AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TB Jayachandra: ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದ ಶಾಸಕ ಟಿಬಿ ಜಯಚಂದ್ರ

ಕಳೆದ 2 ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಶಾಸಕ ಟಿ.ಬಿ ಜಯಚಂದ್ರ ರೈತರ ಹಗರಣದ ವಿಚಾರವಾಗಿ ರೈತರ ಜೊತೆ ಚರ್ಚೆ ಮಾಡಿದ್ದಾರೆ. ಆದರೆ ಇದೀಗ ಶಾಸಕ ಜಯಚಂದ್ರಗೆ ಬೆದರಿಕೆ ಕರೆಗಳು ಹೆಚ್ಚಾಗಿದ್ದು, ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದಿದ್ದಾರೆ.  

TB Jayachandra: ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದ ಶಾಸಕ ಟಿಬಿ ಜಯಚಂದ್ರ
ಕಾಂಗ್ರೆಸ್‌ನ ಹಿರಿಯ ಶಾಸಕ ಟಿ.ಬಿ.ಜಯಚಂದ್ರ
ಸುನಿಲ್​ ಎಮ್​ ಹೆಚ್​
| Edited By: |

Updated on:Jul 28, 2023 | 5:35 PM

Share

ತುಮಕೂರು, ಜುಲೈ 28: ನೈಸ್ ಸಂಸ್ಥೆ ಅಕ್ರಮದ ಬಗ್ಗೆ ರಿಪೋರ್ಟ್ ನೀಡಿದ ಬೆನ್ನಲ್ಲೇ ರೈತರಂತೆ ಕರೆ ಮಾಡಿ ಜಿಲ್ಲೆಯ ಶಿರಾ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ (TB Jayachandra) ಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ. ರೈತರ ಹಗರಣದ ವಿಚಾರವಾಗಿ ಕಳೆದ 2 ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಜಯಚಂದ್ರ, ಈ ವೇಳೆ ರೈತರ ಜೊತೆ ಚರ್ಚೆ ಮಾಡಿದ್ದರು. ಭೇಟಿ ಬಳಿಕ ಇದೀಗ ಶಾಸಕ ಜಯಚಂದ್ರಗೆ ಬೆದರಿಕೆ ಕರೆಗಳು ಹೆಚ್ಚಾಗಿವೆ.

ಈ ಕುರಿತಾಗಿ ಬೆಂಗಳೂರಿನಲ್ಲಿ ಟಿವಿ9ಗೆ ಶಾಸಕ ಟಿ.ಬಿ.ಜಯಚಂದ್ರ ಪ್ರತಿಕ್ರಿಯಿಸಿದ್ದು, ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದಿದ್ದಾರೆ. ನೈಸ್ ಸಂಸ್ಥೆಯ ಅಕ್ರಮದ ಬಗ್ಗೆ ನಾನು ರಿಪೋರ್ಟ್ ನೀಡಿದ್ದೆ. ಸಾವಿರಾರು ಎಕರೆ ಸರ್ಕಾರಿ, ಖಾಸಗಿ ರೈತರ ಜಮೀನು ಕಬಳಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಶಾಸಕರ ಅಸಮಾಧಾನದ ಪತ್ರ ಹರಿದು ಹಾಕಿದ ಸಿದ್ದರಾಮಯ್ಯ, ಕಿಚಾಯಿಸಿದ ಬಿಜೆಪಿ

ರೈತರು ಆಹ್ವಾನಿಸಿದ್ದರಿಂದ ಬಿಡದಿಗೆ ಹೋಗಿದ್ದೆ. ಅವರನ್ನು ಭೇಟಿ ಮಾಡಿ ಬಂದ ಬಳಿಕ ಬೆದರಿಕೆ ಕರೆ ಶುರುವಾಗಿದೆ. ನೀವು ಈ ಕ್ಷೇತ್ರದಲ್ಲಿ ಎಲೆಕ್ಷನ್​ಗೆ ನಿಲ್ಲಬೇಕಾ. ನಿಮಗೂ ಇದಕ್ಕೂ ಏನು ಸಂಬಂಧ. ಯಾಕೆ ಬರ್ತಿರಾ ಅಂತ ಕೇಳುತ್ತಿದ್ದರು.

ಇದನ್ನೂ ಓದಿ: Siddaramaiah: ಚುನಾವಣಾ ತಕರಾರು ಅರ್ಜಿ; ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ನಾನು ಸಾರ್ವಜನಿಕ ಜೀವನದಲ್ಲಿ 45 ವರ್ಷಗಳಿಂದ ಇದ್ದೇನೆ. ಇದಕ್ಕೆಲ್ಲ ಹೆದರಲ್ಲ ಎಂದು ಹೇಳಿದ್ದೇನೆ ಎಂದರು. ಕೂಡಲೇ ಸರ್ಕಾರ ರೈತರ ಹಿತಾಸಕ್ತಿಯನ್ನ ಗಮನದಲ್ಲಿಟ್ಟುಕೊಂಡು ಈ ರಿಪೋರ್ಟ್ ಅಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Fri, 28 July 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ