Heat Stroke: ಹೆಚ್ಚಿದ ತಾಪಮಾನ, ಕಲ್ಪತರು ನಾಡಿನ ಜನರಲ್ಲಿ ಹೀಟ್ ಸ್ಟ್ರೋಕ್ ಆತಂಕ

ತುಮಕೂರು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ 38 ರಿಂದ 40 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ರಣ ಬಿಸಿಲಿಗೆ ಜನ ಹೊರಬಾರದೆ ಪರದಾಡುತ್ತಿದ್ದಾರೆ‌. ಇನ್ನು ಏರುತ್ತಿರುವ ರಣ ರೋಚಕ‌ ಬಿಸಿಲಿನ ತಾಪಮಾನಕ್ಕೆ ಕಲ್ಪತರು ನಾಡಿನ ಜನರಲ್ಲಿ ಹೀಟ್ ಸ್ಟ್ರೋಕ್(Heat Stroke) ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ತುಮಕೂರು(Tumkuru) ಜಿಲ್ಲಾಸ್ಪತ್ರೆ ಸೇರಿದಂತೆ, ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ.

Heat Stroke: ಹೆಚ್ಚಿದ ತಾಪಮಾನ, ಕಲ್ಪತರು ನಾಡಿನ ಜನರಲ್ಲಿ ಹೀಟ್ ಸ್ಟ್ರೋಕ್ ಆತಂಕ
ತುಮಕೂರಿನ ಜನರಲ್ಲಿ ಹೀಟ್ ಸ್ಟ್ರೋಕ್ ಆತಂಕ
ಮಹೇಶ್ ಇ, ಭೂಮನಹಳ್ಳಿ Edited By: ಕಿರಣ್ ಹನುಮಂತ್​ ಮಾದಾರ್

Updated on: May 03, 2024 | 2:52 PM

ತುಮಕೂರು, ಮೇ.03: ದಿನೇ ದಿನೇ ಏರುತ್ತಿರುವ ರಣ ರೋಚಕ‌ ಬಿಸಿಲಿನ ತಾಪಮಾನಕ್ಕೆ ಕಲ್ಪತರು ನಾಡಿನ ಜನರಲ್ಲಿ ಹೀಟ್ ಸ್ಟ್ರೋಕ್(Heat Stroke) ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ತುಮಕೂರು(Tumkuru) ಜಿಲ್ಲಾಸ್ಪತ್ರೆ ಸೇರಿದಂತೆ, ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಇನ್ನು ಬಿಸಿಲಿನ ತಾಪಮಾನ ಏರಿಕೆಯಾಗುತ್ತಿರುವ ಪರಿಣಾಮ ನಿತ್ಯ ಆಸ್ಪತ್ರೆಗೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಯಾರಿಗಾದರೂ ಹೀಟ್ ಸ್ಟ್ರೋಕ್ ಕಂಡು ಬಂದಲ್ಲಿ ತಕ್ಷಣವೇ ಚಿಕಿತ್ಸೆ ನೀಡಲು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕವಾಗಿ 5 ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ.

ಅದರಂತೆ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿಯೂ ಪ್ರತ್ಯೇಕವಾಗಿ ಎರಡು ಹಾಸಿಗೆಗಳನ್ನ ಮೀಸಲಿರಿಸಲಾಗಿದೆ. ಜೊತೆಗೆ ಅಗತ್ಯ ಚಿಕಿತ್ಸಾ ಸೌಲಭ್ಯಗಳನ್ನು ಸಹ ಸಿದ್ಧತೆ ಮಾಡಿಕೊಂಡಿದೆ. ಸುಸ್ತು, ಆಯಾಸ ಎಂದು ಆಸ್ಪತ್ರೆಗೆ ಬರುವವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ‌‌. ಈವರೆಗೆ ಯಾವುದೇ ಹೀಟ್ ಸ್ಟ್ರೋಕ್ ಪ್ರಕರಣ ಜಿಲ್ಲೆಯಾದ್ಯಂತ ಕಂಡುಬಂದಿಲ್ಲ. ಆದರೆ ಏಪ್ರಿಲ್ ತಿಂಗಳಲ್ಲಿ ಬಿಸಿಲಿನಿಂದ ಸುಸ್ತಾಗಿ ಬಿದ್ದಂತಹ ಎರಡು ಪ್ರಕರಣ ಕಂಡುಬಂದಿತ್ತು. ಆದರೆ, ಅದು ಹೀಟ್ ಸ್ಟ್ರೋಕ್ ಪ್ರಕರಣವಾಗಿರಲಿಲ್ಲ.

ಇದನ್ನೂ ಓದಿ:ಅಬ್ಬಬ್ಬಾ! ಕೂಲ್ ಕೂಲ್ ಸಿಟಿ ಬೆಂಗಳೂರಿನ ತಾಪಮಾನ 40 ಡಿಗ್ರಿ ತಲುಪಿತಾ! ಮುಂದಿನ ದಿನಗಳು ಇನ್ನಷ್ಟು ಭೀಕರ

ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ 38ರಿಂದ 40 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ರಣ ಬಿಸಿಲಿಗೆ ಜನ ಹೊರಬಾರದೆ ಪರದಾಡುತ್ತಿದ್ದಾರೆ‌. ಈ ಮಧ್ಯೆ ಆಗಾಗ ಕೆಲಸದ ಸಂಬಂಧ ನಗರಕ್ಕೆ ಬರುವವರು, ಬಿಸಿಲಿನಿಂದ ದೇಹವನ್ನು ತಣ್ಣಗೀರಿಸಲು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Follow Us