AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಟ್ರ್ಯಾಕ್ಟರ್​ ಪಲ್ಟಿ: ಕೆಳಗೆ ಸಿಲುಕಿ ತಂದೆ, ಮಗ ಸ್ಥಳದಲ್ಲೇ ಸಾವು

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಲಕ್ಕೆಗೌಡನಪಾಳ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದು ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಟ್ರ್ಯಾಕ್ಟರ್ ಕೆಳಗೆ ಸಿಲುಕಿ ತಂದೆ ಮತ್ತು ಮಗ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ಸದ್ಯ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ಟ್ರ್ಯಾಕ್ಟರ್​ ಪಲ್ಟಿ: ಕೆಳಗೆ ಸಿಲುಕಿ ತಂದೆ, ಮಗ ಸ್ಥಳದಲ್ಲೇ ಸಾವು
ಬೆಂಗಳೂರಿನ ಅಪಾರ್ಟ್‌ಮೆಂಟ್​ವೊಂದರ 16ನೇ ಫ್ಲೋರ್​​ನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ
ಮಹೇಶ್ ಇ, ಭೂಮನಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 17, 2024 | 5:27 PM

Share

ತುಮಕೂರು, ನವೆಂಬರ್ 17: ಚಲಿಸುತ್ತಿದ್ದ ಟ್ರ್ಯಾಕ್ಟರ್​ ಪಲ್ಟಿಯಾಗಿ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಲಕ್ಕೆಗೌಡನಪಾಳ್ಯದಲ್ಲಿ ನಡೆದಿದೆ. ತಂದೆ ಶಿವರಾಮಯ್ಯ(50), ಮಗ ಹರೀಶ್(21) ಮೃತರು. ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪ್ರಕರಣ ದಾಖಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದು ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಅಡಕೆ ತುಂಬಿಕೊಂಡು ಬರುತ್ತಿದ್ದಾಗ ನಡೆದ ಘಟನೆ ಸಂಭವಿಸಿದ್ದು, ಟ್ರ್ಯಾಕ್ಟರ್ ಕೆಳಗೆ ಸಿಲುಕಿ ತಂದೆ ಮತ್ತು ಮಗ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತರು ಜಾಣಗೆರೆ ಗ್ರಾಮದ ನಿವಾಸಿಗಳು.

ಸುಸ್ತು ಎಂದು ಮಲಗಿದ ವಿದ್ಯಾರ್ಥಿ ಮೇಲೆಳಲಿಲ್ಲ

ಜಿಲ್ಲೆಯ ಕೊರಟಗೆರೆ ತಾಲೂಕಿನ ಬಜ್ಜನಹಳ್ಳಿ ಬಳಿಯಿರುವ ಏಕಲವ್ಯ ವಸತಿ ಶಾಲೆಯಲ್ಲಿ  8 ತರಗತಿಯ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ಇತ್ತೀಚೆಗೆ ನಡೆದಿತ್ತು. ಅಭಿಲಾಷ್ ಮೃತ ವಿದ್ಯಾರ್ಥಿ. ತನ್ನ ತಾಯಿ ದೀಪಾವಳಿ ಹಬ್ಬ ಮುಗಿಸಿ ಮತ್ತೆ ವಾಪಸ್ ವಸತಿ ಶಾಲೆಗೆ ನಗುತ್ತಲೇ ಆಡುತ್ತಲೇ ಹೋಗಿದ್ದಾನಂತೆ.

ವಸತಿ ಶಾಲೆಗೆ ತೆರಳಿದ ಅಭಿಲಾಷ್ ಮಧ್ಯಾಹ್ನ 12 ಸುಮಾರಿಗೆ ಸುಸ್ತಾಗ್ತಿದೆ ಎಂದು ಕೊಠಡಿಗೆ ಬಂದು ಮಲಗಿದ್ದಾನಂತೆ ಅಷ್ಟೇ, ಮತ್ತೆ ಮಧ್ಯಾಹ್ನ 3 ರ ವೇಳೆಗೆ ತೀವ್ರ ಅಸ್ವಸ್ಥನಾಗಿ ಬಿದ್ದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸುಮಾರು 2 ಗಂಟೆಗಳ ಕಾಲ ಅಸ್ವಸ್ಥತೆಯಿಂದ ಮಲಗಿದ್ದಾನಂತೆ ಅಲ್ಲದೇ ಬಾಯಲ್ಲಿ ಮೂಗಲ್ಲಿ ರಕ್ತಸ್ರಾವ ಆಗಿದೆ ಎನ್ನಲಾಗಿದೆ. ಬಳಿಕ ವಸತಿ ಶಾಲೆಯ ವಿದ್ಯಾರ್ಥಿಗಳೇ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಅಷ್ಟರಲ್ಲಿ ಅಭಿಲಾಷ್ ಮೃತಪಟ್ಟಿರುವುದು ತಿಳಿದಿದೆ.

ಇದನ್ನೂ ಓದಿ: ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ

ಇನ್ನೂ ಘಟನೆ ಬಗ್ಗೆ ತಿಳಿದ ತಹಶಿಲ್ದಾರ್ ಹಾಗೂ ಡಿಸಿ ಶುಭಕಲ್ಯಾಣ್ ಕೂಡಲೇ ಆಸ್ಪತ್ರೆಗೆ ಹಾಗೂ ವಸತಿ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದರು. ಮೇಲ್ನೋಟಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದ್ದು, ಪಿಎಮ್ ವರದಿಗಾಗಿ ಕಾಯಲಾಗುತ್ತಿದೆ. ಇನ್ನೂ ‌ನಮ್ಮ ಮನೆಯಿಂದ ನಾರ್ಮಲ್ ಆಗಿ ಬಂದ ಅಭಿಲಾಷ್ ವಸತಿ ಶಾಲೆಯಲ್ಲಿ ಯಾಕೆ ಹೀಗಾಯ್ತು ಅಂತಾ ವಸತಿ ಶಾಲೆಯ ಮೇಲೆ ಅನುಮಾನ ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ