AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಯಲ್ಲೇ ಮಹಿಳೆ ಜತೆ ರಾಸಲೀಲೆ ಕೇಸ್​: ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ತಮ್ಮ ಕಚೇರಿಯಲ್ಲಿ ಮಹಿಳೆಯೊಂದಿಗೆ ಅನೈತಿಕ ಕೃತ್ಯ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಇದೀಗ ಮಧುಗಿರಿ ಜೆಎಂಎಫ್‌ಸಿ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಸೋಮವಾರದವರೆಗೆ ಮಧುಗಿರಿ ಜೈಲಿನಲ್ಲಿರಿಸಿ, ನಂತರ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲು ಆದೇಶಿಸಲಾಗಿದೆ.

ಕಚೇರಿಯಲ್ಲೇ ಮಹಿಳೆ ಜತೆ ರಾಸಲೀಲೆ ಕೇಸ್​: ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ
ಕಚೇರಿಯಲ್ಲೇ ಮಹಿಳೆ ಜತೆ ರಾಸಲೀಲೆ ಕೇಸ್​: ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Jan 04, 2025 | 5:11 PM

Share

ತುಮಕೂರು, ಜನವರಿ 04: ಕಚೇರಿಯಲ್ಲಿ ಮಹಿಳೆ ಜೊತೆ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ (DySP) ರಾಮಚಂದ್ರಪ್ಪಗೆ ಒಟ್ಟು 14 ದಿನಗಳ ಕಾಲ ನ್ಯಾಯಾಂಗ ಬಂದನ ವಿಧಿಸಿ ಮಧುಗಿರಿ ಜೆಎಂಎಫ್​ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ. ಸೋಮವಾರದವರೆಗೂ ಮಧುಗಿರಿ ಜೈಲಿನಲ್ಲಿರುವ ಡಿವೈಎಸ್ ಪಿ ರಾಮಚಂದ್ರಪ್ಪ, ಆ ಬಳಿಕ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್​ ಮಾಡಲು ಆದೇಶಿಸಲಾಗಿದೆ.

ಜಿಲ್ಲೆಯ ಮಧುಗಿರಿ ಉಪವಿಭಾಗ ಡಿವೈಎಸ್ ಪಿ ಕಚೇರಿಗೆ ಪಾವಗಡ ಮೂಲದ ಮಹಿಳೆಯೊಬ್ಬರು ತಮ್ಮ ಜಮೀನಿನ ವ್ಯಾಜ್ಯ ವಿಚಾರಕ್ಕೆ ಮಧುಗಿರಿ ಡಿವೈಎಸ್​ಪಿ ರಾಮಚಂದ್ರಪ್ಪಗೆ ದೂರು ನೀಡಲು ಬಂದಿದ್ದರು. ಈ ವೇಳೆ ಡಿವೈಎಸ್​​ಪಿ ಆಕೆಯನ್ನ ಪುಸಲಾಯಿಸಿ ಕಚೇರಿಯಲ್ಲಿರುವ ಆ್ಯಂಟಿ ಚೇಂಬರ್​​ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಕೃತ್ಯ ಮೊಬೈಲ್​​ಯಲ್ಲಿ ಸೆರೆಯಾಗಿದ್ದು, ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ಇದನ್ನೂ ಓದಿ: ಕಚೇರಿಯಲ್ಲೇ ಮಹಿಳೆ ಜೊತೆ ಚಕ್ಕಂದ: ಅಮಾನತು ಬೆನ್ನಲ್ಲೇ ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್..!

ಯಾವಾಗ ತಮ್ಮ ಕಚೇರಿಯಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಮಾಡಿದರೋ ಡಿವೈಎಸ್​ಪಿ ವಿರುದ್ಧ ಸಾಕಷ್ಟು ಆಕ್ರೋಶ ಕೇಳಿಬಂತು. ಅಲ್ಲದೇ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡ ತುಮಕೂರು ಎಸ್​​ಪಿ ಅಶೋಕ್ ವೆಂಕಟ್ ರಿಪೋರ್ಟ್ ತರಿಸಿಕೊಂಡು ಮೇಲಾಧಿಕಾರಿಗಳಿಗೆ ಕಳಿಸಿದ್ದಾರೆ. ಕೂಡಲೇ ಸಂಜೆ ವೇಳೆಗೆ ಡಿಜಿ ಆ್ಯಂಡ್​ ಐಜಿಪಿ ಅಲೋಕ್ ಮೋಹನ್ ರಾಸಲಿಲೆ ಪ್ರಕರಣ ಕಂಡು ಡಿವೈಎಸ್​​ಪಿ ರಾಮಚಂದ್ರಪ್ಪರನ್ನ ಅಮಾನತು ಮಾಡಿದ್ದರು. ಇನ್ನೂ ಇದಾದ ಬಳಿಕ ನೊಂದ ಮಹಿಳೆ ನೀಡಿದ ದೂರಿನ ಮೇರೆಗೆ ಮನೆಯಲ್ಲಿಯೇ ಇದ್ದ ಡಿವೈಎಸ್​ಪಿ ರಾಮಚಂದ್ರಪ್ಪರನ್ನ ಮಧುಗಿರಿ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಕಚೇರಿಯಲ್ಲೇ ಮಹಿಳೆ ಜತೆ ರಾಸಲೀಲೆ: ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಡಿವೈಎಸ್​ಪಿ ಅಮಾನತು

ಅತ್ಯಾಚಾರ ಕೇಸ್ ಅಡಿ ದೂರು ದಾಖಲಿಸಿಕೊಂಡು ರಾಮಚಂದ್ರಪ್ಪರನ್ನ ಬಂಧಿಸಿ ಮಧುಗಿರಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಬಳಿಕ ಮೆಡಿಕಲ್​ಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮೆಡಿಕಲ್ ಚೆಕಪ್ ಮಾಡಿಸಿದ್ದಾರೆ. ಇನ್ನೂ ಇದಾದ ಬಳಿಕ ಮಧುಗಿರಿ ಜೆಎಂಎಫ್​ಸಿ ಕೋರ್ಟ್ ಜಡ್ಜ್ ‌ಬಳಿ ಹಾಜರುಪಡಿಸಿದ್ದರು. ಇದೀಗ ಮಧುಗಿರಿ ಜೆಎಂಎಫ್​ಸಿ ನ್ಯಾಯಾಲಯದಿಂದ 14 ದಿನ ನ್ಯಾಯಾಂಗ ಬಂಧನ ನೀಡ ಆದೇಶ ಹೊರಡಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ