AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿ ಅಮಾನವೀಯ ಘಟನೆ: ಬರಿಗೈಲಿ ಮಲ ಬಾಚುವ ಪದ್ಧತಿ ಜೀವಂತ

ಬರಿಗೈಲಿ ಮಲ ಬಾಚುವ ಪದ್ಧತಿ ರಾಜ್ಯದಲ್ಲಿ ಇನ್ನೂ ಜೀವಂತವಿರುವುದು ಬಹಿರಂಗವಾಗಿದೆ. ಅದರಲ್ಲಿಯೂ ಗೃಹ ಸಚಿವ ಡಾ. ಜಿ ಪರಮೇಶ್ವರ ತವರು ಜಿಲ್ಲೆ ತುಮಕೂರಿನಲ್ಲಿಯೇ ಘಟನೆ ನಡೆದಿರುವುದು ಗೊತ್ತಾಗಿದೆ. ಈ ಸಂಬಂಧ ವಿಡಿಯೋ ಟಿವಿ9ಗೆ ಲಭ್ಯವಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಮಹೇಶ್ ಇ, ಭೂಮನಹಳ್ಳಿ
| Updated By: Ganapathi Sharma|

Updated on: Nov 07, 2024 | 2:40 PM

Share

ತುಮಕೂರು, ನವೆಂಬರ್ 7: ಗೃಹ ಸಚಿವ ಜಿ ಪರಮೇಶ್ವರ ಅವರ ವಿಧಾನಸಭಾ ಕ್ಷೇತ್ರದಲ್ಲೇ ಬರಿಗೈಲಿ ಮಲ ಬಾಚುವ ಪದ್ಧತಿ ಜೀವಂತ ಇರುವುದು ಗೊತ್ತಾಗಿದೆ. ತುಮಕೂರಿನ ಕೊರಟಗೆರೆ ಕೆಎಸ್​​ಆರ್​ಟಿಸಿ ಬಸ್ ನಿಲ್ದಾಣದ ಶೌಚಾಲಯದ ಪಿಟ್​​ನಿಂದ ಹೊರಬಂದಿದ್ದ ಮಲವನ್ನು ಬಾಚಿ ಎತ್ತಿಹಾಕಲು ಹಿಂದುಳಿದ ಸಮುದಾಯದವರ ಬಳಕೆ ಮಾಡಲಾಗಿದೆ. ಬರಿಗೈಯಲ್ಲಿ ಗುದ್ದಲಿ ಹಿಡಿದು ಮಲ ಸ್ವಚ್ಛಗೊಳಿಸುತ್ತಿದ್ದ ಬಾಲಕ ಹಾಗೂ ವ್ಯಕ್ತಿ ಬಳಿ ಆ ಬಗ್ಗೆ ಪ್ರಶ್ನಿಸುತ್ತಿದ್ದಂತೆಯೇ ಕೆಲಸ ಸ್ಥಗಿತಗೊಳಿಸುವಂತೆ ಅಧಿಕಾರಿ, ಸಿಬ್ಬಂದಿ ಸನ್ನೆ ಮೂಲಕ ತಿಳಿಸಿದ್ದಾರೆ. ಕೂಡಲೇ ಕೆಲಸ ಬಿಟ್ಟು ಬಾಲಕ ಹಾಗೂ ವ್ಯಕ್ತಿ ತೆರಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡದಂತೆ ಬಾಲಕನಿಗೆ ಸಿಬ್ಬಂದಿ ಸನ್ನೆ ಮಾಡುತ್ತಿದ್ದರು.

ಬಸ್ ನಿಲ್ದಾಣದ ಆವರಣದಲ್ಲಿರುವ ಪ್ರಯಾಣಿಕರ ಶೌಚಾಲಯದ ಪಿಟ್ ತುಂಬಿ ಫ್ಲಾಟ್ ಫಾರಂಗೆ ಹರಿದಿತ್ತು. ಪ್ರಯಾಣಿಕರು ದುರ್ನಾತದಲ್ಲೇ ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ನಿಲ್ದಾಣದ ಫ್ಲಾಟ್ ಫಾರಂಗೆ ಹರಿಯುತ್ತಿದ್ದ ಮಲ ಸ್ವಚ್ಛಗೊಳಿಸಲು ಬಾಲಕನ ಬಳಸಲಾಗಿದೆ. ಆ ಮೂಲಕ ಮಲ ಹೊರುವ ಪದ್ಧತಿ ನಿಷೇಧ ಹಾಗೂ ಬಾಲ ಕಾರ್ಮಿಕ ಪದ್ಧತಿ ನಿಷೇದ ಕಾನೂನು ಉಲ್ಲಂಘನೆಯಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ