AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಿಂಕಿಂಗ್ ಕೆನಾಲ್’ ಮೂಲಕ ಗುಬ್ಬಿಯಿಂದ​ ಮಾಗಡಿಗೆ ನೀರು; ಬಿಜೆಪಿ-ಜೆಡಿಎಸ್​ ನಾಯಕರ ತೀವ್ರ ಆಕ್ಷೇಪ

ಹೇಮಾವತಿ, ಇದು ತುಮಕೂರು ಜಿಲ್ಲೆಯ ಜೀವನಾಡಿ. ಜಿಲ್ಲೆಯ ತುರುವೇಕೆರೆ ಗುಬ್ಬಿ, ತಿಪಟೂರು ಚಿಕ್ಕನಾಯಕನಹಳ್ಳಿ, ಶಿರಾ, ತುಮಕೂರು ನಗರ ಹಾಗೂ ಗ್ರಾಮಾಂತರ, ಕುಣಿಗಲ್ ತಾಲೂಕಿನ ಜನರಿಗೆ ಜೀವನಾಡಿಯಾಗಿದೆ. ಸದ್ಯ ಜಿಲ್ಲೆಗೆ 24.8 tmc ನೀರು ಅಲೋಕೆಷನ್ ಇದ್ದು, ಅದು ಕೂಡ ವರ್ಷದಲ್ಲಿ ಸರಿಯಾಗಿ ಬರುತ್ತಿಲ್ಲ. ಹೀಗಿರುವಾಗ ಗುಬ್ಬಿಯಿಂದ ಕುಣಿಗಲ್ ಮೂಲಕ ಮಾಗಡಿಯತ್ತ ಲಿಂಕಿಂಗ್ ಕೆನಾಲ್ ಮೂಲಕ ನೀರು ತೆಗೆದುಕೊಂಡು ಹೋಗಲು ಸರ್ಕಾರ ಅನುಮೋದನೇ ಕೊಟ್ಟಿದೆ. ಇದಕ್ಕೆ ಜಿಲ್ಲೆಯ ಬಿಜೆಪಿ-ಜೆಡಿಎಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದು, ಯೋಜನೆ ರದ್ದು ಮಾಡಿಲ್ಲ ಎಂದರೆ ಕೆನಾಲ್ ಮುಚ್ಚಿ ಗಂಭೀರ ಸ್ವರೂಪದ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

‘ಲಿಂಕಿಂಗ್ ಕೆನಾಲ್’ ಮೂಲಕ ಗುಬ್ಬಿಯಿಂದ​ ಮಾಗಡಿಗೆ ನೀರು; ಬಿಜೆಪಿ-ಜೆಡಿಎಸ್​ ನಾಯಕರ ತೀವ್ರ ಆಕ್ಷೇಪ
‘ಲಿಂಕಿಂಗ್ ಕೆನಾಲ್’ ಮೂಲಕ ಗುಬ್ಬಿಯಿಂದ​ ಮಾಗಡಿಗೆ ನೀರು
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: May 07, 2024 | 7:37 PM

Share

ತುಮಕೂರು, ಮೇ.07: ಕಲ್ಪತರು ನಾಡು ತುಮಕೂರು (Tumakur) ಜಿಲ್ಲೆ, ಬಹುತೇಕ ಹೇಮಾವತಿ ನೀರಿನ ಮೇಲೆ‌ ನಂಬಿಕೊಂಡು ಜೀವನ ಮಾಡಲಾಗುತ್ತಿದೆ. ಬರುವ ನೀರನ್ನ ಆಯಾ ತಾಲೂಕಿನ ಕೆರೆಗಳಿಗೆ ಹರಿಸುವಷ್ಟರಲ್ಲಿ ಸಾಕಾಪ್ಪ ಎನಿಸುತ್ತಿರುತ್ತದೆ. ಹೀಗಿರುವಾಗ ಇದೇ ನೀರನ್ನ ಈಗ ಜಲಸಂಪನ್ಮೂಲ ಸಚಿವ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಕುಣಿಗಲ್ ಮೂಲಕ ಮಾಗಡಿಗೆ ಲಿಂಕಿಂಗ್ ಕೆನಾಲ್ ಮೂಲಕ ನೀರು ತೆಗೆದುಕೊಂಡು ಹೋಗಲು ನಿರ್ಧರಿಸಿ ಚುನಾವಣೆ ಘೋಷಣೆ ಮುನ್ನ ಕುಣಿಗಲ್​ನಲ್ಲಿ ಶಂಕುಸ್ಥಾಪನೆ ಕೂಡ ನೇರವೇರಿಸಿದ್ದಾರೆ.

ನೀರು ತೆಗೆದುಕೊಂಡು ಹೋಗುವುದಕ್ಕೆ ತೀವ್ರ ವಿರೋಧ

ಇನ್ನು ಇದಕ್ಕೆ ಸರ್ಕಾರದ ವತಿಯಿಂದ ಸುಮಾರು 900 ಕೋಟಿ ಹಣ ಕೂಡ ಮಂಜೂರು ಆಗಿದೆ ಎಂದು ಹೇಳಲಾಗಿದೆ. ಹೀಗಿರುವಾಗ ಗುಬ್ಬಿ ಬಳಿ ಕೆನಾಲ್​ನಿಂದ ಲಿಂಕಿಂಗ್ ಕೆನಾಲ್ ಕಾಮಗಾರಿ ಮೂಲಕ ನೀರು ತೆಗೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದ್ದು, ಇದಕ್ಕೆ ಜಿಲ್ಲೆಯಲ್ಲಿ ತೀವ್ರ ವಿರೋದ ವ್ಯಕ್ತವಾಗಿದೆ. ಜಿಲ್ಲೆಗೆ ಬರುತ್ತಿರುವುದೆ 24 tmc ನೀರು. ಟ್ರಿಬ್ಯುನಲ್ ಪ್ರಕಾರ ನಮ್ಮ ಜಿಲ್ಲೆಗೆ ನಿಗದಿ ಆಗಿರುವ ನೀರು ಬೇರೆಡೆ ಬಿಡಬಾರದೆಂದು ಇದೆ. ಹೀಗಿದ್ದರೂ ಕೂಡ ಸರ್ಕಾರ ಅನುಮೋದನೆ ನೀಡಿದ್ದು ಜಿಲ್ಲೆಯ ಜನರ ಹಾಗೂ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.

ಇದನ್ನೂ ಓದಿ:ಡ್ಯಾಂನಲ್ಲಿ ನೀರಿನ ಮಟ್ಟ ಕುಸಿತ; ನಾಳೆಯಿಂದ ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ಕುಡಿಯುವ ನೀರು

ಇನ್ನು ತುಮಕೂರು ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಮಠಾಧೀಶರು ಯೋಜನೆ ವಿರುದ್ಧ ಕಾನೂನು ಹಾಗೂ ಕಾನೂನಿನ ಹೊರಗೆ ಹೋರಾಟ ಮಾಡುವ ದೃಢ ನಿರ್ಧಾರ ಮಾಡಿದ್ದಾರೆ. ಯೋಜನೆಯನ್ನು ಸಂಪೂರ್ಣವಾಗಿ ಕೈ ಬಿಡುವಂತೆ ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ, ಬಿಜೆಪಿ ಮುಖಂಡ ದಿಲೀಪ್, ಮಾಜಿ ಶಾಸಕ ಎಚ್. ನಿಂಗಪ್ಪ ಸೇರಿದ್ದಂತೆ ಹಲವು ರೈತ ಮುಖಂಡರು ಸರ್ಕಾರಕ್ಕೆ ಒತ್ತಾಯ ಹೇರಿದ್ದಾರೆ. ಗುಬ್ಬಿ ತಾಲ್ಲೂಕಿನಿಂದ 35.4 ಕಿಲೋಮೀಟರ್ ಉದ್ಧದ ಪೈಪ್ ಲೈನ್ ಲಿಂಕ್ ಕೆನಾಲ್ ಕಾಮಗಾರಿಯಾಗಿದ್ದು, ಬಿಜೆಪಿ ಸರ್ಕಾರ ರದ್ದು ಪಡಿಸಿದ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಚಾಲನೆ ನೀಡಿದೆ. ಡಿಕೆಶಿ ವೈಯಕ್ತಿಕ ಆಸಕ್ತಿ ಮೇರೆಗೆ ಈ ಯೋಜನೆ ಜಾರಿಗೆ ತರಲಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಕೂಡಲೇ ರದ್ದು ಮಾಡಿಲ್ಲ ಎಂದರೇ ಪಕ್ಷಾತೀತವಾಗಿ ಹೋರಾಟ ಮಾಡಲು ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಕಳೆದ ಬಾರಿ ನಡೆದ ಜಿಲ್ಲಾ ಕೆಡಿಪಿ ಸಭೆಯಲ್ಲಿ ಕೂಡ ಜಿಲ್ಲೆಯ ಶಾಸಕರು ಸಚಿವರು ಪರಮೇಶ್ವರ್ ಸಮ್ಮುಖದಲ್ಲಿ ಚರ್ಚೆ ನಡೆಸಿ ಆಕ್ರೋಶ ಹೊರಹಾಕಲಾಗಿತ್ತು. ಸರ್ಕಾರಕ್ಕೆ ಮತ್ತೊಮ್ಮೆ ಪರಿಶೀಲನೆ ನಡೆಸಲು ತಿರ್ಮಾನ ಮಾಡಲಾಗಿತ್ತು. ಆದರೆ, ಇದುವರೆಗೂ ಕೂಡ ಏನಾಗಿದೆ ಎಂದು ತಿಳಿದುಬಂದಿಲ್ಲ. ಹೀಗಾಗಿ ಹೋರಾಟದ ಎಚ್ಚರಿಕೆ ನೀಡಿದ್ದು, ಏನಾಗಲಿದೆ ಎಂದು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್