AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತವರು ಮನೆಗೆ ಬಂದ್ದಿದ್ದ ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ ನೀಡಿ 60 ಸಾವಿರ ದಂಡ ವಿಧಿಸಿದ ಮಧುಗಿರಿ ನ್ಯಾಯಾಲಯ

ಮಧುಗಿರಿಯ 4 ನೇ ಅಧಿಕ ಮತ್ತು ಸತ್ರ ನ್ಯಾಯಾಲಯವು ಪತ್ನಿಯನ್ನು ಕೊಂದವನಿಗೆ ಜೀವಾವಧಿ ಶಿಕ್ಷೆ ಹಾಗೂ 60 ಸಾವಿರ ದಂಡ ವಿಧಿಸಿದೆ. 2014 ರ ಸೆಪ್ಟೆಂಬರ್ 2 ರಂದು ಘಟನೆ ನಡೆದಿತ್ತು.

ತವರು ಮನೆಗೆ ಬಂದ್ದಿದ್ದ ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ ನೀಡಿ 60 ಸಾವಿರ ದಂಡ ವಿಧಿಸಿದ ಮಧುಗಿರಿ ನ್ಯಾಯಾಲಯ
ಸಾಂಕೇತಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Nov 25, 2021 | 11:20 AM

Share

ತುಮಕೂರು: ತವರು ಮನೆಗೆ ಆಗಮಿಸಿದ್ದ ಹೆಂಡತಿಯ ಮೇಲೆ ಅನುಮಾನ ಪಟ್ಟು ಕೊಲೆ ಮಾಡಿದ್ದ ಗಂಡನಿಗೆ ಜೀವಾವಧಿ ವಿಧಿಸಿದ ಘಟನೆ ನಡೆದಿದೆ. ಮಧುಗಿರಿಯ 4 ನೇ ಅಧಿಕ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.

ಮಧುಗಿರಿಯ 4 ನೇ ಅಧಿಕ ಮತ್ತು ಸತ್ರ ನ್ಯಾಯಾಲಯವು ಪತ್ನಿಯನ್ನು ಕೊಂದವನಿಗೆ ಜೀವಾವಧಿ ಶಿಕ್ಷೆ ಹಾಗೂ 60 ಸಾವಿರ ದಂಡ ವಿಧಿಸಿದೆ. 2014 ರ ಸೆಪ್ಟೆಂಬರ್ 2 ರಂದು ಘಟನೆ ನಡೆದಿತ್ತು. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮದ್ದನಹಳ್ಳಿ ಗ್ರಾಮದ ವೆಂಕಟೇಶಪ್ಪ ಎಂಬುವರ ಮನೆಗೆ ಗೌರಿಹಬ್ಬಕ್ಕೆ ಆಗಮಿಸಿದ್ದ ವೇಳೆ ಪತ್ನಿಯ ಮೇಲೆ ಅನೈತಿಕ ಸಂಬಂಧ ಅನುಮಾನ ಪಟ್ಟು ಪತಿ ಹರೀಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ.

ಹರೀಶ್ ಬೆಂಗಳೂರು ಉತ್ತರ ತಾಲ್ಲೂಕು ಚಿಕ್ಕಜಾಲದ ಮಾರಸಂದ್ರ ನಿವಾಸಿ ಎನ್ನಲಾಗಿದೆ. ಈತನ ವಿರುದ್ಧ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಚಂದ್ರಶೇಖರ್ ಪ್ರಕರಣ ದಾಖಲಿಸಿ ದೋಷಾರೋಪಣ ಪತ್ರ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸದ್ಯ ಮಧುಗಿರಿಯ 4 ನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಧಿಶರಾದ ತಾರಕೇಶ್ವರಗೌಡ ಪಾಟೀಲ್, ಕೊಲೆ ಆರೋಪಿ ಹರೀಶ್ ನಿಗೆ ಜೀವಾವಧಿ ಶಿಕ್ಷೆ ಹಾಗೂ 60 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ದಂಡದ ಹಣದಲ್ಲಿ 50 ಸಾವಿರವನ್ನ ಮೃತಳ ಗಾಯಿತ್ರಿ ತಾಯಿಗೆ ಪರಿಹಾರವಾಗಿ ನೀಡಲು ಆದೇಶಿಸಿದ್ದಾರೆ. ಸರಕಾರಿ ಅಭಿಯೋಜಕ ನಿರಂಜನಮೂರ್ತಿ ವಾದ ಮಂಡಿಸಿದ್ದರು.

ವರದಿ: ಮಹೇಶ್, ಟಿವಿ9 ತುಮಕೂರು

ಇದನ್ನೂ ಓದಿ: ಕೊವಿಡ್ ಸಾವಿನ ಸಂಖ್ಯೆಯಲ್ಲಿ ಮಹಾ ಎಡವಟ್ಟು ಬಯಲು ಮಾಡಿದ ಕೊಪ್ಪಳ ಜಿಲ್ಲಾಧಿಕಾರಿ

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್