AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumkur News: ತುಮಕೂರು ಪೆಟ್ರೋಲ್​ ಬಂಕ್​ನಲ್ಲಿ ಮೊಬೈಲ್ ಬಳಸುತ್ತಿದ್ದಾಗ ಬೆಂಕಿ ಅವಘಡ; ಯುವತಿ ಸಾವು

ಪೆಟ್ರೋಲ್ ಬಂಕ್​ನಲ್ಲಿ ಇಂಧನ ತುಂಬಿಸಿಕೊಳ್ಳುತ್ತಿದ್ದಾಗ ಅಗ್ನಿ ಅವಘಡ ಸಂಭವಿಸಿ 18 ವರ್ಷದ ಯುವತಿ ಮೃತಪಟ್ಟ ದಾರುಣ ಘಟನೆ ಬುಧವಾರ ತುಮಕೂರಿನಲ್ಲಿ ಸಂಭವಿಸಿದೆ.

Tumkur News: ತುಮಕೂರು ಪೆಟ್ರೋಲ್​ ಬಂಕ್​ನಲ್ಲಿ ಮೊಬೈಲ್ ಬಳಸುತ್ತಿದ್ದಾಗ ಬೆಂಕಿ ಅವಘಡ; ಯುವತಿ ಸಾವು
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 20, 2023 | 11:59 AM

ತುಮಕೂರು: ಪೆಟ್ರೋಲ್ ಬಂಕ್​ನಲ್ಲಿ ಇಂಧನ ತುಂಬಿಸಿಕೊಳ್ಳುತ್ತಿದ್ದಾಗ ಅಗ್ನಿ ಅವಘಡ ಸಂಭವಿಸಿ 18 ವರ್ಷದ ಯುವತಿ ಮೃತಪಟ್ಟ ದಾರುಣ ಘಟನೆ ಬುಧವಾರ ತುಮಕೂರಿನಲ್ಲಿ ಸಂಭವಿಸಿದೆ. ಇದೀಗ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಬಹಿರಂಗವಾಗಿದ್ದು, ಹೃದಯ ಕಲಕುವಂತಿದೆ. ಮೊಬೈಲ್​ ಫೋನ್​ ಬಳಸುತ್ತಿದ್ದುದರಿಂದ ಬೆಂಕಿ ಹೊತ್ತಿಕೊಂಡಿತ್ತು ಎಂದು ಹೇಳಲಾಗುತ್ತಿದೆ.

ಮೃತ ಯುವತಿಯನ್ನು ಭವ್ಯಾ ಎಂದು ಗುರುತಿಸಲಾಗಿದೆ. ಜತೆಗೆ ಆಕೆಯ ತಾಯಿ ರತ್ನಮ್ಮ ಕೂಡ ಇದ್ದರು. ಗಂಭೀರ ಗಾಯಗೊಂಡಿರುವ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭವ್ಯ ಹಾಗೂ ರತ್ನಮ್ಮ ಸಿರಾ ತಾಲೂಕಿನ ನಿವಾಸಿಗಳಾಗಿದ್ದಾರೆ.

ಪ್ಲಾಸ್ಟಿಕ್ ಕ್ಯಾನೊಂದರಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಹೋಗಲು ಇಬ್ಬರೂ ಬಂಕ್​ಗೆ ಬಂದಿದ್ದರು. ಸಿಸಿಟಿವಿ ದೃಶ್ಯದಲ್ಲಿ ಕಾಣಿಸಿದ ಪ್ರಕಾರ, ರತ್ನಮ್ಮ ಅವರು ರತ್ನಮ್ಮ ಅವರು ದ್ವಿಚಕ್ರ ವಾಹನದಿಂದ ಇಳಿದು ಪ್ಲಾಸ್ಟಿಕ್ ಕ್ಯಾನ್​ಗೆ ಪೆಟ್ರೋಲ್ ತುಂಬಿಸಿಕೊಳ್ಳುತ್ತಿದ್ದರು. ಇದೇ ವೇಳೆ ದ್ವಿಚಕ್ರ ವಾಹನದಲ್ಲಿ ಕುಳಿತ ಯುವತಿ ಮೊಬೈಲ್​ ಫೋನ್​ನಲ್ಲಿ ಮಗ್ನಳಾಗಿದ್ದರು. ದೀಢೀರ್ ಆಗಿ ಬೆಂಕಿ ಹೊತ್ತಿಕೊಂಡು ಧಗ್ಗನೆ ಆವರಿಸಿದೆ. ಸಿಬ್ಬಂದಿ, ರತ್ನಮ್ಮ ಹಾಗೂ ಇತರರು ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ.

ಪೆಟ್ರೋಲ್ ಬಂಕ್​ನಲ್ಲಿ ಇಂಧನ ತುಂಬಿಸಿಕೊಳ್ಳುತ್ತಿದ್ದಾಗ ಅಗ್ನಿ ಅವಘಡ ಸಂಭವಿಸಿ 18 ವರ್ಷದ ಯುವತಿ ಮೃತಪಟ್ಟ ದಾರುಣ ಘಟನೆ ಬುಧವಾರ ತುಮಕೂರಿನಲ್ಲಿ ಸಂಭವಿಸಿದೆ.
0 seconds of 1 minute, 17 secondsVolume 90%
Press shift question mark to access a list of keyboard shortcuts
00:00
01:17
01:17
 
(Disclaimer: Disturbing visuals, viewer discretion advised)

ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಭವ್ಯಾ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್
VIDEO: ಕರುಣ್ ನಾಯರ್​ನ ನಂಬಿ ರನ್ ಕಳೆದುಕೊಂಡ ಪಂಜಾಬ್ ಕಿಂಗ್ಸ್