AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumkur News: ತುಮಕೂರು ಪೆಟ್ರೋಲ್​ ಬಂಕ್​ನಲ್ಲಿ ಮೊಬೈಲ್ ಬಳಸುತ್ತಿದ್ದಾಗ ಬೆಂಕಿ ಅವಘಡ; ಯುವತಿ ಸಾವು

ಪೆಟ್ರೋಲ್ ಬಂಕ್​ನಲ್ಲಿ ಇಂಧನ ತುಂಬಿಸಿಕೊಳ್ಳುತ್ತಿದ್ದಾಗ ಅಗ್ನಿ ಅವಘಡ ಸಂಭವಿಸಿ 18 ವರ್ಷದ ಯುವತಿ ಮೃತಪಟ್ಟ ದಾರುಣ ಘಟನೆ ಬುಧವಾರ ತುಮಕೂರಿನಲ್ಲಿ ಸಂಭವಿಸಿದೆ.

Tumkur News: ತುಮಕೂರು ಪೆಟ್ರೋಲ್​ ಬಂಕ್​ನಲ್ಲಿ ಮೊಬೈಲ್ ಬಳಸುತ್ತಿದ್ದಾಗ ಬೆಂಕಿ ಅವಘಡ; ಯುವತಿ ಸಾವು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: May 20, 2023 | 11:59 AM

Share

ತುಮಕೂರು: ಪೆಟ್ರೋಲ್ ಬಂಕ್​ನಲ್ಲಿ ಇಂಧನ ತುಂಬಿಸಿಕೊಳ್ಳುತ್ತಿದ್ದಾಗ ಅಗ್ನಿ ಅವಘಡ ಸಂಭವಿಸಿ 18 ವರ್ಷದ ಯುವತಿ ಮೃತಪಟ್ಟ ದಾರುಣ ಘಟನೆ ಬುಧವಾರ ತುಮಕೂರಿನಲ್ಲಿ ಸಂಭವಿಸಿದೆ. ಇದೀಗ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಬಹಿರಂಗವಾಗಿದ್ದು, ಹೃದಯ ಕಲಕುವಂತಿದೆ. ಮೊಬೈಲ್​ ಫೋನ್​ ಬಳಸುತ್ತಿದ್ದುದರಿಂದ ಬೆಂಕಿ ಹೊತ್ತಿಕೊಂಡಿತ್ತು ಎಂದು ಹೇಳಲಾಗುತ್ತಿದೆ.

ಮೃತ ಯುವತಿಯನ್ನು ಭವ್ಯಾ ಎಂದು ಗುರುತಿಸಲಾಗಿದೆ. ಜತೆಗೆ ಆಕೆಯ ತಾಯಿ ರತ್ನಮ್ಮ ಕೂಡ ಇದ್ದರು. ಗಂಭೀರ ಗಾಯಗೊಂಡಿರುವ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭವ್ಯ ಹಾಗೂ ರತ್ನಮ್ಮ ಸಿರಾ ತಾಲೂಕಿನ ನಿವಾಸಿಗಳಾಗಿದ್ದಾರೆ.

ಪ್ಲಾಸ್ಟಿಕ್ ಕ್ಯಾನೊಂದರಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಹೋಗಲು ಇಬ್ಬರೂ ಬಂಕ್​ಗೆ ಬಂದಿದ್ದರು. ಸಿಸಿಟಿವಿ ದೃಶ್ಯದಲ್ಲಿ ಕಾಣಿಸಿದ ಪ್ರಕಾರ, ರತ್ನಮ್ಮ ಅವರು ರತ್ನಮ್ಮ ಅವರು ದ್ವಿಚಕ್ರ ವಾಹನದಿಂದ ಇಳಿದು ಪ್ಲಾಸ್ಟಿಕ್ ಕ್ಯಾನ್​ಗೆ ಪೆಟ್ರೋಲ್ ತುಂಬಿಸಿಕೊಳ್ಳುತ್ತಿದ್ದರು. ಇದೇ ವೇಳೆ ದ್ವಿಚಕ್ರ ವಾಹನದಲ್ಲಿ ಕುಳಿತ ಯುವತಿ ಮೊಬೈಲ್​ ಫೋನ್​ನಲ್ಲಿ ಮಗ್ನಳಾಗಿದ್ದರು. ದೀಢೀರ್ ಆಗಿ ಬೆಂಕಿ ಹೊತ್ತಿಕೊಂಡು ಧಗ್ಗನೆ ಆವರಿಸಿದೆ. ಸಿಬ್ಬಂದಿ, ರತ್ನಮ್ಮ ಹಾಗೂ ಇತರರು ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. (Disclaimer: Disturbing visuals, viewer discretion advised)

ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಭವ್ಯಾ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!