AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಬ್ಬಿ ಶಾಸಕ ಶ್ರೀನಿವಾಸ್ ಜೆಡಿಎಸ್ ಪಕ್ಷ ತೊರೆಯುವ ಮುನ್ಸೂಚನೆ ಹಿನ್ನೆಲೆ ಹೊಸ ಅಭ್ಯರ್ಥಿಯನ್ನು ಹುಟ್ಟುಹಾಕಿದ ಕುಮಾರಸ್ವಾಮಿ

ಶಾಸಕ ಶ್ರೀನಿವಾಸ್ ತೆರೆ ಮರೆಯಲ್ಲಿ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿದ್ದರು. ಚುನಾವಣೆ ಸಮೀಪದಲ್ಲಿ ಕಾಂಗ್ರೆಸ್ ಸೇರಲು ಯೋಚಿಸಿದ್ದರು.

ಗುಬ್ಬಿ ಶಾಸಕ ಶ್ರೀನಿವಾಸ್ ಜೆಡಿಎಸ್ ಪಕ್ಷ ತೊರೆಯುವ ಮುನ್ಸೂಚನೆ ಹಿನ್ನೆಲೆ ಹೊಸ ಅಭ್ಯರ್ಥಿಯನ್ನು ಹುಟ್ಟುಹಾಕಿದ ಕುಮಾರಸ್ವಾಮಿ
ಗುಬ್ಬಿ ಶಾಸಕ ಶ್ರೀನಿವಾಸ್
TV9 Web
| Edited By: |

Updated on: Sep 21, 2021 | 9:23 AM

Share

ತುಮಕೂರು: ಜೆಡಿಎಸ್ (JDS) ಶಾಸಕನ ತಂತ್ರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಪ್ರತಿತಂತ್ರದ ಶಾಕ್ ನೀಡಿದ್ದಾರೆ. ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ ಪಕ್ಷ ತೊರೆಯುವ ಮಾಹಿತಿ ಹಿನ್ನೆಲೆ ಹೊಸ ಅಭ್ಯರ್ಥಿಯನ್ನು ಕುಮಾರಸ್ವಾಮಿ ಹುಟ್ಟುಹಾಕಿದ್ದಾರೆ. ಚುನಾವಣೆ ಸಮಯದಲ್ಲಿ ಜೆಡಿಎಸ್ ಶಾಸಕ ಶ್ರೀನಿವಾಸ್ ಪಕ್ಷ ತೊರೆಯುವ ಮುನ್ಸೂಚನೆ ನೀಡಿದ್ದು, ಹೀಗಾಗಿ ಇದಕ್ಕೆ ಕುಮಾರಸ್ವಾಮಿ ಪ್ರತಿತಂತ್ರ ರೂಪಿಸಿದ್ದಾರೆ. ಉದ್ಯಮಿ ನಾಗರಾಜುಗೆ ಜೆಡಿಎಸ್ ಟಿಕೆಟ್ ನೀಡಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.

ಶಾಸಕ ಶ್ರೀನಿವಾಸ್ ತೆರೆ ಮರೆಯಲ್ಲಿ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿದ್ದರು. ಚುನಾವಣೆ ಸಮೀಪದಲ್ಲಿ ಕಾಂಗ್ರೆಸ್ ಸೇರಲು ಯೋಚಿಸಿದ್ದರು. ಹೀಗಾಗಿ ಶಾಸಕ ಎಸ್.ಆರ್.ಶ್ರೀನಿವಾಸ್ ನಡೆಯನ್ನು ಅರಿತ ಕುಮಾರಸ್ವಾಮಿ ಗುಬ್ಬಿ ಕ್ಷೇತ್ರದಲ್ಲೇ ಹೊಸ ಅಭ್ಯರ್ಥಿಯನ್ನು ಹುಟ್ಟಿ ಹಾಕಿದ್ದಾರೆ. ಉದ್ಯಮಿ ನಾಗರಾಜು ಎಂಬುವವರಿಗೆ ಜೆಡಿಎಸ್ ಟಿಕೆಟ್ ನೀಡಲು ಚಿಂತನೆ ನಡೆದಿದೆ. ಸಿ.ಎಸ್.ಪುರ ನಿವಾಸಿಯಾಗಿರುವ ನಾಗರಾಜು ಜೆಡಿಎಸ್ ಸೇರ್ಪಡೆಗೆ ವೇದಿಕೆ ಸಿದ್ಧತೆಯಾಗುತ್ತಿದೆ. ಖುದ್ದು ಕುಮಾರಸ್ವಾಮಿಯೇ ಹೊಸ ಅಭ್ಯರ್ಥಿಯನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಎಸ್.ಆರ್.ಶ್ರೀನಿವಾಸ್, ಎಲ್ಲ ಕ್ಷೇತ್ರಗಳಲ್ಲಿ ಇಬ್ಬಿಬ್ಬರು ಅಭ್ಯರ್ಥಿಗಳನ್ನು ಇಟ್ಟಿರುತ್ತಾರೆ. ಇದು ನಮ್ಮ ನಾಯಕರ ಗುಣವೆಂದು ಅಸಮಾಧಾನ ಹೊರಹಾಕಿದ್ದಾರೆ. ನಿಟ್ಟೂರಿನಲ್ಲಿ ಜೆಡಿಎಸ್ ಶಾಸಕ ಶ್ರೀನಿವಾಸ್ ಅಸಮಾಧಾನ ಹೊರಹಾಕಿದ್ದು, ನನ್ನ ಕ್ಷೇತ್ರದಲ್ಲಿ ಇಷ್ಟು ದಿನ ಅಭ್ಯರ್ಥಿಯೇ ಸಿಕ್ಕಿರಲಿಲ್ಲ. ಈಗ ಅಭ್ಯರ್ಥಿ ಸಿಕ್ಕ ಕೂಡಲೇ ಎತ್ತಿಕಟ್ಟುವ ಕೆಲಸವಾಗುತ್ತಿದೆ. ನನಗೆ ಕುಮಾರಸ್ವಾಮಿ ಮೇಲೆ ಯಾವುದೇ ಮುನಿಸಿಲ್ಲ. ಆದರೆ ಅವರೇ ಕ್ರಿಯೇಟ್ ಮಾಡುತ್ತಿದ್ದಾರೆ. ನಾನು ಎಲ್ಲಿಯೂ ಜೆಡಿಎಸ್ ಪಕ್ಷ ಬಿಡುತ್ತೇನೆ ಎಂದು ಹೇಳಿಲ್ಲ. ಮೊನ್ನೆ ತಾನೆ ನಾನು ದೇವೇಗೌಡರನ್ನ ಭೇಟಿ ಮಾಡಿ ಪಕ್ಷದ ಕಾರ್ಯಕ್ರಮಕ್ಕೆ ಹಾಜರಾಗಿದ್ದೇನೆ. ಅದಾದ ಮೇಲೂ ಇನ್ನೊಬ್ಬರನ್ನ ಹಾಕುವುದಾದರೆ ಸಂತೋಷ ಅಂತ ಹೇಳಿದ್ದಾರೆ.

ಇದನ್ನೂ ಓದಿ

ತುಮಕೂರು ಸಂಸದ ಮತ್ತು ಗುಬ್ಬಿ ಶಾಸಕರ ನಡುವೆ ವಾಕ್ಸಮರ; ಎಂಎಸ್ಎಸ್ ಸ್ಟೇಷನ್ ಉದ್ಘಾಟನೆ ಕಾರ್ಯಕ್ರಮಲ್ಲೇ ಪರಸ್ಪರ ಜಗಳ

ಅಭಿಮಾನಿಗೆ ಶಾರುಖ್​ ಚಿತ್ರದಿಂದ ಮೋಸ;​ 15 ಸಾವಿರ ದಂಡ ವಿಧಿಸಿದ ಸುಪ್ರೀಂ ಕೋರ್ಟ್; ಇದು ಇಂಟರೆಸ್ಟಿಂಗ್​ ಕೇಸ್​

(Kumaraswamy is plan about appointing a new JDS candidate for the Gubbi)

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!