AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ಜಾಗ ಅಕ್ರಮ ಒತ್ತುವರಿಯಲ್ಲಿ ಅಧಿಕಾರಿಗಳ ಕೈವಾಡ; ಕೆರೆ ಸಂರಕ್ಷಣೆ ಹೋರಾಟ ಸಮಿತಿಯಿಂದ ಉಪವಾಸದ ಸತ್ಯಾಗ್ರಹ ಎಚ್ಚರಿಕೆ

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಿಚ್ಚಾವಾಡಿ ಗ್ರಾಮದಲ್ಲಿ ನಾಗರಿಕರ ಹಾಗೂ ಜಾನುವಾರಗಳ ಅನುಕೂಲಕ್ಕಾಗಿ ಗ್ರಾಮದ ಸರ್ವೆ ನಂಬರ್ 166 ರಲ್ಲಿನ 13 ಎಕರೆ 5 ಗುಂಟೆ ಇರುವ ಕೆರೆಯನ್ನ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಕೆರೆ ಜಾಗ ಅಕ್ರಮ ಒತ್ತುವರಿಯಲ್ಲಿ ಅಧಿಕಾರಿಗಳ ಕೈವಾಡ; ಕೆರೆ ಸಂರಕ್ಷಣೆ ಹೋರಾಟ ಸಮಿತಿಯಿಂದ ಉಪವಾಸದ ಸತ್ಯಾಗ್ರಹ ಎಚ್ಚರಿಕೆ
ಕೆರೆ ಜಾಗ ಅಕ್ರಮ ಒತ್ತುವರಿಯಲ್ಲಿ ಅಧಿಕಾರಿಗಳ ಕೈವಾಡ; ಕೆರೆ ಸಂರಕ್ಷಣೆ ಹೋರಾಟ ಸಮಿತಿಯಿಂದ ಉಪವಾಸದ ಸತ್ಯಾಗ್ರಹ ಎಚ್ಚರಿಕೆ
Follow us
TV9 Web
| Updated By: ಆಯೇಷಾ ಬಾನು

Updated on: Dec 16, 2021 | 2:36 PM

ತುಮಕೂರು: ಸರ್ಕಾರದ ಸ್ವತ್ತನ್ನು ರಕ್ಷಿಸಬೇಕಾದ ಅಧಿಕಾರಿಗಳೇ ಭೂಗಳ್ಳರೊಂದಿಗೆ ಶಾಮೀಲಾಗಿ ಅಕ್ರಮವಾಗಿ ಒತ್ತುವರಿಯಾಗಿರುವ ಕೆರೆ ಜಾಗವನ್ನ ತೆರವುಗೊಳಿಸಲು ಮೀನಾಮೀಷ ಎಣಿಸುತ್ತಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಿಚ್ಚಾವಾಡಿ ಗ್ರಾಮದಲ್ಲಿ ನಾಗರಿಕರ ಹಾಗೂ ಜಾನುವಾರಗಳ ಅನುಕೂಲಕ್ಕಾಗಿ ಗ್ರಾಮದ ಸರ್ವೆ ನಂಬರ್ 166 ರಲ್ಲಿನ 13 ಎಕರೆ 5 ಗುಂಟೆ ಇರುವ ಕೆರೆಯನ್ನ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗ್ರಾಮದ ಒಂದೇ ಕುಟುಂಬದ ಚಿಕ್ಕತಾಯಮ್ಮ, ಕೆಂಪಶಂಕರಯ್ಯ, ಕುಳ್ಳಯ್ಯ ಅವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಅಂತಾ ಆರೋಪಿಸಿದ್ದಾರೆ. ಅಲ್ಲದೇ ಜೆಸಿಬಿ ಯಂತ್ರ ಬಳಸಿ ಕೆರೆಯ ತೂಬು ಹಾಗೂ ಏರಿಯನ್ನ ಧ್ವಂಸ ಮಾಡಿ ಮಾವಿನ ಗಿಡ, ನೀಲಗಿರಿ ನಡುತೋಪಿಗೆ ಬಳಸಿಕೊಳ್ಳುತ್ತಿದ್ದಾರೆ ಅಂತಾ ಕೆರೆ ಸಂರಕ್ಷಣೆ ಹೋರಾಟ ಸಮಿತಿಯ ಮುಖಂಡರು ಆರೋಪಿಸಿದ್ದಾರೆ.

ಕೆರೆ ಸಂರಕ್ಷಣೆ ಹೋರಾಟ ಸಮಿತಿಯಿಂದ ಉಪವಾಸದ ಸತ್ಯಾಗ್ರಹ ಎಚ್ಚರಿಕೆ ಕೆರೆಗಳ ಒತ್ತುವರಿಯಿಂದ ಅಂತರ್ಜಲ ಮಟ್ಟ ಕುಸಿತವಾಗಲಿದ್ದು, ಒತ್ತುವರಿಯಾಗಿರುವ ಕೆರೆಯ ಜಾಗವನ್ನ ತೆರವುಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ. ಕೂಡಲೇ ಅಧಿಕಾರಿಗಳು ತೆರವು ಗೊಳಿಸಿಲ್ಲ ಎಂದರೇ ಸಂರಕ್ಷಣೆ ಹೋರಾಟ ಸಮಿತಿ ಸೇರಿದಂತೆ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದ್ದಾರೆ.

ಅಧಿಕಾರಿಗಳ ಶಾಮೀಲು ಆರೋಪ ಇನ್ನೂ ಇದರಲ್ಲಿ ತಾಲೂಕು ಕಚೇರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೇ ಶಾಮಿಲಾಗಿರುವ ಆರೋಪ ಕೇಳಿಬಂದಿದೆ. ಸಾಕಷ್ಟು ಬಾರಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವಿ ಮಾಡಿ ಕೆರೆ ಜಾಗವನ್ನ ತೆರವುಗೊಳಿಸುವಂತೆ ಮನವಿ ಮಾಡಿದರೂ ಸ್ಪಂದಿಸಿಲ್ಲ ಎನ್ನಲಾಗಿದೆ. ಹೀಗಾಗಿ ಈ ಅಕ್ರಮಕ್ಕೆ ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ ಅಂತಾ ಆರೋಪ ಕೇಳಿಬಂದಿದೆ. ಒಟ್ಟಾರೆ ಸರ್ಕಾರ ಇದನ್ನ ಗಮನಹರಿಸಿ ಕೂಡಲೇ ಕೆರೆ ಜಾಗವನ್ನ ಒತ್ತುವರಿ ತೆರವುಗೊಳಿಸಿ ಗ್ರಾಮಸ್ಥರಿಗೆ ಹಾಗೂ ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕಿದೆ.

ವರದಿ: ಮಹೇಶ್, ಟಿವಿ9 ತುಮಕೂರು

ಇದನ್ನೂ ಓದಿ: ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ; ಬೆಳಗಾವಿ ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ ಧರಣಿ ನಿರತರು

ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ