AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TB Jayachandra: ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದ ಶಾಸಕ ಟಿಬಿ ಜಯಚಂದ್ರ

ಕಳೆದ 2 ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಶಾಸಕ ಟಿ.ಬಿ ಜಯಚಂದ್ರ ರೈತರ ಹಗರಣದ ವಿಚಾರವಾಗಿ ರೈತರ ಜೊತೆ ಚರ್ಚೆ ಮಾಡಿದ್ದಾರೆ. ಆದರೆ ಇದೀಗ ಶಾಸಕ ಜಯಚಂದ್ರಗೆ ಬೆದರಿಕೆ ಕರೆಗಳು ಹೆಚ್ಚಾಗಿದ್ದು, ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದಿದ್ದಾರೆ.  

TB Jayachandra: ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದ ಶಾಸಕ ಟಿಬಿ ಜಯಚಂದ್ರ
ಕಾಂಗ್ರೆಸ್‌ನ ಹಿರಿಯ ಶಾಸಕ ಟಿ.ಬಿ.ಜಯಚಂದ್ರ
Sunil MH
| Edited By: |

Updated on:Jul 28, 2023 | 5:35 PM

Share

ತುಮಕೂರು, ಜುಲೈ 28: ನೈಸ್ ಸಂಸ್ಥೆ ಅಕ್ರಮದ ಬಗ್ಗೆ ರಿಪೋರ್ಟ್ ನೀಡಿದ ಬೆನ್ನಲ್ಲೇ ರೈತರಂತೆ ಕರೆ ಮಾಡಿ ಜಿಲ್ಲೆಯ ಶಿರಾ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ (TB Jayachandra) ಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ. ರೈತರ ಹಗರಣದ ವಿಚಾರವಾಗಿ ಕಳೆದ 2 ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಜಯಚಂದ್ರ, ಈ ವೇಳೆ ರೈತರ ಜೊತೆ ಚರ್ಚೆ ಮಾಡಿದ್ದರು. ಭೇಟಿ ಬಳಿಕ ಇದೀಗ ಶಾಸಕ ಜಯಚಂದ್ರಗೆ ಬೆದರಿಕೆ ಕರೆಗಳು ಹೆಚ್ಚಾಗಿವೆ.

ಈ ಕುರಿತಾಗಿ ಬೆಂಗಳೂರಿನಲ್ಲಿ ಟಿವಿ9ಗೆ ಶಾಸಕ ಟಿ.ಬಿ.ಜಯಚಂದ್ರ ಪ್ರತಿಕ್ರಿಯಿಸಿದ್ದು, ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದಿದ್ದಾರೆ. ನೈಸ್ ಸಂಸ್ಥೆಯ ಅಕ್ರಮದ ಬಗ್ಗೆ ನಾನು ರಿಪೋರ್ಟ್ ನೀಡಿದ್ದೆ. ಸಾವಿರಾರು ಎಕರೆ ಸರ್ಕಾರಿ, ಖಾಸಗಿ ರೈತರ ಜಮೀನು ಕಬಳಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಶಾಸಕರ ಅಸಮಾಧಾನದ ಪತ್ರ ಹರಿದು ಹಾಕಿದ ಸಿದ್ದರಾಮಯ್ಯ, ಕಿಚಾಯಿಸಿದ ಬಿಜೆಪಿ

ರೈತರು ಆಹ್ವಾನಿಸಿದ್ದರಿಂದ ಬಿಡದಿಗೆ ಹೋಗಿದ್ದೆ. ಅವರನ್ನು ಭೇಟಿ ಮಾಡಿ ಬಂದ ಬಳಿಕ ಬೆದರಿಕೆ ಕರೆ ಶುರುವಾಗಿದೆ. ನೀವು ಈ ಕ್ಷೇತ್ರದಲ್ಲಿ ಎಲೆಕ್ಷನ್​ಗೆ ನಿಲ್ಲಬೇಕಾ. ನಿಮಗೂ ಇದಕ್ಕೂ ಏನು ಸಂಬಂಧ. ಯಾಕೆ ಬರ್ತಿರಾ ಅಂತ ಕೇಳುತ್ತಿದ್ದರು.

ಇದನ್ನೂ ಓದಿ: Siddaramaiah: ಚುನಾವಣಾ ತಕರಾರು ಅರ್ಜಿ; ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ನಾನು ಸಾರ್ವಜನಿಕ ಜೀವನದಲ್ಲಿ 45 ವರ್ಷಗಳಿಂದ ಇದ್ದೇನೆ. ಇದಕ್ಕೆಲ್ಲ ಹೆದರಲ್ಲ ಎಂದು ಹೇಳಿದ್ದೇನೆ ಎಂದರು. ಕೂಡಲೇ ಸರ್ಕಾರ ರೈತರ ಹಿತಾಸಕ್ತಿಯನ್ನ ಗಮನದಲ್ಲಿಟ್ಟುಕೊಂಡು ಈ ರಿಪೋರ್ಟ್ ಅಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Fri, 28 July 23

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು