AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಕಾಂಗ್ರೆಸ್ ಗೆಲ್ಲಿಸದಿದ್ದರೆ ನಾನು ಯಾರಿಗೂ ಮುಖ ತೋರಿಸಲ್ಲ; ದೇವೇಗೌಡ ಕುಟುಂಬಕ್ಕೆ ರಾಜಣ್ಣ ಓಪನ್ ಚಾಲೆಂಜ್

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸದಿದ್ದರೆ ನಾನು ಯಾರಿಗೂ ಮುಖ ತೋರಿಸುವುದಿಲ್ಲ ಎಂದು ಸಚಿವ ಕೆಎನ್ ರಾಜಣ್ಣ ಅವರು ತುಮಕೂರಿನಲ್ಲಿ ಹೆಚ್​ಡಿ ದೇವೇಗೌಡ ಕುಟುಂಬಕ್ಕೆ ಓಪನ್ ಚಾಲೆಂಜ್ ಹಾಕಿದ್ದಾರೆ. ತುಮಕೂರು ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರು ಎಲ್ಲಾ ಪಕ್ಷಗಳಿಗೆ ಹೋಗಿ ಬಂದಿದ್ದಕ್ಕೆ ಬೇಜಾರಿದೆ. ಆದರೆ, ಗೆಲ್ಲುತ್ತಾರೆ ಎಂಬ ಕಾರಣಕ್ಕೆ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದೇವೆ ಎಂದರು.

ಹಾಸನದಲ್ಲಿ ಕಾಂಗ್ರೆಸ್ ಗೆಲ್ಲಿಸದಿದ್ದರೆ ನಾನು ಯಾರಿಗೂ ಮುಖ ತೋರಿಸಲ್ಲ; ದೇವೇಗೌಡ ಕುಟುಂಬಕ್ಕೆ ರಾಜಣ್ಣ ಓಪನ್ ಚಾಲೆಂಜ್
ಕೆ ಎನ್ ರಾಜಣ್ಣ ಮತ್ತು ಹೆಚ್​ಡಿ ದೇವೇಗೌಡ
Follow us
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi

Updated on: Mar 18, 2024 | 3:43 PM

ತುಮಕೂರು, ಮಾ.18: ಹಾಸನ (Hassan) ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸದಿದ್ದರೆ ನಾನು ಯಾರಿಗೂ ಮುಖ ತೋರಿಸುವುದಿಲ್ಲ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಹಕಾರ ಇಲಾಖೆ ಸಚಿವ ಕೆಎನ್ ರಾಜಣ್ಣ (KN Rajanna) ಅವರು ತುಮಕೂರಿನಲ್ಲಿ ಮಾಜಿ ಪ್ರಧಾನಿಯೂ ಆಗಿರುವ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಕುಟುಂಬಕ್ಕೆ ಓಪನ್ ಚಾಲೆಂಜ್ ಹಾಕಿದ್ದಾರೆ.

ತುಮಕೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇವೇಗೌಡರು ಯಾವತ್ತೂ ಕೂಡ ಜಾತ್ಯತೀತರಲ್ಲ. ಮೋದಿ ಗೆದ್ದರೆ ನಾನು ದೇಶ ಬಿಡುತ್ತೇನೆ ಅಂತಾ ಹೇಳಿದ್ದರು, ಈಗ ಏನ್ ಮಾಡಿದರು? ಈಗ ಎಲ್ಲಾ ಕಡೆ ವೈರಲ್ ಆಗುತ್ತಿದೆ. ಎರಡು ಕಡೆ ಮೊಮ್ಮಕ್ಕಳು, ಒಂದು ಕಡೆ ಅಳಿಯ ನಿಲ್ಲುತ್ತಿದ್ದಾರೆ. ಹಾಗಿದ್ದರೆ ಜೆಡಿಎಸ್​ನಲ್ಲಿ ಬೇರೆ ಯಾರು ಅಭ್ಯರ್ಥಿಗಳು ಇಲ್ಲವೇ ಎಂದು ಪ್ರಶ್ನಿಸಿದರು.

ಹಾಸನ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸದಿದ್ದರೆ ನಾನು ಯಾರಿಗೂ ಮುಖವನ್ನೇ ತೋರಿಸಲ್ಲ ಅಂತಾ ದೇವೇಗೌಡ ಕುಟುಂಬಕ್ಕೆ ರಾಜಣ್ಣ ಓಪನ್ ಚಾಲೆಂಜ್ ಹಾಕಿದ್ದಾರೆ. ಪುಟ್ಟಸ್ವಾಮಿಗೌಡರು ದೇವೇಗೌಡರನ್ನ ಸೋಲಿಸಿದರು. ಈಗ ದೇವೇಗೌಡರ ಮೊಮ್ಮಗ ಹಾಸನದಲ್ಲಿ ನಿಲ್ಲುತ್ತಿದ್ದಾರೆ. ಪುಟ್ಟಸ್ವಾಮಿಗೌಡರ ಮೊಮ್ಮಗ ನಮ್ಮ ಪಕ್ಷದಿಂದ ನಿಲ್ಲುತ್ತಿದ್ದಾರೆ ಎಂದರು.

ಯಾರನ್ನೇ ಕೇಳಿದರೂ ಕಾಂಗ್ರೆಸ್ ಅಭ್ಯರ್ಥಿ ತುಂಬಾ ಒಳ್ಳೆಯವರು ಅಂತಾ ಹೇಳುತ್ತಿದ್ದಾರೆ. ಎರಡು ದಶಕಗಳಿಂದ ಕಾಂಗ್ರೆಸ್ ಹಾಸನದಲ್ಲಿ ಅಧಿಕಾರದಲ್ಲಿಲ್ಲ. ಹೀಗಾಗಿ ಕಾರ್ಯಕರ್ತರನ್ನ ದುರ್ಬಿನ್ ತಗೆದುಕೊಂಡು ಹುಡುಕುವ ಸ್ಥಿತಿ ಇರಬೇಕಿತ್ತು. ಆದರೆ ಹಾಸನದಲ್ಲಿ ಆ ಸ್ಥಿತಿ ಇಲ್ಲ, ಅಲ್ಲಿನ ಕಾರ್ಯಕರ್ತರ ಹುಮ್ಮಸ್ಸು ನೋಡಿದರೆ ಆಶ್ಚರ್ಯವಾಗುತ್ತದೆ ಎಂದರು.

ತುಮಕೂರಿನಲ್ಲಿ ಹೊರಗಿನ ಅಭ್ಯರ್ಥಿ ನಿಂತರೆ ಸೋಲಾಗುತ್ತದೆ ಅನ್ನೋ ವಿಚಾರವಾಗಿ ಮಾತನಾಡಿದ ರಾಜಣ್ಣ, 96ರ ಚುನಾವಣೆಯಲ್ಲಿ ಇದೇ ಬಸವರಾಜು ಅವರು ಆರ್.ಮಂಜುನಾಥ್ ಅವರನ್ನ ಹೊರಗಿನಿಂದ ಕರೆದುಕೊಂಡು ನಿಲ್ಲಿಸಿದರು. ನಂತರ ಕೋದಂಡರಾಮಯ್ಯ ಕೂಡ ಹೊರಗಿನಿಂದ ಬಂದು ನಿಂತಿದ್ದರು. ಕಳೆದ ಚುನಾವಣೆಯಲ್ಲಿ ದೇಶ ಕಂಡ ಮಹಾನ್ ನಾಯಕ ದೇವೇಗೌಡರು ಕೂಡ ಇಲ್ಲಿ ಸ್ಪರ್ಧಿಸಿದ್ದರು. ಆದರೆ ಇವರೆಲ್ಲರೂ ಸೋಲು ಕಂಡರು. ತುಮಕೂರಿನ ಜನ ಹೊರಗಿನವರಿಗೆ ಮಣೆ ಹಾಕಲ್ಲ ಎಂದರು.

ಇದನ್ನೂ ಓದಿ: ಹಾಸನದಲ್ಲಿ ಸೋದರಳಿಯ ಶ್ರೇಯಸ್ ಪಟೇಲ್ ವಿರುದ್ಧ ಬಂಡಾಯವೆದ್ದ ರಾಜೇಶ್ವರಿ; ಕಾಂಗ್ರೆಸ್​ಗೆ ತಲೆಬಿಸಿ

ಮುದ್ದಹನುಮೇಗೌಡ ಎಲ್ಲಾ ಪಕ್ಷಗಳಿಗೆ ಹೋಗಿಬಂದಿರೋದಕ್ಕೆ ನಮಗೂ ಬೇಜಾರಿದೆ. ಆದರೆ ಇದೀಗ ಅವರನ್ನ ನಾವು ಅಭ್ಯರ್ಥಿಯನ್ನಾಗಿ ಮಾಡಿದ್ದೇವೆ. ಹಾಗಂದ ಮಾತ್ರಕ್ಕೆ ನಮ್ಮ ಬಳಿ ಬೇರೆ ಯಾರೂ ಅಭ್ಯರ್ಥಿ ಇಲ್ಲ ಅಂತೇನಿಲ್ಲ್ಲ. ಆದರೆ ಇದು ಕ್ಲಿಷ್ಟಕರ ಚುನಾವಣೆ, ಗೆಲ್ಲುವ ಅಭ್ಯರ್ಥಿಯನ್ನ ನಿಲ್ಲಿಸಬೇಕು ಅಂತಾ ನಿಲ್ಲಿಸಿದ್ದೇವೆ ಎಂದರು.

28 ಸೀಟ್​ನಲ್ಲಿ 20 ಸೀಟ್ ಆದರೂ ಗೆಲ್ಲದೆ ಹೋದರೆ ನಮಗೆ ಸರ್ಕಾರ ನಡೆಸಲು ಯಾವುದೇ ನೈತಿಕತೆ ಇರುವುದಿಲ್ಲ. ಹೀಗಾಗಿ ನಾವೇ ಚುನಾವಣೆಗೆ ನಿಂತಿದ್ದೇವೆ ಅನ್ನೋ ರೀತಿ ಕೆಲಸ ಮಾಡಬೇಕು. ನಮ್ಮ ಸಂವಿಧಾನವನ್ನ ಬಿಜೆಪಿಯವರು ಇವತ್ತೂ ಒಪ್ಪೋದಿಲ್ಲ. ಆದರೆ ವಿಧಿ ಇಲ್ಲ ಅಂತೇಳಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಅವರ ಸಿದ್ಧಾಂತಗಳಿಗೆ ಸೋಲಾಗಬೇಕು. ನಾವು ಹಿಂದುಗಳೆ, ಆದರೆ ನಾವು ಮಹಾತ್ಮಾ ಗಾಂಧಿ ಹಿಂದುಗಳು, ಬಿಜೆಪಿಯವರು ಗೂಡ್ಸೆ ಹಿಂದುಗಳು ಎಂದರು.

ಇದನ್ನೂ ಓದಿ: ಹಾಸನ ಕ್ಷೇತ್ರದ ಗೆಲುವಿಗೆ ನಿರ್ಣಾಯಕವಾಗಿರುವ ಕಡೂರಿನಲ್ಲಿ ದಳಪತಿ ದೇವೇಗೌಡ ರಣತಂತ್ರ

ನಮ್ಮ ರಾಜ್ಯದಲ್ಲಿ ಇವತ್ತು ಕಾಂಗ್ರೆಸ್ ಪಕ್ಷದ 136 ಶಾಸಕರು ಇದ್ದಾರೆ. ರಾಜ್ಯದ ಎಲ್ಲಾ ಕಾರ್ಯಕರ್ತರ ಶ್ರಮದಿಂದ ಇದು ಸಾಧ್ಯವಾಗಿದೆ. ಮುಸ್ಲಿಮರು ಕಾಂಗ್ರೆಸ್​ಗೆ ಮತ ಹಾಕಲ್ಲ ಅಂತಾ ನಮ್ಮ ಅಭಿಪ್ರಾಯ ಅಲ್ಲ. ಆದರೆ ಬಿಜೆಪಿಯವರು ಕುತಂತ್ರಗಳನ್ನ ಮಾಡುತ್ತಾರೆ. ಅದಕ್ಕೆ ನಾವು ಎಚ್ಚರಿಕೆಯಿಂದ ಇರಬೇಕು ಅಂತಾ ಚರ್ಚೆ ಮಾಡಿದ್ದಾರೆ. ಅದರ ಅರ್ಥ ಮುಸ್ಲಿಮರು ನಮಗೆ ಬೆಂಬಲಿಸಲ್ಲ ಅಂತಲ್ಲ ಎಂದರು.

ಈ ಚುನಾವಣೆಯಲ್ಲಿ ನಮಗೆ ವೋಟ್​ ಕೇಳಲು ಅಧಿಕಾರವಿದೆ. ಕಳೆದ ಚುನಾವಣೆಗೆ ಮೊದಲು ನಾವು ಕೊಟ್ಟಿದ್ದ ಭರವಸೆಗಳನ್ನೆಲ್ಲ ಈಡೇರಿಸಿದ್ದೇವೆ. ನಾವು ನುಡಿದಂತೆ ನಡೆದಿದ್ದೇವೆ, ಬಿಜೆಪಿಯವರು ನುಡಿದಂತೆ ನಡೆದಿಲ್ಲ. ಈಗ ಶ್ರೀರಾಮನ ದೇವಸ್ಥಾನವನ್ನ ತೋರಿಸುತ್ತಿದ್ದಾರೆ. ಶ್ರೀರಾಮ ಮೂರ್ತಿ ಕೆತ್ತಿದವನನ್ನು ಗರ್ಭಗುಡಿಯ ಒಳಗೆ ಬಿಡಿ ನೋಡೋಣ ಎಂದರು.

ದೇವಸ್ಥಾನ ಕಟ್ಟುವವರು ಶೂದ್ರರು, ನಂತರ ಪೂಜೆ ಮಾಡಿ ತಟ್ಟೆಗೆ ಕಾಸು ಹಾಕಿಸಿಕೊಳ್ಳುವವರು ಇವರು. ರಾಮಾಯಣ ಬರೆದವರು ವಾಲ್ಮೀಕಿ, ಮಹಾಭಾರತ ಬರೆದವರು ವ್ಯಾಸ, ಭಗವದ್ಗೀತೆ ಬರೆದವರು ಕೃಷ್ಣ, ಇವರೆಲ್ಲರೂ ಶೂದ್ರರು. ಆದರೆ ಶೂದ್ರರ ದೇವರನ್ನ ಇವರು ಪೂಜೆ ಮಾಡುತ್ತಿದ್ದಾರೆ. ಮನುಸ್ಮೃತಿಯನ್ನ ಬರೆದುಕೊಂಡಿದ್ದಾರೆ. ಅದರಲ್ಲಿ ಬ್ರಾಹ್ಮಣರು ಶ್ರೇಷ್ಠ ಅಂತಾ ಬರೆದುಕೊಂಡಿದ್ದಾರೆ, ಬರೆದುಕೊಳ್ಳಲಿ ಅಭ್ಯಂತರವಿಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ