 825 ರೌಡಿ ಶೀಟರ್​ಗಳಲ್ಲಿ 31 ಕುಖ್ಯಾತ ರೌಡಿಗಳನ್ನ‌ ಮಾತ್ರ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ಇತ್ತೀಚೆಗಷ್ಟೆ ಕುಣಿಗಲ್ ತಾಲ್ಲೂಕಿನ ಮೋದೂರು ಗ್ರಾಮದ ನಟೋರಿಯಸ್​ ಕುಣಿಗಲ್ ಗಿರಿ ಜೈಲಿನಿಂದ ಬಿಡುಗಡೆಯಾಗಿದ್ದ. ಇನ್ನು ಸಾರ್ವಜನಿಕರ ವಲಯದಲ್ಲಿ ಅಶಾಂತಿ ಮೂಡಿಸುವ 1200 ಮಂದಿ ರೌಡಿಗಳ ಚಟುವಟಿಕೆ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ. ಒಂದು ವಿಧಾನಸಭಾ ಕ್ಷೇತ್ರಕ್ಕೆ‌ ಒಬ್ಬರು ಪೊಲೀಸ್, ನೋಡೆಲ್ ಆಫೀಸರ್ ಕಾರ್ಯನಿರ್ವಹಿಸುತ್ತಿದ್ದು, ಶಾಂತಿಯುತ ಚುನಾವಣೆ ನಡೆಸಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ತುಮಕೂರು ಎಸ್ಪಿ ಅಶೋಕ್ ಕೆವಿ ಹೇಳಿದ್ದಾರೆ.

ಇದನ್ನೂ ಓದಿ:ಲೋಕಸಭಾ ಚುನಾವಣೆ: ಚಿತ್ರದುರ್ಗ ಜಿಲ್ಲೆಯಿಂದ ಮೂವರನ್ನು ಗಡಿಪಾರು ಮಾಡಿದ ಉಪವಿಭಾಗಾಧಿಕಾರಿ

ಮಳೆ ನೀರು ತೆರವು ಮಾಡುವಾಗ ಕಟ್ಟಡದಿಂದ ಬಿದ್ದು ವ್ಯಕ್ತಿ ಸಾವು

ಯಾದಗಿರಿ: ಮಳೆ ನೀರು ತೆರವು ಮಾಡುವಾಗ ಕಟ್ಟಡದಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಯಾದಗಿರಿ ನಗರದ ಆಶ್ರಯ ಲಾಡ್ಜ್​​ನಲ್ಲಿ ನಡೆದಿದೆ. ಲಾಡೀಸ್ ಗಲ್ಲಿ ನಿವಾಸಿ ಅಶೋಕ್ ಕಟ್ಟಿಮನಿ(40) ಮೃತ ವ್ಯಕ್ತಿ. ಮಳೆಯಿಂದ ಕಟ್ಟಡದ ಟೆರಸ್​​​ ಮೇಲೆ ನೀರು ಸಂಗ್ರಹವಾಗಿತ್ತು. ಈ ಹಿನ್ನಲೆ ನೀರು ತೆರವು ಮಾಡುವಾಗ ಕಟ್ಟಡದ ಮೇಲಿಂದ ಕಾಲು ಜಾರಿ ಬಿದ್ದು ದುರ್ಘಟನೆ  ನಡೆದಿದ್ದು, ಯಾದಗಿರಿ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Sun, 21 April 24

Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Follow Us