AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ವಿವಿಗೆ ಶಿವಕುಮಾರ ಸ್ವಾಮೀಜಿ ಹೆಸರು ಮರುನಾಮಕರಣಕ್ಕೆ ಸರ್ಕಾರಕ್ಕೆ ಸೋಮಣ್ಣ ಪತ್ರ

ತುಮಕೂರು ವಿಶ್ವವಿದ್ಯಾಲಯಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಹೆಸರು ಮರುನಾಮಕರಣ ಮಾಡುವಂತೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ವಿಶ್ವವಿದ್ಯಾಲಯಕ್ಕೆ ಸ್ವಾಮೀಜಿಗಳ ಹೆಸರಿಡುವುದರಿಂದ ಅವರ ಸ್ಮರಣೆ ಉಳಿಯುವುದಲ್ಲದೆ, ಯುವಜನರಿಗೆ ಸ್ಪೂರ್ತಿಯಾಗಲಿದೆ ಎಂದು ಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿದ್ದಾರೆ.

ತುಮಕೂರು ವಿವಿಗೆ ಶಿವಕುಮಾರ ಸ್ವಾಮೀಜಿ ಹೆಸರು ಮರುನಾಮಕರಣಕ್ಕೆ ಸರ್ಕಾರಕ್ಕೆ ಸೋಮಣ್ಣ ಪತ್ರ
ವಿ ಸೋಮಣ್ಣ
Jagadisha B
| Edited By: |

Updated on:Aug 23, 2025 | 9:31 PM

Share

ಬೆಂಗಳೂರು, ಆಗಸ್ಟ್​ 23: ತುಮಕೂರು ವಿಶ್ವವಿದ್ಯಾಲಯಕ್ಕೆ (Tumakuru University) ಡಾ. ಶಿವಕುಮಾರ ಸ್ವಾಮೀಜಿ (Shivakumar Swamiji) ಹೆಸರು ಮರು ನಾಮಕರಣ ಮಾಡುವಂತೆ ಕೇಂದ್ರ ಸಚಿವ ವಿ ಸೋಮಣ್ಣ (V Somanna) ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?

“ಕರ್ನಾಟಕ ರತ್ನ, ತ್ರಿವಿಧ ದಾಸೋಹಿಗಳು, ನಡೆದಾಡುವ ದೇವರು ಎಂದೆನಿಸಿದ ಸಿದ್ದಗಂಗಾ ಮಠದ ಪರಮಪೂಜ್ಯ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳು ರಾಜ್ಯದ ಮೂಲೆ ಮೂಲೆಗಳಿಂದ ಬರುವ ಎಲ್ಲಾ ವರ್ಗದ ಸಹಸ್ರಾರು ಕುಟುಂಬಗಳಿಗೆ ನೆರವಾಗಿ ಉಚಿತ ಶಿಕ್ಷಣ, ವಸತಿ ಮತ್ತು ದಾಸೋಹ ಕಲ್ಪಿಸುವುದರೊಂದಿಗೆ ಅವರೆಲ್ಲರೂ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಕಾರಣೀಭೂತರಾಗಿದ್ದಾರೆ. ಇಂತಹ ಶ್ರೇಷ್ಠ ಸಂತರ ಹೆಸರನ್ನು ತುಮಕೂರು ವಿಶ್ವವಿದ್ಯಾಲಯಕ್ಕೆ ನಾಮಕರಣ ಮಾಡುವುದರ ಮೂಲಕ ಪೂಜ್ಯರಿಗೆ ಗೌರವ ಸಲ್ಲಿಸಬೇಕಾಗಿದೆ”

ಇದನ್ನೂ ಓದಿ: ಸತ್ಯ ಎಷ್ಟೇ ಕಹಿಯಾದರೂ ಅದು ಸತ್ಯವೇ, ಸರ್ಕಾರಕ್ಕೆ ಅರ್ಥವಾಗಲಿಲ್ಲ: ಸೋಮಣ್ಣ

“ಆದುದರಿಂದ ತಾವುಗಳು ದಯಮಾಡಿ ತುಮಕೂರು ವಿಶ್ವವಿದ್ಯಾಲಯಕ್ಕೆ “ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿ” ವಿಶ್ವವಿದ್ಯಾಲಯ ಎಂದಯ ಮರುನಾಮಕರಣ ಮಾಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತುಮಕೂರು ಜಿಲ್ಲೆಯ ಮಹಾಜನತೆಯ ಪರವಾಗಿ ತಮ್ಮಲ್ಲಿ ಮನವಿ ಮಾಡುತ್ತೇನೆ” ಎಂದು ಪತ್ರ ಬರೆದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:30 pm, Sat, 23 August 25

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?