AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TB Jayachandra: ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದ ಶಾಸಕ ಟಿಬಿ ಜಯಚಂದ್ರ

ಕಳೆದ 2 ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಶಾಸಕ ಟಿ.ಬಿ ಜಯಚಂದ್ರ ರೈತರ ಹಗರಣದ ವಿಚಾರವಾಗಿ ರೈತರ ಜೊತೆ ಚರ್ಚೆ ಮಾಡಿದ್ದಾರೆ. ಆದರೆ ಇದೀಗ ಶಾಸಕ ಜಯಚಂದ್ರಗೆ ಬೆದರಿಕೆ ಕರೆಗಳು ಹೆಚ್ಚಾಗಿದ್ದು, ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದಿದ್ದಾರೆ.  

TB Jayachandra: ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದ ಶಾಸಕ ಟಿಬಿ ಜಯಚಂದ್ರ
ಕಾಂಗ್ರೆಸ್‌ನ ಹಿರಿಯ ಶಾಸಕ ಟಿ.ಬಿ.ಜಯಚಂದ್ರ
Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on:Jul 28, 2023 | 5:35 PM

ತುಮಕೂರು, ಜುಲೈ 28: ನೈಸ್ ಸಂಸ್ಥೆ ಅಕ್ರಮದ ಬಗ್ಗೆ ರಿಪೋರ್ಟ್ ನೀಡಿದ ಬೆನ್ನಲ್ಲೇ ರೈತರಂತೆ ಕರೆ ಮಾಡಿ ಜಿಲ್ಲೆಯ ಶಿರಾ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ (TB Jayachandra) ಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ. ರೈತರ ಹಗರಣದ ವಿಚಾರವಾಗಿ ಕಳೆದ 2 ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಜಯಚಂದ್ರ, ಈ ವೇಳೆ ರೈತರ ಜೊತೆ ಚರ್ಚೆ ಮಾಡಿದ್ದರು. ಭೇಟಿ ಬಳಿಕ ಇದೀಗ ಶಾಸಕ ಜಯಚಂದ್ರಗೆ ಬೆದರಿಕೆ ಕರೆಗಳು ಹೆಚ್ಚಾಗಿವೆ.

ಈ ಕುರಿತಾಗಿ ಬೆಂಗಳೂರಿನಲ್ಲಿ ಟಿವಿ9ಗೆ ಶಾಸಕ ಟಿ.ಬಿ.ಜಯಚಂದ್ರ ಪ್ರತಿಕ್ರಿಯಿಸಿದ್ದು, ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದಿದ್ದಾರೆ. ನೈಸ್ ಸಂಸ್ಥೆಯ ಅಕ್ರಮದ ಬಗ್ಗೆ ನಾನು ರಿಪೋರ್ಟ್ ನೀಡಿದ್ದೆ. ಸಾವಿರಾರು ಎಕರೆ ಸರ್ಕಾರಿ, ಖಾಸಗಿ ರೈತರ ಜಮೀನು ಕಬಳಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಶಾಸಕರ ಅಸಮಾಧಾನದ ಪತ್ರ ಹರಿದು ಹಾಕಿದ ಸಿದ್ದರಾಮಯ್ಯ, ಕಿಚಾಯಿಸಿದ ಬಿಜೆಪಿ

ರೈತರು ಆಹ್ವಾನಿಸಿದ್ದರಿಂದ ಬಿಡದಿಗೆ ಹೋಗಿದ್ದೆ. ಅವರನ್ನು ಭೇಟಿ ಮಾಡಿ ಬಂದ ಬಳಿಕ ಬೆದರಿಕೆ ಕರೆ ಶುರುವಾಗಿದೆ. ನೀವು ಈ ಕ್ಷೇತ್ರದಲ್ಲಿ ಎಲೆಕ್ಷನ್​ಗೆ ನಿಲ್ಲಬೇಕಾ. ನಿಮಗೂ ಇದಕ್ಕೂ ಏನು ಸಂಬಂಧ. ಯಾಕೆ ಬರ್ತಿರಾ ಅಂತ ಕೇಳುತ್ತಿದ್ದರು.

ಇದನ್ನೂ ಓದಿ: Siddaramaiah: ಚುನಾವಣಾ ತಕರಾರು ಅರ್ಜಿ; ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ನಾನು ಸಾರ್ವಜನಿಕ ಜೀವನದಲ್ಲಿ 45 ವರ್ಷಗಳಿಂದ ಇದ್ದೇನೆ. ಇದಕ್ಕೆಲ್ಲ ಹೆದರಲ್ಲ ಎಂದು ಹೇಳಿದ್ದೇನೆ ಎಂದರು. ಕೂಡಲೇ ಸರ್ಕಾರ ರೈತರ ಹಿತಾಸಕ್ತಿಯನ್ನ ಗಮನದಲ್ಲಿಟ್ಟುಕೊಂಡು ಈ ರಿಪೋರ್ಟ್ ಅಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Fri, 28 July 23

ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?
ಸರ್ಕಾರದ ಸಾಧನಾ ಸಮಾವೇಶ ನನಗೆ ಸಂಬಂಧಿಸಿದ ವಿಷಯವಲ್ಲ: ಯಡಿಯೂರಪ್ಪ
ಸರ್ಕಾರದ ಸಾಧನಾ ಸಮಾವೇಶ ನನಗೆ ಸಂಬಂಧಿಸಿದ ವಿಷಯವಲ್ಲ: ಯಡಿಯೂರಪ್ಪ
ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?