AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TB Jayachandra: ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದ ಶಾಸಕ ಟಿಬಿ ಜಯಚಂದ್ರ

ಕಳೆದ 2 ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಶಾಸಕ ಟಿ.ಬಿ ಜಯಚಂದ್ರ ರೈತರ ಹಗರಣದ ವಿಚಾರವಾಗಿ ರೈತರ ಜೊತೆ ಚರ್ಚೆ ಮಾಡಿದ್ದಾರೆ. ಆದರೆ ಇದೀಗ ಶಾಸಕ ಜಯಚಂದ್ರಗೆ ಬೆದರಿಕೆ ಕರೆಗಳು ಹೆಚ್ಚಾಗಿದ್ದು, ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದಿದ್ದಾರೆ.  

TB Jayachandra: ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದ ಶಾಸಕ ಟಿಬಿ ಜಯಚಂದ್ರ
ಕಾಂಗ್ರೆಸ್‌ನ ಹಿರಿಯ ಶಾಸಕ ಟಿ.ಬಿ.ಜಯಚಂದ್ರ
Sunil MH
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 28, 2023 | 5:35 PM

Share

ತುಮಕೂರು, ಜುಲೈ 28: ನೈಸ್ ಸಂಸ್ಥೆ ಅಕ್ರಮದ ಬಗ್ಗೆ ರಿಪೋರ್ಟ್ ನೀಡಿದ ಬೆನ್ನಲ್ಲೇ ರೈತರಂತೆ ಕರೆ ಮಾಡಿ ಜಿಲ್ಲೆಯ ಶಿರಾ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ (TB Jayachandra) ಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ. ರೈತರ ಹಗರಣದ ವಿಚಾರವಾಗಿ ಕಳೆದ 2 ದಿನಗಳ ಹಿಂದೆ ರಾಮನಗರಕ್ಕೆ ಭೇಟಿ ನೀಡಿದ್ದ ಜಯಚಂದ್ರ, ಈ ವೇಳೆ ರೈತರ ಜೊತೆ ಚರ್ಚೆ ಮಾಡಿದ್ದರು. ಭೇಟಿ ಬಳಿಕ ಇದೀಗ ಶಾಸಕ ಜಯಚಂದ್ರಗೆ ಬೆದರಿಕೆ ಕರೆಗಳು ಹೆಚ್ಚಾಗಿವೆ.

ಈ ಕುರಿತಾಗಿ ಬೆಂಗಳೂರಿನಲ್ಲಿ ಟಿವಿ9ಗೆ ಶಾಸಕ ಟಿ.ಬಿ.ಜಯಚಂದ್ರ ಪ್ರತಿಕ್ರಿಯಿಸಿದ್ದು, ನನಗೆ ಬೆದರಿಕೆ ಕರೆ ಬಂದಿದ್ದು ನಿಜ ಎಂದಿದ್ದಾರೆ. ನೈಸ್ ಸಂಸ್ಥೆಯ ಅಕ್ರಮದ ಬಗ್ಗೆ ನಾನು ರಿಪೋರ್ಟ್ ನೀಡಿದ್ದೆ. ಸಾವಿರಾರು ಎಕರೆ ಸರ್ಕಾರಿ, ಖಾಸಗಿ ರೈತರ ಜಮೀನು ಕಬಳಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಶಾಸಕರ ಅಸಮಾಧಾನದ ಪತ್ರ ಹರಿದು ಹಾಕಿದ ಸಿದ್ದರಾಮಯ್ಯ, ಕಿಚಾಯಿಸಿದ ಬಿಜೆಪಿ

ರೈತರು ಆಹ್ವಾನಿಸಿದ್ದರಿಂದ ಬಿಡದಿಗೆ ಹೋಗಿದ್ದೆ. ಅವರನ್ನು ಭೇಟಿ ಮಾಡಿ ಬಂದ ಬಳಿಕ ಬೆದರಿಕೆ ಕರೆ ಶುರುವಾಗಿದೆ. ನೀವು ಈ ಕ್ಷೇತ್ರದಲ್ಲಿ ಎಲೆಕ್ಷನ್​ಗೆ ನಿಲ್ಲಬೇಕಾ. ನಿಮಗೂ ಇದಕ್ಕೂ ಏನು ಸಂಬಂಧ. ಯಾಕೆ ಬರ್ತಿರಾ ಅಂತ ಕೇಳುತ್ತಿದ್ದರು.

ಇದನ್ನೂ ಓದಿ: Siddaramaiah: ಚುನಾವಣಾ ತಕರಾರು ಅರ್ಜಿ; ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ನಾನು ಸಾರ್ವಜನಿಕ ಜೀವನದಲ್ಲಿ 45 ವರ್ಷಗಳಿಂದ ಇದ್ದೇನೆ. ಇದಕ್ಕೆಲ್ಲ ಹೆದರಲ್ಲ ಎಂದು ಹೇಳಿದ್ದೇನೆ ಎಂದರು. ಕೂಡಲೇ ಸರ್ಕಾರ ರೈತರ ಹಿತಾಸಕ್ತಿಯನ್ನ ಗಮನದಲ್ಲಿಟ್ಟುಕೊಂಡು ಈ ರಿಪೋರ್ಟ್ ಅಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Fri, 28 July 23

ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವ್ಯಾಪಾರ ಅಧಿಕವಾಗಲು ಏನು ಮಾಡಬೇಕು? ವಿಡಿಯೋ ನೋಡಿ
ವ್ಯಾಪಾರ ಅಧಿಕವಾಗಲು ಏನು ಮಾಡಬೇಕು? ವಿಡಿಯೋ ನೋಡಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ