AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TB Jayachandra: ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದ ಶಾಸಕ ಟಿಬಿ ಜಯಚಂದ್ರ

ಕಳೆದ 2 ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಶಾಸಕ ಟಿ.ಬಿ ಜಯಚಂದ್ರ ರೈತರ ಹಗರಣದ ವಿಚಾರವಾಗಿ ರೈತರ ಜೊತೆ ಚರ್ಚೆ ಮಾಡಿದ್ದಾರೆ. ಆದರೆ ಇದೀಗ ಶಾಸಕ ಜಯಚಂದ್ರಗೆ ಬೆದರಿಕೆ ಕರೆಗಳು ಹೆಚ್ಚಾಗಿದ್ದು, ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದಿದ್ದಾರೆ.  

TB Jayachandra: ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದ ಶಾಸಕ ಟಿಬಿ ಜಯಚಂದ್ರ
ಕಾಂಗ್ರೆಸ್‌ನ ಹಿರಿಯ ಶಾಸಕ ಟಿ.ಬಿ.ಜಯಚಂದ್ರ
ಸುನಿಲ್​ ಎಮ್​ ಹೆಚ್​
| Edited By: |

Updated on:Jul 28, 2023 | 5:35 PM

Share

ತುಮಕೂರು, ಜುಲೈ 28: ನೈಸ್ ಸಂಸ್ಥೆ ಅಕ್ರಮದ ಬಗ್ಗೆ ರಿಪೋರ್ಟ್ ನೀಡಿದ ಬೆನ್ನಲ್ಲೇ ರೈತರಂತೆ ಕರೆ ಮಾಡಿ ಜಿಲ್ಲೆಯ ಶಿರಾ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ (TB Jayachandra) ಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ. ರೈತರ ಹಗರಣದ ವಿಚಾರವಾಗಿ ಕಳೆದ 2 ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಜಯಚಂದ್ರ, ಈ ವೇಳೆ ರೈತರ ಜೊತೆ ಚರ್ಚೆ ಮಾಡಿದ್ದರು. ಭೇಟಿ ಬಳಿಕ ಇದೀಗ ಶಾಸಕ ಜಯಚಂದ್ರಗೆ ಬೆದರಿಕೆ ಕರೆಗಳು ಹೆಚ್ಚಾಗಿವೆ.

ಈ ಕುರಿತಾಗಿ ಬೆಂಗಳೂರಿನಲ್ಲಿ ಟಿವಿ9ಗೆ ಶಾಸಕ ಟಿ.ಬಿ.ಜಯಚಂದ್ರ ಪ್ರತಿಕ್ರಿಯಿಸಿದ್ದು, ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದಿದ್ದಾರೆ. ನೈಸ್ ಸಂಸ್ಥೆಯ ಅಕ್ರಮದ ಬಗ್ಗೆ ನಾನು ರಿಪೋರ್ಟ್ ನೀಡಿದ್ದೆ. ಸಾವಿರಾರು ಎಕರೆ ಸರ್ಕಾರಿ, ಖಾಸಗಿ ರೈತರ ಜಮೀನು ಕಬಳಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಶಾಸಕರ ಅಸಮಾಧಾನದ ಪತ್ರ ಹರಿದು ಹಾಕಿದ ಸಿದ್ದರಾಮಯ್ಯ, ಕಿಚಾಯಿಸಿದ ಬಿಜೆಪಿ

ರೈತರು ಆಹ್ವಾನಿಸಿದ್ದರಿಂದ ಬಿಡದಿಗೆ ಹೋಗಿದ್ದೆ. ಅವರನ್ನು ಭೇಟಿ ಮಾಡಿ ಬಂದ ಬಳಿಕ ಬೆದರಿಕೆ ಕರೆ ಶುರುವಾಗಿದೆ. ನೀವು ಈ ಕ್ಷೇತ್ರದಲ್ಲಿ ಎಲೆಕ್ಷನ್​ಗೆ ನಿಲ್ಲಬೇಕಾ. ನಿಮಗೂ ಇದಕ್ಕೂ ಏನು ಸಂಬಂಧ. ಯಾಕೆ ಬರ್ತಿರಾ ಅಂತ ಕೇಳುತ್ತಿದ್ದರು.

ಇದನ್ನೂ ಓದಿ: Siddaramaiah: ಚುನಾವಣಾ ತಕರಾರು ಅರ್ಜಿ; ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ನಾನು ಸಾರ್ವಜನಿಕ ಜೀವನದಲ್ಲಿ 45 ವರ್ಷಗಳಿಂದ ಇದ್ದೇನೆ. ಇದಕ್ಕೆಲ್ಲ ಹೆದರಲ್ಲ ಎಂದು ಹೇಳಿದ್ದೇನೆ ಎಂದರು. ಕೂಡಲೇ ಸರ್ಕಾರ ರೈತರ ಹಿತಾಸಕ್ತಿಯನ್ನ ಗಮನದಲ್ಲಿಟ್ಟುಕೊಂಡು ಈ ರಿಪೋರ್ಟ್ ಅಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Fri, 28 July 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!