AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಚುನಾವಣಾ ಅಧಿಕಾರಿಗಳಿಂದ ದಾಳಿ; ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಕುಕ್ಕರ್ ವಶಕ್ಕೆ

ಲೋಕಸಭಾ ಚುನಾವಣೆ ಹಿನ್ನಲೆ ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್​ಗಳನ್ನಯ ತುಮಕೂರು ಜಿಲ್ಲೆಯ ಕುಣಿಗಲ್​ನ(Kunigal) 22ನೇ ವಾರ್ಡ್​ನಲ್ಲಿ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಸಂಸದ ಡಿ.ಕೆ.ಸುರೇಶ್​ರಿಂದ ಈ ಕುಕ್ಕರ್​ಗಳನ್ನು ಹಂಚಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಚುನಾವಣಾಧಿಕಾರಿಗಳು ಕುಕ್ಕರ್​ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ತುಮಕೂರು: ಚುನಾವಣಾ ಅಧಿಕಾರಿಗಳಿಂದ ದಾಳಿ; ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಕುಕ್ಕರ್ ವಶಕ್ಕೆ
ಕುಣಿಗಲ್​ನಲ್ಲಿ ಕುಕ್ಕರ್​ ವಶಕ್ಕೆ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 20, 2024 | 8:44 PM

Share

ತುಮಕೂರು, ಮಾ.20: ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 80ಕ್ಕೂ ಹೆಚ್ಚು ಕುಕ್ಕರ್​ಗಳನ್ನು ತುಮಕೂರು ಜಿಲ್ಲೆಯ ಕುಣಿಗಲ್​ನ(Kunigal) 22ನೇ ವಾರ್ಡ್​ನಲ್ಲಿ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜೆಡಿಎಸ್ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ಮಲ್ಲಿಪಾಳ್ಯದ ಬೆಟ್ಟಸ್ವಾಮಿಗೆ ಸೇರಿದ ಗೋದಾಮಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಕುಕ್ಕರ್​ಗಳ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ರಂಗನಾಥ್ ಭಾವಚಿತ್ರವಿರುವ ಕುಕ್ಕರ್​ಗಳನ್ನು ಜಪ್ತಿ ಮಾಡಲಾಗಿದೆ.

ಡಿ.ಕೆ.ಸುರೇಶ್​ರಿಂದ ಕುಕ್ಕರ್ ಹಂಚಿಕೆ ಆರೋಪ

ಟಿಸಿ ರಿಪೇರಿ ಮಾಡುವ ಗೋದಾಮಿನಲ್ಲಿ ಕುಕ್ಕರ್​ ದಾಸ್ತಾನು ಮಾಡಿದ್ದರು. ಮಧ್ಯಾಹ್ನ ಕುಕ್ಕರ್ ಕೇಳಿದ್ದ ವೃದ್ಧೆ ಮೇಲೆ ‘ಕೈ’ ಮುಖಂಡ ಹಲ್ಲೆ ಮಾಡಿದ್ದ. ಸಂಸದ ಡಿ.ಕೆ.ಸುರೇಶ್​ರಿಂದ ಈ ಕುಕ್ಕರ್​ಗಳನ್ನು ಹಂಚಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಚುನಾವಣಾಧಿಕಾರಿಗಳು ಕುಕ್ಕರ್​ಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಲೋಕಸಭೆ ಚುನಾವಣೆ: ಬೆಳಗಾವಿಯಲ್ಲಿ 2 ಲಕ್ಷ ರೂ. ಜಪ್ತಿ: ರಾಮನಗರದಲ್ಲಿ ಕುಕ್ಕರ್, ತವಾ ಹಂಚಿಕೆ ಆರೋಪ

ರಾಮನಗರದಲ್ಲಿ ಕುಕ್ಕರ್, ತವಾ ಹಂಚಿಕೆ ಆರೋಪ

ಇನ್ನು ಇದೇ ಮಾ.16 ರಂದು ಚುನಾವಣೆ ಘೋಷಣೆ ದಿನಾಂಕ ಬೆನ್ನಲ್ಲೇ  ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ‌ ಮರಳವಾಡಿ ಗ್ರಾಮದಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಕುಕ್ಕರ್, ತವಾ ಹಂಚಿಕೆ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಜೆಡಿಎಸ್ ಕಾರ್ಯಕರ್ತರು ಹಾರೋಹಳ್ಳಿ ತಹಶೀಲ್ದಾರ್​ಗೆ ದೂರು ನೀಡಿದ್ದರು. ಜೊತೆಗೆ ಕುಕ್ಕರ್​​ಗಳ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ ಸಂಸದ‌ ಡಿ‌.ಕೆ.ಸುರೇಶ್,‌‌ ಶಾಸಕ ಇಕ್ಬಾಲ್ ಹುಸೇನ್ ಭಾವಚಿತ್ರದ ಜೊತೆಗೆ ಹೊಸ ವರ್ಷದ ಶುಭಾಶಯದ ಪೋಸ್ಟರ್‌ ಇತ್ತು. ಇದರ ಬೆನ್ನಲ್ಲೇ ಇದೀಗ ಕುಣಿಗಲ್​ನಲ್ಲೂ ಕುಕ್ಕರ್​ ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:44 pm, Wed, 20 March 24

Follow Us
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ