AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದ ದೊಡ್ಡಬಳ್ಳಾಪುರ ಮೂಲದ ವ್ಯಕ್ತಿ; ಮತ್ತೆ ಜೈಲು ಸೇರಿದ್ದು ಯಾಕೆ?

ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಕಳ್ಳನ ನಿಜ ಬಣ್ಣ ಬಯಲಾಗಿದೆ. ಸದ್ಯ ಆರೋಪಿಯ ಮೇಲೆ ಮಾಗಡಿ, ಕೆ.ಬಿ.ಕ್ರಾಸ್, ಕೋಳಾಲ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದ ದೊಡ್ಡಬಳ್ಳಾಪುರ ಮೂಲದ ವ್ಯಕ್ತಿ; ಮತ್ತೆ ಜೈಲು ಸೇರಿದ್ದು ಯಾಕೆ?
ಆರೋಪಿ ಆನಂದ್, ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on: Sep 21, 2021 | 8:50 AM

Share

ತುಮಕೂರು: ದೊಡ್ಡಬಳ್ಳಾಪುರ ಮೂಲದ ವ್ಯಕ್ತಿಯೊಬ್ಬ ಜೈಲಿನಿಂದ ಬಿಡುಗಡೆಗೊಂಡು ಮತ್ತೆ ಜೈಲು ಸೇರಿದ್ದಾನೆ. ಜೈಲಿನಿಂದ ಬಿಡುಗಡೆಯಾದ ಕೂಡಲೇ ಕಳ್ಳತನಕ್ಕೆ ಪ್ರಯತ್ನ ಮಾಡಿದ್ದ 35 ವರ್ಷದ ಆನಂದ್ ಎಂಬುವವನನ್ನು ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಆರು ತಿಂಗಳ ಹಿಂದೆ ದರೋಡೆ, ಕಳ್ಳತನ ಪ್ರಕರಣಗಳಲ್ಲಿ ಆನಂದ್ ಜೈಲು ಸೆರಿದ್ದ. ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದ. ಆದರೆ ಮತ್ತೆ ಕಳ್ಳತನಕ್ಕೆ ಹೊಂಚು ಹಾಕಿದ್ದ. ಕಳ್ಳತನಕ್ಕೆ ಪ್ರಯತ್ನ ನಡೆಸುತ್ತಿದ್ದಾಗ ಮಾರಕಾಸ್ತ್ರಗಳ ಸಮೇತ ಆರೋಪಿ ಆನಂದ್ ಸಿಕ್ಕಿಬಿದ್ದಿದ್ದಾನೆ.

ಪೊಲೀಸರ ಸಮಯ ಪ್ರಜ್ಞೆಯಿಂದ ಆರೋಪಿ ಆನಂದ್​ನ ನಿಜ ಬಣ್ಣ ಬಯಲಾಗಿದ್ದು, ತಡ ಮಾಡದೆ ಪೊಲೀಸರು ಜೈಲಿಗೆ ಬಿಟ್ಟು ಬಂದಿದ್ದಾರೆ. ಆನಂದ್ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಾವತ್ತೂರು ಕೋಳಾಲ ಬಳಿಯ ಮಾವತ್ತೂರು ಬಸ್ ಸ್ಟಾಂಡ್​ನಲ್ಲಿ ಕಳ್ಳತನಕ್ಕೆ ಸ್ಕೆಚ್ ಹಾಕುತ್ತಿದ್ದ. ಈ ವೇಳೆ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಕಳ್ಳನ ನಿಜ ಬಣ್ಣ ಬಯಲಾಗಿದೆ. ಸದ್ಯ ಆರೋಪಿಯ ಮೇಲೆ ಮಾಗಡಿ, ಕೆ.ಬಿ.ಕ್ರಾಸ್, ಕೋಳಾಲ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಜಪ್ತಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಬ್ಬನದಕೊಪ್ಪ ಗ್ರಾಮದ ಪುಟ್ಟಪ್ಪ ಮನೆಯಲ್ಲಿ ಅಬಕಾರಿ ಅಧಿಕಾರಿಗಳು ಗಾಂಜಾ ಜಪ್ತಿ ಮಾಡಿದ್ದಾರೆ. 330 ಗ್ರಾಂ ಗಾಂಜಾ ಜಪ್ತಿ ಮಾಡಿದ್ದು, ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಲಾಗಿದೆ.

ಇದನ್ನೂ ಓದಿ

Personal Loan: ವಯಕ್ತಿಕ ಸಾಲಕ್ಕೆ ಯಾವ ಬ್ಯಾಂಕ್​ನಲ್ಲಿ ಅಗ್ಗದ ಬಡ್ಡಿ ದರ? ಇಲ್ಲಿದೆ ಪರ್ಸನಲ್ ಲೋನ್ ಫುಲ್ ಡೀಟೇಲ್ಸ್

ಮೂಢನಂಬಿಕೆ: ಮಾಂತ್ರಿಕನ ಮಾತು ಕೇಳಿ ಮನೆಯಲ್ಲಿ ಬಾವಿ ತೋಡಿದ್ರು, ಸಾವಿರಾರು ರೂಪಾಯಿ ಕಳ್ಕೊಂಡು ಊರು ಬಿಟ್ರು

(man who was released on bail is back in jail)

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ