AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿಯಲ್ಲಿ ವಿಧೇಯಕ ಮಂಡನೆ; ಹಿಂದಿನ ಧರ್ಮದಲ್ಲಿ ಪಡೆಯುತ್ತಿದ್ದ ಸವಲತ್ತು ನಿಲ್ಲಿಸುತ್ತೇವೆ- ಸಚಿವ ಮಾಧುಸ್ವಾಮಿ ಹೇಳಿಕೆ

ನಾವು ಎಲ್ಲೂ ಮತಾಂತರ ನಿಷೇಧ ಎಂದು ಕರೆದೇ ಇಲ್ಲ. ಒತ್ತಾಯ, ಆಮಿಷ, ಬಲವಂತದ ಮತಾಂತರ ತಡೆಯುವುದು ಕಾಯ್ದೆಯ ಉದ್ದೇಶ. ಸ್ವಯಂಪ್ರೇರಿತರಾಗಿ ಮತಾಂತರವಾಗುವುದಕ್ಕೆ ಅಡ್ಡಿಯಿಲ್ಲ.

ಜನವರಿಯಲ್ಲಿ ವಿಧೇಯಕ ಮಂಡನೆ; ಹಿಂದಿನ ಧರ್ಮದಲ್ಲಿ ಪಡೆಯುತ್ತಿದ್ದ ಸವಲತ್ತು ನಿಲ್ಲಿಸುತ್ತೇವೆ- ಸಚಿವ ಮಾಧುಸ್ವಾಮಿ ಹೇಳಿಕೆ
ಸಚಿವ ಮಾಧುಸ್ವಾಮಿ
TV9 Web
| Updated By: sandhya thejappa|

Updated on: Dec 25, 2021 | 12:56 PM

Share

ತುಮಕೂರು: ಈವರೆಗೆ ಮತಾಂತರ ಆದವರ ಮಾಹಿತಿ ದಾಖಲಾಗಬೇಕು ಎಂದು ತುಮಕೂರಿನಲ್ಲಿ ಹೇಳಿಕೆ ನೀಡಿದ ಕಾನೂನು ಸಚಿವ ಮಾಧುಸ್ವಾಮಿ (Madhuswamy), ಸರ್ಕಾರದ ದಾಖಲೆಗಳಲ್ಲಿ ಅಧಿಕೃತವಾಗಿ ದಾಖಲಾಗಬೇಕು. ಎಸ್​ಸಿ, ಎಸ್​ಟಿಯವರೇ ಮತಾಂತರ ಆಗಿದ್ದರೂ ದಾಖಲಾಗಬೇಕು. ಮತಾಂತರ ಮಾಹಿತಿ ಸರ್ವಿಸ್ ಹಿಸ್ಟರಿಗೆ ಎಂಟ್ರಿಯಾಗಬೇಕು. ಮಕ್ಕಳ ಬರ್ತ್ ಸರ್ಟಿಫಿಕೆಟ್, ಶಾಲಾ ದಾಖಲಾತಿಗಳಲ್ಲಿ ಮತಾಂತರವಾಗಿರುವ ಬಗ್ಗೆ ಮಾಹಿತಿ ದಾಖಲು ಮಾಡಬೇಕು ಎಂದು ತಿಳಿಸಿದ್ದಾರೆ. ಜೊತೆಗೆ ಈ ಹಿಂದಿನ ಧರ್ಮದಲ್ಲಿ ಪಡೆಯುತ್ತಿದ್ದ ಸವಲತ್ತು ನಿಲ್ಲಿಸುತ್ತೇವೆ ಅಂತ ಹೇಳಿದ್ದಾರೆ.

ಜನವರಿಯಲ್ಲಿ ವಿಧೇಯಕ ಮಂಡನೆ ಇನ್ನು ಮುಂದುವರಿದು ಮಾತನಾಡಿದ ಸಚಿವರು, ನಾವು ಎಲ್ಲೂ ಮತಾಂತರ ನಿಷೇಧ ಎಂದು ಕರೆದೇ ಇಲ್ಲ. ಒತ್ತಾಯ, ಆಮಿಷ, ಬಲವಂತದ ಮತಾಂತರ ತಡೆಯುವುದು ಕಾಯ್ದೆಯ ಉದ್ದೇಶ. ಸ್ವಯಂಪ್ರೇರಿತರಾಗಿ ಮತಾಂತರವಾಗುವುದಕ್ಕೆ ಅಡ್ಡಿಯಿಲ್ಲ. ವಿಧಾನ ಪರಿಷತ್​ನಲ್ಲಿಯೂ ವಿಧೇಯಕ ಮಂಡಿಸುತ್ತೇವೆ. ಜನವರಿಯಲ್ಲಿ ವಿಧೇಯಕ ಮಂಡಿಸುತ್ತೇವೆ ಅಂತ ತಿಳಿಸಿದ್ದಾರೆ.

ಮದುವೆ ಮಾಡಿಕೊಳ್ಳುತ್ತೇನೆ ಅಂತಾ ನಂಬಿಸಿ ಪ್ರೀತಿ ಮಾಡಿ, ಮತಾಂತರ ಮಾಡುವುದು ಕೂಡ ಅಪರಾಧ. ಮತಾಂತರ ಆದವರು ಎಸ್ಸಿ (SC) ಎಸ್ಟಿ ಆಗಿದ್ದರೇ (ST) ಮತಾಂತರ ಬಳಿಕ ಸರ್ಕಾರ ನೀಡುತ್ತಿರುವ ಸವಲತ್ತುಗಳನ್ನ ನಿಲ್ಲಿಸಲಾಗುತ್ತದೆ. ಅನಿವಾರ್ಯವಾಗಿ ಈ ಕಾನೂನು ತರಬೇಕಾಗಿತ್ತು. ಸಿದ್ದಗಂಗಾ ಶ್ರೀಗಳು ಕೂಡ ಅರ್ಜಿ ಕೊಟ್ಟಿದ್ದರು. ಮತಾಂತರ ನಿಷೇಧ ಆಗಬೇಕು ಅಂತಾ ಸಿದ್ದಗಂಗಾ ಶ್ರೀಗಳು ಲಾ ಕಮಿಷನ್ಗೆ ಅರ್ಜಿ ಕೊಟ್ಟಿದ್ದರು. ಆರ್ಎಸ್ಎಸ್ ಅರ್ಜಿ ನೀಡಿತ್ತು. ಜೊತೆಗೆ ಪ್ರಮುಖ ಸ್ವಾಮಿಜಿಗಳದ್ದು ಅರ್ಜಿ ಕಂಡು ಸಿದ್ದರಾಮಯ್ಯನವರು ಕರಡುಗೆ ಸಹಿ ಹಾಕಿದ್ದರು. ಎಲ್ಲೂ ನಾವು ಮತಾಂತರ ನಿಷೇಧ ಮಾಡಿಲ್ಲ. ತಪ್ಪು, ಅಕ್ರಮ, ಪ್ರಲೋಬನೆ, ಪ್ರಚೋದನೆ ನೀಡಿ ಅಮಾಯಕರನ್ನ ಮತಾಂತರ ಮಾಡಲು ತಪ್ಪಿಸಲು ಬಿಲ್ ತರಲಾಗಿದೆ. ಪರಿಷತ್​ನಲ್ಲಿ ಪಾಸ್ ಮಾಡುತ್ತೇವೆ ಅಂತ ತುಮಕೂರಿನಲ್ಲಿ ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ನಂದಿಗಿರಿಧಾಮದಲ್ಲಿ ಕ್ರಿಸ್​ಮಸ್​ ಆಚರಣೆಗೆ ಬ್ರೇಕ್​; ವೀಕೆಂಡ್​ನಲ್ಲಿ ಗಿರಿಧಾಮ ಬಂದ್ ಮಾಡಿದ ಹಿನ್ನಲೆ ಪ್ರವಾಸಿಗರ ಪರದಾಟ

Skin Care Tips: ವಯಸ್ಸಾದಂತೆ ಕಾಣುವ ಚರ್ಮದ ಆರೈಕೆಯ ಬಗ್ಗೆ ಗಮನವಿರಲಿ: ಯಾವ ವಯಸ್ಸಿನವರು ಯಾವ ರೀತಿಯ ಕ್ರಮಗಳನ್ನು ಪಾಲಿಸಬೇಕು? ಇಲ್ಲಿದೆ ಮಾಹಿತಿ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​