AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಡಾ. ಮಂಜುನಾಥ್​ ಪರ ಪ್ರಚಾರ ಮಾಡಿದ ವ್ಯಕ್ತಿ ಮೇಲೆ ಹಲ್ಲೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ತೆರಳಿದ್ದ ವ್ಯಕ್ತಿಗೆ ಹಲ್ಲೆ ಮಾಡಿದ ಘಟನೆ ಇತ್ತೀಚೆಗೆ ತುಮಕೂರಿನಲ್ಲಿ ನಡೆದಿತ್ತು. ಇದೀಗ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಪರ ಪ್ರಚಾರ ಮಾಡಿದ ವ್ಯಕ್ತಿ ಮೇಲೆ ಹಲ್ಲೆ ಮಾಡಲಾಗಿದೆ.

ತುಮಕೂರು: ಡಾ. ಮಂಜುನಾಥ್​ ಪರ ಪ್ರಚಾರ ಮಾಡಿದ ವ್ಯಕ್ತಿ ಮೇಲೆ ಹಲ್ಲೆ
ಹಲ್ಲೆಗೊಳಗಾದ ಮಂಜುನಾಥ್ ಮತ್ತು ಹಲ್ಲೆ ಆರೋಪಿ ಬೋರೇಗೌಡ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: |

Updated on:Apr 11, 2024 | 8:08 AM

Share

ತುಮಕೂರು, ಏಪ್ರಿಲ್ 11: ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ (Dr. CN Manjunath) ಪರ ಪ್ರಚಾರ ನಡೆಸಿದ್ದಕ್ಕೆ ವ್ಯಕ್ತಿ ಒಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಅಂಚೆಪಾಳ್ಯದಲ್ಲಿ ಘಟನೆ ನಡೆದಿದೆ. ಕೆಂಪನಹಳ್ಳಿ ಗ್ರಾಮ ಪಂಚಾಯತಿ ಜೆಡಿಎಸ್ ಬೆಂಬಲಿತ ಸದಸ್ಯ ಮಂಜುನಾಥ್ ಎಂಬವರು ಹಲ್ಲೆಗೊಳಗಾದವರು.

ಕೆಂಪನಹಳ್ಳಿ ನಿವಾಸಿ ಬೋರೇಗೌಡ ಮತ್ತು ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಮಾತನಾಡಬೇಕೆಂದು ಮಂಜುನಾಥ್ ಅವರನ್ನು ಕರೆಸಿಕೊಂಡಿದ್ದ ಬೋರೇಗೌಡ ಮತ್ತು ಬೆಂಬಲಿಗರು, ಪಂಚಪಾಳ್ಯದ ಬಳಿ ಬರುತ್ತಿದ್ದಂತೆ ಚಾಕುವಿನಿಂದ ಇರಿದಿದ್ದಾರೆ. ಗಾಯಗೊಂಡಿರುವ ಮಂಜುನಾಥ್ ಅವರನ್ನು ಕುಣಿಗಲ್ ತಾಲೂಕು, ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಹೈ ವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ಪಕ್ಷದಿಂದ ಮೂರು ಬಾರಿಯ ಸಂಸದ ಡಿಕೆ ಸುರೇಶ್ ಅಭ್ಯರ್ಥಿಯಾಗಿದ್ದರೆ, ಬಿಜೆಪಿಯು ಪ್ರಖ್ಯಾತ ಹೃದಯ ರೋಗ ತಜ್ಞ ಡಾ. ಸಿಎನ್ ಮಂಜುನಾಥ್ ಅವರನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.

ಇದನ್ನೂ ಓದಿ: ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ಹೋಗಿದ್ದವನಿಗೆ ಚಾಕು ಇರಿತ, ಬಿಜೆಪಿಗರಿಂದ ಹಲ್ಲೆ ಆರೋಪ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ತೆರಳಿದ್ದ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ, ಬಿಜೆಪಿಯ ಮೂವರು ಕಾರ್ಯಕರ್ತರು ಹಲ್ಲೆ ಮಾಡಿ, ಬಳಿಕ ಚಾಕುವಿನಿಂದ ಇರಿದ ಘಟನೆ ಕುಣಿಗಲ್ ತಾಲ್ಲೂಕಿನ ನಡೇಮಾವಿನಪುರದಲ್ಲಿ ಇತ್ತೀಚೆಗೆ ನಡೆದಿತ್ತು. ಇದೀಗ ಮಂಜುನಾಥ್ ಪರ ಪ್ರಚಾರ ನಡೆಸಿದವರ ಮೇಲೆ ಹಲ್ಲೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:49 am, Thu, 11 April 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ