AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನು ಸಚಿವ ಮಾಧುಸ್ವಾಮಿ ಕ್ಷೇತ್ರದಲ್ಲಿ ಭ್ರಷ್ಟಾಚಾರ ತಾಂಡವ: ಉಪತಹಶೀಲ್ದಾರ್ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್

ಲಾರಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಲಾರಿಯ‌ ಹಿಂಭಾಗ ನುಜ್ಜುಗುಜ್ಜಾಗಿರುವಂತಹ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಸಿದ್ಧೇಶ್ವರ ರೇಲ್ವೆ ಕ್ರಾಷಿಂಗ್ ಬಳಿ‌ ನಡೆದಿದೆ.

ಕಾನೂನು ಸಚಿವ ಮಾಧುಸ್ವಾಮಿ ಕ್ಷೇತ್ರದಲ್ಲಿ ಭ್ರಷ್ಟಾಚಾರ ತಾಂಡವ: ಉಪತಹಶೀಲ್ದಾರ್ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್
ಉಪತಹಶೀಲ್ದಾರ್ ಕಾರ್ಯಲಯ ಹುಳಿಯಾರು.
TV9 Web
| Edited By: |

Updated on: Jul 07, 2022 | 12:21 PM

Share

ತುಮಕೂರು: ಕಾನೂನು ಸಚಿವ ಮಾಧುಸ್ವಾಮಿ ಕ್ಷೇತ್ರದಲ್ಲಿ ಭ್ರಷ್ಟಾಚಾರ (Corruption) ತಾಂಡವಾಡುತ್ತಿದ್ದು, ಬೇರೆಯವರ ಹೆಸರಿಗೆ ಜಮೀನು ಖಾತೆ ಮಾಡಿಕೊಟ್ಟ ಆರೋಪ ಕೇಳಿಬಂದಿದ್ದು, ಹುಳಿಯಾರು ಉಪತಹಶೀಲ್ದಾರ್ ಪುಷ್ಪಾವತಿ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ. ಆರ್​ಐ ಮಂಜುನಾಥ, ಗ್ರಾಮಲೆಕ್ಕಿಗ ಹೆಚ್.ಹೆಚ್.ಮಂಜುನಾಥ ಜಮೀನು ತಮ್ಮ ಹೆಸರಿಗೆ ಮಾಡಿಸಿಕೊಂಡ ತಿಮ್ಮಕ್ಕ ವಿರುದ್ಧ ಎಫ್​ಐಆರ್ ಹಾಕಲಾಗಿದೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಕಲ್ಲೇನಹಳ್ಳಿಯಲ್ಲಿರುವ ಗೋಣಿನಿಂಗಪ್ಪ ಅವರ 4 ಎಕರೆ ಜಮೀನನ್ನು ತಿಮ್ಮಕ್ಕ ಎಂಬ ಹೆಸರಿಗೆ ಖಾತೆ ಮಾಡಿಕೊಟ್ಟಿರುವ ಆರೋಪ ಮಾಡಲಾಗಿದ್ದು, ತಿಮ್ಮಕ್ಕ ಸೇರಿದಂತೆ ನಾಲ್ವರ ವಿರುದ್ಧ ಹುಳಿಯಾರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಲಾರಿಗೆ ಗೂಡ್ಸ್ ರೈಲು ಡಿಕ್ಕಿ: ತಪ್ಪಿದ ಭಾರೀ ಅನಾಹುತ: 

ಬೀದರ್: ಲಾರಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಲಾರಿಯ‌ ಹಿಂಭಾಗ ನುಜ್ಜುಗುಜ್ಜಾಗಿರುವಂತಹ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಸಿದ್ಧೇಶ್ವರ ರೇಲ್ವೆ ಕ್ರಾಷಿಂಗ್ ಬಳಿ‌ ನಡೆದಿದೆ. ಟ್ರೇನ್ ಬರುತ್ತಿದೆಂದು ಗೇಟ್ ಮ್ಯಾನ್ ರೇಲ್ವೆ ಗೇಟ್ ಹಾಕಿದ್ದಾನೆ. ಅಷ್ಟರಲ್ಲಿ ಲಾರಿ ಗೇಟನೊಳಗೆ ಹೋಗಿದೆ. ಗೇಟ್ ತೆರೆಯಬೇಕು‌ ಅನ್ನುವಷ್ಟಲ್ಲಿ ರೈಲು ಬಂದಿದ್ದು, ಲಾರಿಯನ್ನ ಗುದ್ದಿಕೊಂಡು ಮುಂದೆ ಹೋಗಿದೆ. ಲಾರಿಗೆ ರೈಲು ಗುದ್ದಿರುವ ವಿಡಿಯೋ ಸಾಮಾಜಿಕ ‌ಜಾಲತಾಣದಲ್ಲಿ‌ ಬಾರೀ ವೈರಲ್ ಆಗಿದೆ. ಈ ಕುರಿತು ಬೀದರ್ ರೇಲ್ವೆ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: India T20 WC Squad: ಕೊಹ್ಲಿಗೆ ಅಗ್ನಿಪರೀಕ್ಷೆ: ಫಾರ್ಮ್​​ಗೆ ಬರದಿದ್ರೆ ಟಿ20 ವಿಶ್ವಕಪ್​ ತಂಡದಿಂದ ಔಟ್

KSRTC ಬಸ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸಾವು

ತುಮಕೂರು: ತಿಪಟೂರು ತಾಲೂಕಿನ ಬಿದರೆಗುಡಿ ಬಳಿ KSRTC ಬಸ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ಮತ್ತಿಹಳ್ಳಿಯ ತಿರುವಿನಲ್ಲಿ ಕಾರು ಹಾಗೂ ಬಸ್​​ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಿದ್ದು, ತಿಪಟೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಂತರ ಜಿಲ್ಲಾ ಕಳ್ಳರ ಬಂಧನ:

ತುಮಕೂರು: ಜಾನುವಾರುಗಳನ್ನು ಕಳವು ಮಾಡಿ‌ ಕಸಾಯಿ ಖಾನೆಗೆ ಮಾರಾಯ ಮಾಡುತ್ತಿದ್ದ ಕಳ್ಳರ ಬಂಧಿಸಿರುವಂತಹ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲದಲ್ಲಿ ನಡೆದಿದೆ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಟ್ಟು ಐದು ಗ್ರಾಮಗಳಲ್ಲಿ ಕಳ್ಳತನ ಮಾಡಿದ್ಧರು. 10 ಜಾನುವಾರುಗಳನ್ನು ಕಳವು ಮಾಡಿದ್ದ ಮೂವರು, ಜಾನುವಾರುಗಳ ಕಳವುನಿಂದ ಗ್ರಾಮಸ್ಥರು ಕಂಗೆಟ್ಟಿದ್ದರು. ಟಾಟಾ ಏಸ್​ನಲ್ಲಿ ಬಂದು ಜಾನುವಾರುಗಳ ಕಳವು ಮಾಡಿ ಹೋಗುತ್ತಿದ್ದರು. ಜುಬಿ, ಬೆಂಗಳೂರು, ಚಿಕ್ಕಬಳ್ಳಾಪುರ ಮೂಲದ ಅಬ್ಜದ್ ಪಾಷ ಹಾಗೂ ನಾಸೀರ್ ಖಾನ್ ಬಂಧಿತರು. ಮೂವರು ಕೂಡ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Viral News: ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ ಮಾಡಿ ಮಾದರಿಯಾದ ಮುಸ್ಲಿಂ ಕುಟುಂಬ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?