AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪ್ರಕರಣ: ಸಹಾಯಕ ಆಯುಕ್ತೆ ತಬಸ್ಸುಮ್ ಜಹೇರಾ, ಉಪ ತಹಶೀಲ್ದಾರ್ ಶಬ್ಬೀರ್​​ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಲೋಕಾಯುಕ್ತ ನ್ಯಾಯಾಲಯ

ಲಂಚ ಪ್ರಕರಣದಲ್ಲಿ ಅಂದಿನ ಸಹಾಯಕ ಆಯುಕ್ತೆ ತಬಸ್ಸುಮ್ ಜಹೇರಾ, ಉಪ ತಹಶೀಲ್ದಾರ್ ಶಬ್ಬೀರ್​​ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಲೋಕಾಯುಕ್ತ ನ್ಯಾಯಾಲಯ ಆದೇಶ ಹೊರಡಿಸಿದೆ. ತಬಸ್ಸುಮ್ ಜಹೇರಾ ಪ್ರಸ್ತುತ ಕೆಐಎಡಿಬಿ ಇಲಾಖೆಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಅಹ್ಮದ್ ತುಮಕೂರು ಜಿಲ್ಲೆಯ ಬೆಳ್ಳಾವಿಯಲ್ಲಿ ಉಪ ತಹಶೀಲ್ದಾರ್ ಆಗಿದ್ದಾರೆ.

ಲಂಚ ಪ್ರಕರಣ: ಸಹಾಯಕ ಆಯುಕ್ತೆ ತಬಸ್ಸುಮ್ ಜಹೇರಾ, ಉಪ ತಹಶೀಲ್ದಾರ್ ಶಬ್ಬೀರ್​​ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಲೋಕಾಯುಕ್ತ ನ್ಯಾಯಾಲಯ
ಲಂಚ: ಇಬ್ಬರು ಅಧಿಕಾರಿಗಳಿ​​ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಲೋಕಾಯುಕ್ತ ನ್ಯಾಯಾಲಯ
ಸಾಧು ಶ್ರೀನಾಥ್​
|

Updated on: Sep 14, 2023 | 7:07 AM

Share

ತುಮಕೂರು: ಇಲ್ಲಿಯ ವಿಶೇಷ ಲೋಕಾಯುಕ್ತ ನ್ಯಾಯಾಲಯವು (special Lokayukta court) ಸಹಾಯಕ ಕಮಿಷನರ್ ತಬಸ್ಸುಮ್ ಜಹೇರಾ (assistant commissioner Tabassum Zahera) ಮತ್ತು ಉಪ ತಹಶೀಲ್ದಾರ್ ಶಬ್ಬೀರ್ ಅಹ್ಮದ್ (deputy tahsildar Shabbir Ahmed) ಅವರಿಬ್ಬರನ್ನು ಲಂಚ (bribe) ಸ್ವೀಕರಿಸಿದ ಆರೋಪದಲ್ಲಿ ದೋಷಿ ಎಂದು ಘೋಷಿಸಿದ್ದು, ಇಬ್ಬರಿಗೂ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ತಬಸ್ಸುಮ್ ಜಹೇರಾ ಪ್ರಸ್ತುತ ಕೆಐಎಡಿಬಿಯ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಅಹ್ಮದ್ ತುಮಕೂರು ಜಿಲ್ಲೆಯ ಬೆಳ್ಳಾವಿಯಲ್ಲಿ ಉಪ ತಹಶೀಲ್ದಾರ್ ಆಗಿದ್ದಾರೆ.

ಕುಣಿಗಲ್ ತಾಲೂಕಿನ ಯಡಿಯೂರು ಹೋಬಳಿಯ ಆವರಗೆರೆ ನಿವಾಸಿ ವಿ.ಟಿ. ಜಯರಾಂ ಅವರ ತಂದೆಗೆ ಸೇರಿದ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂದು ದೂರು ಸಲ್ಲಿಸಿದ್ದರು. ತಮ್ಮ ತಂದೆಯ ಹೆಸರಿಗೆ ಜಮೀನಿನ ದಾಖಲೆಗಳನ್ನು ಮರು ವರ್ಗಾಯಿಸಿ, ಮಾಲೀಕತ್ವವನ್ನು ಮರುಸ್ಥಾಪಿಸುವಂತೆ ಕೋರಿ ಅಂದಿನ ಸಹಾಯಕ ಆಯುಕ್ತರಾದ ತಬಸ್ಸುಮ್ ಅವರಿಗೆ ಅರ್ಜಿ ಸಲ್ಲಿಸಿದ್ದರು. ಎಸಿ ತನ್ನ ಕಚೇರಿಯ ಸಿಬ್ಬಂದಿ ಶಬ್ಬೀರ್ ಅವರನ್ನು ಭೇಟಿಯಾಗುವಂತೆ ಕೇಳಿದ್ದರು. ಈ ಮಧ್ಯೆ ಕೆಲಸ ಮಾಡಿಕೊಡಲು 35,000 ರೂ. ಲಂಚ ಬೇಡಿಕೆ ಮುಂದಿಟ್ಟಿದ್ದರು.

ಲಂಚ ಕೊಟ್ಟರೂ ಜಯರಾಮ್ ಕಂಬ ಸುತ್ತಾಟ ಮುಂದುವರಿದಿತ್ತು. ಕೆಸಲ ಮಾತ್ರ ಆಗಿರಲಿಲ್ಲ. ಬದಲಿಗೆ ಅಂದಿನ ಉಪ ತಹಶೀಲ್ದಾರ್ ಶಬ್ಬೀರ್ ಇನ್ನಷ್ಟು ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಒಮ್ಮೆ ತಮ್ಮ ನಡುವಣ ಭೇಟಿಯಲ್ಲಿ ಅಧಿಕಾರಿಗಳ ಜೊತೆಗಿನ ಸಂಭಾಷಣೆಯನ್ನು ಜಯರಾಮ್ ರೆಕಾರ್ಡ್ ಮಾಡಿದರು. ಮೇ 23, 2017 ರಂದು ಜಯರಾಂ ಅವರು ಆಡಿಯೋ ಟೇಪ್ ಸಹಿತ ಎಸಿಬಿಗೆ ದೂರು ನೀಡಿದ್ದರು.

ಇದನ್ನೂ ಓದಿ: ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಟಿಕೆಟ್ ಇಲ್ಲದೆ ಪಯಾಣಿಸಿದ 3208 ಪ್ರಯಾಣಿಕರಿಗೆ ದಂಡ ಹಾಕಿದ ಕೆಎಸ್ಆರ್​ಟಿಸಿ; ಬಂದ ಮೊತ್ತವೆಷ್ಟು ಗೊತ್ತಾ?

ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಲಿಂಗೇಗೌಡ ಅವರು ಅಧಿಕಾರಿಗಳನ್ನು ತಪ್ಪಿತಸ್ಥರೆಂದು ಘೋಷಿಸಿದರು ಮತ್ತು ಅವರಿಗೆ ತಲಾ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ