AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿ ಅಮಾನವೀಯ ಘಟನೆ: ಬರಿಗೈಲಿ ಮಲ ಬಾಚುವ ಪದ್ಧತಿ ಜೀವಂತ

ಬರಿಗೈಲಿ ಮಲ ಬಾಚುವ ಪದ್ಧತಿ ರಾಜ್ಯದಲ್ಲಿ ಇನ್ನೂ ಜೀವಂತವಿರುವುದು ಬಹಿರಂಗವಾಗಿದೆ. ಅದರಲ್ಲಿಯೂ ಗೃಹ ಸಚಿವ ಡಾ. ಜಿ ಪರಮೇಶ್ವರ ತವರು ಜಿಲ್ಲೆ ತುಮಕೂರಿನಲ್ಲಿಯೇ ಘಟನೆ ನಡೆದಿರುವುದು ಗೊತ್ತಾಗಿದೆ. ಈ ಸಂಬಂಧ ವಿಡಿಯೋ ಟಿವಿ9ಗೆ ಲಭ್ಯವಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: |

Updated on: Nov 07, 2024 | 2:40 PM

Share

ತುಮಕೂರು, ನವೆಂಬರ್ 7: ಗೃಹ ಸಚಿವ ಜಿ ಪರಮೇಶ್ವರ ಅವರ ವಿಧಾನಸಭಾ ಕ್ಷೇತ್ರದಲ್ಲೇ ಬರಿಗೈಲಿ ಮಲ ಬಾಚುವ ಪದ್ಧತಿ ಜೀವಂತ ಇರುವುದು ಗೊತ್ತಾಗಿದೆ. ತುಮಕೂರಿನ ಕೊರಟಗೆರೆ ಕೆಎಸ್​​ಆರ್​ಟಿಸಿ ಬಸ್ ನಿಲ್ದಾಣದ ಶೌಚಾಲಯದ ಪಿಟ್​​ನಿಂದ ಹೊರಬಂದಿದ್ದ ಮಲವನ್ನು ಬಾಚಿ ಎತ್ತಿಹಾಕಲು ಹಿಂದುಳಿದ ಸಮುದಾಯದವರ ಬಳಕೆ ಮಾಡಲಾಗಿದೆ. ಬರಿಗೈಯಲ್ಲಿ ಗುದ್ದಲಿ ಹಿಡಿದು ಮಲ ಸ್ವಚ್ಛಗೊಳಿಸುತ್ತಿದ್ದ ಬಾಲಕ ಹಾಗೂ ವ್ಯಕ್ತಿ ಬಳಿ ಆ ಬಗ್ಗೆ ಪ್ರಶ್ನಿಸುತ್ತಿದ್ದಂತೆಯೇ ಕೆಲಸ ಸ್ಥಗಿತಗೊಳಿಸುವಂತೆ ಅಧಿಕಾರಿ, ಸಿಬ್ಬಂದಿ ಸನ್ನೆ ಮೂಲಕ ತಿಳಿಸಿದ್ದಾರೆ. ಕೂಡಲೇ ಕೆಲಸ ಬಿಟ್ಟು ಬಾಲಕ ಹಾಗೂ ವ್ಯಕ್ತಿ ತೆರಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡದಂತೆ ಬಾಲಕನಿಗೆ ಸಿಬ್ಬಂದಿ ಸನ್ನೆ ಮಾಡುತ್ತಿದ್ದರು.

ಬಸ್ ನಿಲ್ದಾಣದ ಆವರಣದಲ್ಲಿರುವ ಪ್ರಯಾಣಿಕರ ಶೌಚಾಲಯದ ಪಿಟ್ ತುಂಬಿ ಫ್ಲಾಟ್ ಫಾರಂಗೆ ಹರಿದಿತ್ತು. ಪ್ರಯಾಣಿಕರು ದುರ್ನಾತದಲ್ಲೇ ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ನಿಲ್ದಾಣದ ಫ್ಲಾಟ್ ಫಾರಂಗೆ ಹರಿಯುತ್ತಿದ್ದ ಮಲ ಸ್ವಚ್ಛಗೊಳಿಸಲು ಬಾಲಕನ ಬಳಸಲಾಗಿದೆ. ಆ ಮೂಲಕ ಮಲ ಹೊರುವ ಪದ್ಧತಿ ನಿಷೇಧ ಹಾಗೂ ಬಾಲ ಕಾರ್ಮಿಕ ಪದ್ಧತಿ ನಿಷೇದ ಕಾನೂನು ಉಲ್ಲಂಘನೆಯಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ನಾಗರ ಪಂಚಮಿಯಂದು ದುಂಡಯ್ಯ ಕಾರ್ಣಿಕ ನುಡಿ
ನಾಗರ ಪಂಚಮಿಯಂದು ದುಂಡಯ್ಯ ಕಾರ್ಣಿಕ ನುಡಿ
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ