AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕ್ರೀಡಾಪಟುವಿಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಿ ಮತ್ತೊಮ್ಮೆ ಮಾನವೀಯತೆ ಮೆರೆದ ಶಾಸಕ ಡಾ ರಂಗನಾಥ್

ಮಂಡಿ ನೋವಿನಿಂದ ಬಳಲುತ್ತಿದ್ದ ಮಹಿಳಾ ಕ್ರೀಡಾಪಟುವಿಗೆ ಉಚಿತವಾಗಿ ಖುದ್ದಾಗಿ ತಾವೇ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಶಾಸಕ ಡಾ. ರಂಗನಾಥ್​ ಅವರು ಮತ್ತೊಮ್ಮೆ ಮಾನವೀಯತೆಯನ್ನು ಮೆರೆದಿದ್ದಾರೆ. ರಂಗನಾಥ್ ತಂಡ ಮಾಡಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಭವ್ಯಾ ಕುಟುಂಬ ಶಾಸಕರಿಗೆ ಕೃತಜ್ಞತೆಯನ್ನು ಸಲ್ಲಿಸಿದೆ.

ಮಹಿಳಾ ಕ್ರೀಡಾಪಟುವಿಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಿ ಮತ್ತೊಮ್ಮೆ ಮಾನವೀಯತೆ ಮೆರೆದ ಶಾಸಕ ಡಾ ರಂಗನಾಥ್
ಶಾಸಕ ಡಾ ರಂಗನಾಥ್
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಆಯೇಷಾ ಬಾನು

Updated on: Oct 22, 2023 | 2:29 PM

ತುಮಕೂರು, ಅ.22: ಕುಣಿಗಲ್​ ಕಾಂಗ್ರೆಸ್​ ಶಾಸಕ ಡಾ. ರಂಗನಾಥ್ (MLA Dr Ranganath)​ ಅವರು ಉಚಿತ ಶಸ್ತ್ರಚಿಕಿತ್ಸೆಗಳನ್ನು ಮಾಡಿ ಅನೇಕರ ಬಾಳಿಗೆ ಬೆಳಕಾಗಿದ್ದಾರೆ. ಈಗ ಮತ್ತೊಮ್ಮೆ ಉಚಿತ ಶಸ್ತ್ರಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಮಂಡಿ ನೋವಿನಿಂದ ಬಳಲುತ್ತಿದ್ದ ಮಹಿಳಾ ಕ್ರೀಡಾಪಟುವಿಗೆ ಉಚಿತವಾಗಿ ಖುದ್ದಾಗಿ ತಾವೇ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಶಾಸಕ ಡಾ. ರಂಗನಾಥ್​ ಅವರು ಮತ್ತೊಮ್ಮೆ ಮಾನವೀಯತೆಯನ್ನು ಮೆರೆದಿದ್ದಾರೆ.

ಕುಣಿಗಲ್ ನಿವಾಸಿ ರಗ್ಬಿ ಆಟಗಾರ್ತಿಯಾಗಿರುವ ಭವ್ಯ ಅವರಿಗೆ ಮಂಡಿ ನೋವಿನ ಚಿಕಿತ್ಸೆಯ ಅಗತ್ಯವಿತ್ತು. ಬಡತನ ಹಿನ್ನೆಲೆ ಶಸ್ತ್ರಚಿಕಿತ್ಸೆಗೆ ಹಣ ಒದಗಿಸಲು ಕುಟುಂಬ ಸಂಕಷ್ಟ ಎದುರಿಸುತ್ತಿತ್ತು. ಈ ವಿಚಾರ ಶಾಸಕರ ಗಮನಕ್ಕೆ ಬಂದ ಕೂಡಲೇ, ಮಂಡಿ ನೋವಿನಿಂದ ಬಳಲುತ್ತಿದ್ದ ಭವ್ಯಗೆ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಸ್ವತಃ ಶಾಸಕ ಡಾ ರಂಗನಾಥ್ ಅವರೇ ಉಚಿತವಾಗಿ ಶಸ್ತ್ರಚಿಕಿತ್ಸೆ‌ ಮಾಡಿದ್ದಾರೆ.

ರಂಗನಾಥ್ ತಂಡ ಮಾಡಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಭವ್ಯಾ ಕುಟುಂಬ ಶಾಸಕರಿಗೆ ಕೃತಜ್ಞತೆಯನ್ನು ಸಲ್ಲಿಸಿದೆ. ಶಾಸಕ ರಂಗನಾಥ್ ಅವರು ಈ ಹಿಂದೆ ತನ್ನ ಕ್ಷೇತ್ರದ ಮೂವರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದರು. ಶಾಸಕ ಡಾ ರಂಗನಾಥ್ ಕಾರ್ಯ ವೈಖರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.‘

ಇದನ್ನೂ ಓದಿ: Dr Ranganath: ಮತ್ತೋರ್ವ ಬಡ ವ್ಯಕ್ತಿಗೆ ಉಚಿತ ಆಪರೇಷನ್ ಮಾಡಿ​ ಜನ ಮನ ಗೆದ್ದ ಕುಣಿಗಲ್ ಕಾಂಗ್ರೆಸ್​ ಶಾಸಕ

ಮೂಲತಃ ವೈದ್ಯರಾದ ಡಾ.ರಂಗನಾಥ್​ ಅವರು ಕಾಂಗ್ರೆಸ್ ಪಕ್ಷದಿಂದ ಗೆದ್ದು ಶಾಸಕರಾದ ಬಳಿಕವೂ ತಮ್ಮ ಕ್ಷೇತ್ರದ ಹಲವರಿಗೆ ಉಚಿತ ಚಿಕಿತ್ಸೆ ನೀಡುತ್ತಾ ಬಂದಿದ್ದಾರೆ. ಕೊರೊನಾ ಸಮಯದಲ್ಲೂ ಸಂಕಷ್ಟ ಎದುರಿಸುತ್ತಿದ್ದ ಅನೇಕರಿಗೆ ಶಾಸಕ ಡಾ.ರಂಗನಾಥ್ ಚಿಕಿತ್ಸೆ ನೀಡಿ ಮನವೀಯತೆ ಮೆರೆದಿದ್ದರು. ಈ ಹಿಂದೆ ತಮ್ಮ ಕ್ಷೇತ್ರದ ಮೂವರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ಕುಣಿಗಲ್​ ತಾಲೂಕು ಹುತ್ರಿದುರ್ಗ ಹೋಬಳಿಯ ಕಲ್ಲನಾಯಕನಹಳ್ಳಿಯ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡಿದ್ದರು. ಅದರಲ್ಲಿ ಓರ್ವನಿಗೆ ಗಂಭೀರ ಗಾಯವಾಗಿತ್ತು. ಮಾರ್ಗಮಧ್ಯೆ ಅಪಘಾತದಲ್ಲಿ ಗಾಯಗೊಂಡವರನ್ನು ಕಂಡ ಶಾಸಕ ಡಾ.ರಂಗನಾಥ್, ಗಾಯಾಳನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ಕಳಿಸಿ ತಾವೂ ಆಸ್ಪತ್ರೆಗೆ ತೆರಳಿ ತಾವೇ ಖುದ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ್ದಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!