AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಿಂಕಿಂಗ್ ಕೆನಾಲ್’ ಮೂಲಕ ಗುಬ್ಬಿಯಿಂದ​ ಮಾಗಡಿಗೆ ನೀರು; ಬಿಜೆಪಿ-ಜೆಡಿಎಸ್​ ನಾಯಕರ ತೀವ್ರ ಆಕ್ಷೇಪ

ಹೇಮಾವತಿ, ಇದು ತುಮಕೂರು ಜಿಲ್ಲೆಯ ಜೀವನಾಡಿ. ಜಿಲ್ಲೆಯ ತುರುವೇಕೆರೆ ಗುಬ್ಬಿ, ತಿಪಟೂರು ಚಿಕ್ಕನಾಯಕನಹಳ್ಳಿ, ಶಿರಾ, ತುಮಕೂರು ನಗರ ಹಾಗೂ ಗ್ರಾಮಾಂತರ, ಕುಣಿಗಲ್ ತಾಲೂಕಿನ ಜನರಿಗೆ ಜೀವನಾಡಿಯಾಗಿದೆ. ಸದ್ಯ ಜಿಲ್ಲೆಗೆ 24.8 tmc ನೀರು ಅಲೋಕೆಷನ್ ಇದ್ದು, ಅದು ಕೂಡ ವರ್ಷದಲ್ಲಿ ಸರಿಯಾಗಿ ಬರುತ್ತಿಲ್ಲ. ಹೀಗಿರುವಾಗ ಗುಬ್ಬಿಯಿಂದ ಕುಣಿಗಲ್ ಮೂಲಕ ಮಾಗಡಿಯತ್ತ ಲಿಂಕಿಂಗ್ ಕೆನಾಲ್ ಮೂಲಕ ನೀರು ತೆಗೆದುಕೊಂಡು ಹೋಗಲು ಸರ್ಕಾರ ಅನುಮೋದನೇ ಕೊಟ್ಟಿದೆ. ಇದಕ್ಕೆ ಜಿಲ್ಲೆಯ ಬಿಜೆಪಿ-ಜೆಡಿಎಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದು, ಯೋಜನೆ ರದ್ದು ಮಾಡಿಲ್ಲ ಎಂದರೆ ಕೆನಾಲ್ ಮುಚ್ಚಿ ಗಂಭೀರ ಸ್ವರೂಪದ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

‘ಲಿಂಕಿಂಗ್ ಕೆನಾಲ್’ ಮೂಲಕ ಗುಬ್ಬಿಯಿಂದ​ ಮಾಗಡಿಗೆ ನೀರು; ಬಿಜೆಪಿ-ಜೆಡಿಎಸ್​ ನಾಯಕರ ತೀವ್ರ ಆಕ್ಷೇಪ
‘ಲಿಂಕಿಂಗ್ ಕೆನಾಲ್’ ಮೂಲಕ ಗುಬ್ಬಿಯಿಂದ​ ಮಾಗಡಿಗೆ ನೀರು
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: May 07, 2024 | 7:37 PM

Share

ತುಮಕೂರು, ಮೇ.07: ಕಲ್ಪತರು ನಾಡು ತುಮಕೂರು (Tumakur) ಜಿಲ್ಲೆ, ಬಹುತೇಕ ಹೇಮಾವತಿ ನೀರಿನ ಮೇಲೆ‌ ನಂಬಿಕೊಂಡು ಜೀವನ ಮಾಡಲಾಗುತ್ತಿದೆ. ಬರುವ ನೀರನ್ನ ಆಯಾ ತಾಲೂಕಿನ ಕೆರೆಗಳಿಗೆ ಹರಿಸುವಷ್ಟರಲ್ಲಿ ಸಾಕಾಪ್ಪ ಎನಿಸುತ್ತಿರುತ್ತದೆ. ಹೀಗಿರುವಾಗ ಇದೇ ನೀರನ್ನ ಈಗ ಜಲಸಂಪನ್ಮೂಲ ಸಚಿವ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಕುಣಿಗಲ್ ಮೂಲಕ ಮಾಗಡಿಗೆ ಲಿಂಕಿಂಗ್ ಕೆನಾಲ್ ಮೂಲಕ ನೀರು ತೆಗೆದುಕೊಂಡು ಹೋಗಲು ನಿರ್ಧರಿಸಿ ಚುನಾವಣೆ ಘೋಷಣೆ ಮುನ್ನ ಕುಣಿಗಲ್​ನಲ್ಲಿ ಶಂಕುಸ್ಥಾಪನೆ ಕೂಡ ನೇರವೇರಿಸಿದ್ದಾರೆ.

ನೀರು ತೆಗೆದುಕೊಂಡು ಹೋಗುವುದಕ್ಕೆ ತೀವ್ರ ವಿರೋಧ

ಇನ್ನು ಇದಕ್ಕೆ ಸರ್ಕಾರದ ವತಿಯಿಂದ ಸುಮಾರು 900 ಕೋಟಿ ಹಣ ಕೂಡ ಮಂಜೂರು ಆಗಿದೆ ಎಂದು ಹೇಳಲಾಗಿದೆ. ಹೀಗಿರುವಾಗ ಗುಬ್ಬಿ ಬಳಿ ಕೆನಾಲ್​ನಿಂದ ಲಿಂಕಿಂಗ್ ಕೆನಾಲ್ ಕಾಮಗಾರಿ ಮೂಲಕ ನೀರು ತೆಗೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದ್ದು, ಇದಕ್ಕೆ ಜಿಲ್ಲೆಯಲ್ಲಿ ತೀವ್ರ ವಿರೋದ ವ್ಯಕ್ತವಾಗಿದೆ. ಜಿಲ್ಲೆಗೆ ಬರುತ್ತಿರುವುದೆ 24 tmc ನೀರು. ಟ್ರಿಬ್ಯುನಲ್ ಪ್ರಕಾರ ನಮ್ಮ ಜಿಲ್ಲೆಗೆ ನಿಗದಿ ಆಗಿರುವ ನೀರು ಬೇರೆಡೆ ಬಿಡಬಾರದೆಂದು ಇದೆ. ಹೀಗಿದ್ದರೂ ಕೂಡ ಸರ್ಕಾರ ಅನುಮೋದನೆ ನೀಡಿದ್ದು ಜಿಲ್ಲೆಯ ಜನರ ಹಾಗೂ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.

ಇದನ್ನೂ ಓದಿ:ಡ್ಯಾಂನಲ್ಲಿ ನೀರಿನ ಮಟ್ಟ ಕುಸಿತ; ನಾಳೆಯಿಂದ ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ಕುಡಿಯುವ ನೀರು

ಇನ್ನು ತುಮಕೂರು ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಮಠಾಧೀಶರು ಯೋಜನೆ ವಿರುದ್ಧ ಕಾನೂನು ಹಾಗೂ ಕಾನೂನಿನ ಹೊರಗೆ ಹೋರಾಟ ಮಾಡುವ ದೃಢ ನಿರ್ಧಾರ ಮಾಡಿದ್ದಾರೆ. ಯೋಜನೆಯನ್ನು ಸಂಪೂರ್ಣವಾಗಿ ಕೈ ಬಿಡುವಂತೆ ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ, ಬಿಜೆಪಿ ಮುಖಂಡ ದಿಲೀಪ್, ಮಾಜಿ ಶಾಸಕ ಎಚ್. ನಿಂಗಪ್ಪ ಸೇರಿದ್ದಂತೆ ಹಲವು ರೈತ ಮುಖಂಡರು ಸರ್ಕಾರಕ್ಕೆ ಒತ್ತಾಯ ಹೇರಿದ್ದಾರೆ. ಗುಬ್ಬಿ ತಾಲ್ಲೂಕಿನಿಂದ 35.4 ಕಿಲೋಮೀಟರ್ ಉದ್ಧದ ಪೈಪ್ ಲೈನ್ ಲಿಂಕ್ ಕೆನಾಲ್ ಕಾಮಗಾರಿಯಾಗಿದ್ದು, ಬಿಜೆಪಿ ಸರ್ಕಾರ ರದ್ದು ಪಡಿಸಿದ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಚಾಲನೆ ನೀಡಿದೆ. ಡಿಕೆಶಿ ವೈಯಕ್ತಿಕ ಆಸಕ್ತಿ ಮೇರೆಗೆ ಈ ಯೋಜನೆ ಜಾರಿಗೆ ತರಲಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಕೂಡಲೇ ರದ್ದು ಮಾಡಿಲ್ಲ ಎಂದರೇ ಪಕ್ಷಾತೀತವಾಗಿ ಹೋರಾಟ ಮಾಡಲು ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಕಳೆದ ಬಾರಿ ನಡೆದ ಜಿಲ್ಲಾ ಕೆಡಿಪಿ ಸಭೆಯಲ್ಲಿ ಕೂಡ ಜಿಲ್ಲೆಯ ಶಾಸಕರು ಸಚಿವರು ಪರಮೇಶ್ವರ್ ಸಮ್ಮುಖದಲ್ಲಿ ಚರ್ಚೆ ನಡೆಸಿ ಆಕ್ರೋಶ ಹೊರಹಾಕಲಾಗಿತ್ತು. ಸರ್ಕಾರಕ್ಕೆ ಮತ್ತೊಮ್ಮೆ ಪರಿಶೀಲನೆ ನಡೆಸಲು ತಿರ್ಮಾನ ಮಾಡಲಾಗಿತ್ತು. ಆದರೆ, ಇದುವರೆಗೂ ಕೂಡ ಏನಾಗಿದೆ ಎಂದು ತಿಳಿದುಬಂದಿಲ್ಲ. ಹೀಗಾಗಿ ಹೋರಾಟದ ಎಚ್ಚರಿಕೆ ನೀಡಿದ್ದು, ಏನಾಗಲಿದೆ ಎಂದು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು