AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಕೈದಿ ನೋಡಲು ಬಂದವರಿಂದ ಹಣ ವಸೂಲಿ, ಮಧುಗಿರಿ ಸಬ್ ಜೈಲ್ ಸೂಪರಿಂಟೆಂಡೆಂಟ್ ಲೋಕಾಯುಕ್ತ ಬಲೆಗೆ

ಇಂದು ಒಂದೇ ದಿನ ಇಬ್ಬರು ಅಧಿಕಾರಿಗಳು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಾದಾಮಿ ಬಿಇಒ ಕಚೇರಿಯ ಆಫೀಸ್ ಸೂಪರಿಂಟೆಂಡೆಂಟ್ ಆಗಿರುವ ವೆಂಕಟೇಶ್ ಇನಾಮದಾರ ಹಾಗೂ ಮಧುಗಿರಿ ಸಬ್ ಜೈಲಿನ ಜೈಲು ಸೂಪರಿಂಟೆಂಡೆಂಟ್ ಆಗಿರುವ ದೇವೇಂದ್ರ ಕೋಣಿ ಎಂಬುವವರು ಕೈದಿ ನೋಡಲು ಬಂದಿದ್ದ ವ್ಯಕ್ತಿ ಬಳಿ ಲಂಚ ಪಡಿಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.

ತುಮಕೂರು: ಕೈದಿ ನೋಡಲು ಬಂದವರಿಂದ ಹಣ ವಸೂಲಿ, ಮಧುಗಿರಿ ಸಬ್ ಜೈಲ್ ಸೂಪರಿಂಟೆಂಡೆಂಟ್ ಲೋಕಾಯುಕ್ತ ಬಲೆಗೆ
ಲೋಕಾಯುಕ್ತ ದಾಳಿ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 29, 2023 | 3:53 PM

Share

ತುಮಕೂರು, ಆ.29: ಇತ್ತೀಚೆಗಷ್ಟೇ ಹಾಸನ, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ನಡೆದ ಹಗರಣಗಳು ಬೆಳಕಿಗೆ ಬಂದಿತ್ತು. ಅಲ್ಲಿ ಹಣವೊಂದಿದ್ದರೆ, ಕೈದಿಗಳಿಗೆ ಎಲ್ಲವೂ ಸಫ್ಲೈ ಆಗುತ್ತಿತ್ತು. ಇದೀಗ ತುಮಕೂರು (Tumakuru) ಜಿಲ್ಲೆಯ ಮಧುಗಿರಿ ಸಬ್ ಜೈಲಿನ ಕರ್ಮಕಾಂಡ ಬೆಳಕಿಗೆ ಬಂದಿದೆ. ಹೌದು, ಜೈಲು ಸೂಪರಿಂಟೆಂಡೆಂಟ್ ದೇವೇಂದ್ರ ಕೋಣಿ ಎಂಬುವವರು ಕೈದಿ ನೋಡಲು ಬಂದಿದ್ದ ವ್ಯಕ್ತಿ ಬಳಿ ಲಂಚ ಪಡಿಯುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಪಡೆದ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಯನ್ನು ಹಿಡಿದಿದ್ದಾರೆ.

5 ಸಾವಿರ ಲಂಚ ಪಡೆಯುವಾಗ ಲೋಕಾ ಬಲೆಗೆ

ಕಳೆದ 5 ದಿನಗಳ ಹಿಂದೆಯಷ್ಟೇ ಜೈಲುಪಾಲಾಗಿದ್ದ ಆರೋಪಿ ಇಂತಿಯಾಜ್‌ ಅವರ ತಂದೆ ಅರ್ಬಾಜ್ ಅವರು ಜೈಲಿನಲ್ಲಿರುವ ಮಗನನ್ನು ನೋಡಲು ಬಂದಿದ್ದರು. ಈ ವೇಳೆ ಪ್ರತಿದಿನ ಜೈಲಿಗೆ ಬರುವಾಗ ಜೈಲ್ ಸೂಪರಿಂಟೆಂಡೆಂಟ್ ಲಂಚ ಪಡೆಯುತ್ತಿದ್ದರು. ಇದುವರೆಗೆ 10 ಸಾವಿರ ರೂಪಾಯಿ ಲಂಚ ಪಡೆದಿರುವ ದೇವೇಂದ್ರ ಕೋಣಿಯವರನ್ನು ಲೋಕಾಯುಕ್ತ DySP ಮಂಜುನಾಥ್ ಹಾಗೂ ಹರೀಶ್ ನೇತೃತ್ವದಲ್ಲಿ ದಾಳಿ ಮಾಡಿ, ಇಂದು (ಆ.29) 5 ಸಾವಿರ ಲಂಚ ಪಡೆಯುವಾಗ ರೆಡ್​ಹ್ಯಾಂಡ್​ ಆಗಿ ಲೋಕಾ ಬಲೆಗೆ ಬಿದ್ದಿದ್ದಾರೆ. ಇದೀಗ ಜೈಲ್ ಸೂಪರಿಂಟೆಂಡೆಂಟ್ ದೇವೇಂದ್ರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಬೆಂಗಳೂರು: ಅರಮನೆಯಂಥ ಮನೆ ಕಟ್ಟಿಸಿರುವ ಮಹದೇವಪುರ ವಲಯದ ಆರ್ ಐ ಲೋಕಾಯುಕ್ತ ದಾಳಿ ನಡೆದಿರದಿದ್ದರೆ ವಿಜಯ್ ಮಲ್ಯಗೆ ಸೆಡ್ಡು ಹೊಡೆಯುತ್ತಿದ್ದ!

ಬಿಇಒ ಕಚೇರಿಯ ಆಫೀಸ್ ಸೂಪರಿಂಟೆಂಡೆಂಟ್ ಲೋಕಾಯುಕ್ತ ಬಲೆಗೆ

ಬಾಗಲಕೋಟೆ: ಜಿಲ್ಲೆಯ ಬಾದಾಮಿ ಬಿಇಒ ಕಚೇರಿಯ ಆಫೀಸ್ ಸೂಪರಿಂಟೆಂಡೆಂಟ್ ಆಗಿರುವ ವೆಂಕಟೇಶ್ ಇನಾಮದಾರ ಎಂಬುವವರು ಹೈಸ್ಕೂಲ್ ನಿವೃತ್ತ ಶಿಕ್ಷಕ ಸತ್ಯಪ್ಪ ಕಾಮಾ ಅವರಿಗೆ ಸ್ಥಗಿತವಾದ ನಿವೃತ್ತಿ ವೇತನ ಬಿಲ್ ಪಾಸ್ ಮಾಡಲು 15 ಸಾವಿರ ಲಂಚಕ್ಕೆ‌ ಡಿಮ್ಯಾಂಡ್ ಮಾಡಿದ್ದರು. ಅದರಲ್ಲಿ 10 ಸಾವಿರ ಮೊದಲೇ ಫೋನ್​ ಪೇ ಮೂಲಕ ಹಾಕಿಸಿಕೊಂಡ ಸುಪರಿಂಟೆಂಡೆಂಟ್. ಇಂದು 5 ಸಾವಿರ ನಗದು ಪಡೆಯುವಾಗ ಲೋಕಾಯುಕ್ತ ಡಿವೈಎಸ್​ಪಿ ಪುಷ್ಪಲತಾ ನೇತೃತ್ವದಲ್ಲಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಸೀವೇಜ್ ವಾಟರ್ ಮ್ಯಾನೇಜ್ ಮೆಂಟ್ ಎಇಇ

ಬೆಂಗಳೂರು: ಬಿಬಿಎಂಪಿ ಚಾಮರಾಜಪೇಟೆಯ ಸೀವೇಜ್ ವಾಟರ್ ಮ್ಯಾನೇಜ್ ಮೆಂಟ್ ಎಇಇ ಆಗಿದ್ದ ಶಿವಣ್ಣ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೌದು, ಕಾಮಗಾರಿಯ ಪೆಂಡಿಂಗ್ ಬಿಲ್ ಬಿಡುಗಡೆಗಾಗಿ 50 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಣ್ಣ ಅವರು 10 ಸಾವಿರ ಲಂಚ  ಸ್ವೀಕಾರ ಮಾಡುವ ವೇಳೆ ಲೋಕಾಯುಕ್ತ ಅಧಿಕಾರಿಗಳಿಂದ ಟ್ರ್ಯಾಪ್  ಮಾಡಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Tue, 29 August 23

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ